ಉಡುಪಿ: ಯಾವುದೇ ಸುರಕ್ಷತೆ ವಹಿಸದೆ ಮರ ಕಡಿಯುತ್ತಿದ್ದ ವೇಳೆ , ವ್ಯಕ್ತಿಯ ಮೈಮೇಲೆ ಮರ ಬಿದ್ದು ಮೃತ ಪಟ್ಟ ಘಟನೆ ಮಂಗಳವಾರ ಉಡುಪಿ ನಗರದಲ್ಲಿ ನಡೆದಿದೆ.
ಬಾಗಲಕೋಟೆ ಮೂಲದ, ಪ್ರಸ್ತುತ ಉಡುಪಿ ಬೀಡಿನಗುಡ್ಡೆ ನಿವಾಸಿಯಾಗಿರುವ ಸುರೇಶ ಸಂದಿಮನಿ (32) ಎಂಬವರು ಆ ಮೃತ ವ್ಯಕ್ತಿ.
ಸುರೇಶ ಸಂದಿಮನಿಯವರನ್ನು, ಸುನಿಲ್ ಎಂಬಾತ ಕೆಲಸಕ್ಕೆಂದು ಕರೆದುಕೊಂಡು ಹೋಗಿದ್ದು, ಕಲ್ಸಂಕ ಬಳಿ ನಿಧಿ ಹೋಮ್ಸ್ಎಂಬ ಮನೆಯ ಹಿಂಭಾಗದಲ್ಲಿರುವ ಜಾಗದಲ್ಲಿ ಬೆಳೆದಿರುವ ಮರಗಳನ್ನು ಆಪಾದಿತರಾದ ಸುನೀಲ್ ಮತ್ತು ಜಾಗದ ಮಾಲಕರಾದ ಪ್ರಭಾಕರ ಸಾಲ್ಯಾನ್ರವರು ಯಾವುದೇ ಸುರಕ್ಷಾ ಕವಚವನ್ನು ನೀಡದೇ ನಿರ್ಲಕ್ಷ ವಹಿಸಿ ಮರ ಕಡಿಸಿದ್ದು, ಮಧ್ಯಾಹ್ನದ ವೇಳೆಗೆ ಕಡಿಯುತ್ತಿದ್ದ ಮರವು ತುಂಡಾಗಿ ಅವರ ಮೈಮೇಲೆ ಬಿದ್ದು, ಹೊಟ್ಟೆಗೆ ಸೊಂಟಕ್ಕೆ ಹಾಗೂ ಕಾಲುಗಳಿಗೆ ತೀವ್ರ ಗಾಯವಾಗಿ ಅಜ್ಜರಕಾಡು ಆಸ್ಪತ್ರೆಯಲ್ಲಿ ಮೃತಪಟ್ಟಿರುತ್ತಾರೆ. ಯಾವುದೇ ಸುರಕ್ಷತೆ ನೀಡದೆ ನಿರ್ಲಕ್ಷ್ಯ ವಹಿಸಿದ್ದು ಕಾರಣವಾಗಿದೆ ಎಂದು ದೂರಿನಲ್ಲಿ ದಾಖಲಿಸಿದ್ದಾರೆ.
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…