Featured

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ ವತಿಯಿಂದ ಉಡುಪಿ ಶೋರೂಮ್‌ನಲ್ಲಿ ಮೇ ೨ರಿಂದ ಮೇ ೧೦ರವರೆಗೆ ಹಮ್ಮಿಕೊಳ್ಳಲಾಗಿರುವ ಡೈಮಂಡ್ಸ್

ಆಭರಣಗಳ ವಿಶೇಷ ಪ್ರದರ್ಶನಕ್ಕೆ ಶನಿವಾರ ಚಾಲನೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾದ ರಶ್ಮಿತಾ ಶೆಟ್ಟಿ ಹಾಗೂ ರಚಿತಾ ಶೆಟ್ಟಿ ನೂತನ ಆಭರಣಗಳನ್ನು ಅನಾವರಣಗೊಳಿಸುವ ಮೂಲಕ ಪ್ರದರ್ಶನವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ರಶ್ಮಿತಾ ಶೆಟ್ಟಿ, ಮಲಬಾರ್ ಗೋಲ್ಡ್‌ನಲ್ಲಿ ಅತ್ಯುತ್ತಮ ಆಭರಣಗಳ ವಿಶಾಲ ಸಂಗ್ರಹವಿದ್ದು, ಇಲ್ಲಿನ ಸಿಬ್ಬಂದಿ ಗ್ರಾಹಕ ಸ್ನೇಹಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇಲ್ಲಿ ಪ್ರದರ್ಶಿಸಲಾದ ಡೈಮಂಡ್ಸ್ ಆಭರಣಗಳು ಪ್ರತಿಯೊಬ್ಬರಿಗೂ ಆಕರ್ಷಕವಾಗಿವೆ ಎಂದು ಹೇಳಿದರು. ಪ್ರದರ್ಶನ ಯಶಸ್ವಿಯಾಗಲಿ ಎಂದು ಹಾರೈಸಿದರು.

ರಚಿತಾ ಶೆಟ್ಟಿ ಮಾತನಾಡಿ, ತಾನು ಕಳೆದ ೧೨ ವರ್ಷಗಳಿಂದ ಮಲಬಾರ್ ಗೋಲ್ಡ್‌ನ ಗ್ರಾಹಕಿಯಾಗಿದ್ದು, ಇಲ್ಲಿನ ವಿಭಿನ್ನ ಸಂಗ್ರಹಗಳನ್ನು ಹೊಂದಿದ್ದೇನೆ. ಇಲ್ಲಿ ದೊರೆಯುವ ಪ್ರತಿಯೊಂದು ಆಭರಣವೂ ಅಪೂರ್ವ ಮತ್ತು ವಿಶಿಷ್ಟವಾಗಿವೆ ಎಂದು ಅಭಿಪ್ರಾಯಪಟ್ಟರು.

ಇದೇ ಸಂದರ್ಭದಲ್ಲಿ ರಶ್ಮಿತಾ ಶೆಟ್ಟಿ ಮತ್ತು ರಚಿತಾ ಶೆಟ್ಟಿ ಅವರು ತನ್ವಿಕಾ ಬ್ರ್ಯಾಂಡ್‌ನ ನೂತನ ಚಿನ್ನಾಭರಣ ಸಂಗ್ರಹವನ್ನು ಅನಾವರಣಗೊಳಿಸಿದರು. ಚಿನ್ನಾಭರಣಗಳ ಕುರಿತು ಸಿಬ್ಬಂದಿ ಸಂದೀಪ್ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಉಡುಪಿ ಶಾಖಾ ಮುಖ್ಯಸ್ಥರಾದ ವಿಜಯ್ ಕುಮಾರ್ ಡಿ , ವ್ಯವಸ್ಥಾಪಕರಾದ ಪುರಂದರ ತಿಂಗಳಾಯ, ಹರೀಶ್ ಎಂ.ಜಿ,ಮಾರುಕಟ್ಟೆ ಉಸ್ತುವಾರಿ ತಂಝೀಮ್ ಶಿರ್ವ ಎಚ್.ಆರ್ ,ದಿವ್ಯಾ ಮತ್ತಿತರರು ಉಪಸ್ಥಿತರಿದ್ದರು. ವಿಘ್ನೇಶ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

15 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

16 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

17 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

18 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

18 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

18 hours ago