ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮಂಗಳವಾರ ಹಮ್ಮಿಕೊಳ್ಳಲಾದ ಹಸಿವು ಮುಕ್ತ ದಿನಾಚರಣೆಯನ್ನು ಶಂಕರಪುರ ದ್ವಾರಕಮಯಿ ಮಠದ ಶ್ರೀಈಶ್ವರ ಗುರೂಜಿ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಇಂದು ಲಕ್ಷಾಂತರ ಜನ ಒಂದು ಹೊತ್ತು ಊಟಕ್ಕಿಲ್ಲದವರು ನಮ್ಮ ದೇಶದಲ್ಲಿ ಇದ್ದಾರೆ. ಇಂತಹವರ ಹಸಿವು ನೀಗಿಸುವುದು ಬಹಳ ದೊಡ್ಡ ಪುಣ್ಯದ ಕೆಲಸ. ಅಂತಹ ಸಮಾಜಮುಖಿ ಕಾರ್ಯವನ್ನು ಮಲಬಾರ್ ಗೋಲ್ಡ್ ಮಾಡುತ್ತಿರುವುದು ಮಾದರಿ ಎನಿಸಿದೆ ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಸಾಮಾಜಿಕ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ವಿಶು ಶೆಟ್ಟಿ ಅಂಬಲಪಾಡಿ, ನಮ್ಮ ನಾಡ ಒಕ್ಕೂಟದ ಕರ್ನಾಟಕ ಪರ್ಯಾವರಣ ಸಂರಕ್ಷಣಾ ಸಮಿತಿಯ ಅಧ್ಯಕ್ಷ ಶೇಕ್ ವಾಹೀದ್ ದಾವೂದ್ ಮಾತನಾಡಿದರು.
ನಮ್ಮ ನಾಡ ಒಕ್ಕೂಟದ ರಾಜ್ಯಾಧ್ಯಕ್ಷ ಸಲೀಂ, ವಕೀಲ ರಫೀಕ್ ಖಾನ್, ಮಲಬಾರ್ ಗೋಲ್ಡ್ ಉಡುಪಿ ಶಾಖೆಯ ಸ್ಟೋರ್ ಸೇಲ್ಸ್ ಮೆನೇಜರ್ ಮುಸ್ತಫಾ ಎ.ಕೆ., ಸ್ಟೋರ್ ಮೆನೇಜರ್ ಪುರಂದರ ತಿಂಗಳಾಯ, ಜಿಆರ್ಎಂ ರಾಘವೇಂದ್ರ ನಾಯಕ್, ಮಾರುಕಟ್ಟೆ ವ್ಯವಸ್ಥಾಪಕ ತಂಝಿಮ್ ಶಿರ್ವ ಉಪಸ್ಥಿತರಿದ್ದರು. ಸಿಬ್ಬಂದಿ ಯದು ಕೃಷ್ಣ ಪ್ರಾಸ್ತಾವಿಕವಾಗಿ ಮಾತನಾಡಿದರು. ವ್ನಿೇಶ್ ಸ್ವಾಗತಿಸಿ ವಂದಿಸಿ ಕಾರ್ಯಕ್ರಮ ನಿರೂಪಿಸಿದರು
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…