Featured

ಉಡುಪಿ ಮಲಬಾರ್ ಗೋಲ್ಡ್‌ನಿಂದ ರಕ್ತದಾನ ಶಿಬಿರ- ರಕ್ತದಾನಿಗಳಿಗೆ ಸನ್ಮಾನ – Vishwanews24

ಉಡುಪಿ ಮಲಬಾರ್ ಗೋಲ್ಡ್‌ನಿಂದ ರಕ್ತದಾನ ಶಿಬಿರ- ರಕ್ತದಾನಿಗಳಿಗೆ ಸನ್ಮಾನ

ಉಡುಪಿ,: ಉಡುಪಿ ಜಿಲ್ಲೆಯಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡುವುದರಿಂದ ಇದು ರಕ್ತದಾನಿಗಳ ಜಿಲ್ಲೆಯಾಗಿ ಮೂಡಿಬಂದಿದೆ. ಈ ಮೂಲಕ ಇಲ್ಲಿನ ರಕ್ತದಾನಿಗಳು ಬೇರೆಯವರಿಗೆ ಪ್ರೇರಣೆಯಾಗಿದ್ದಾರೆ ಎಂದು ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ್ ಉಡುಪ ಹೇಳಿದ್ದಾರೆ.

ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಇದರ 10ನೇ ವಾರ್ಷಿಕೋತ್ಸವದ ಪ್ರಯುಕ್ತ ಉಡುಪಿ ಜಿಲ್ಲಾಸ್ಪತ್ರೆಯ ಸಹಯೋಗದೊಂದಿಗೆ ರವಿವಾರ ಮಲಬಾರ್ ಗೋಲ್ಡ್ ಉಡುಪಿ ಶಾಖೆಯಲ್ಲಿ ಹಮ್ಮಿಕೊಳ್ಳಲಾದ ಹುಬ್ಬಳ್ಳಿ ಶಾಖಾ ವ್ಯವಸ್ಥಾಪಕ ದಿ. ಶಾಶಂಕ್ ಎಕ್ಬೋಟೆ ರವರ ಸ್ಮರಣಾರ್ಥ ರಕ್ತದಾನ ಶಿಬಿರ ಹಾಗೂ ರಕ್ತದಾನಿಗಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತಿದ್ದರು.

ಹೆರಿಗೆ ಸಂದರ್ಭದಲ್ಲಿ ಹೆಚ್ಚಿನ ರಕ್ತದ ಅಗತ್ಯ ಇರುವುದರಿಂದ ಗರ್ಭಿಣಿಯರ ಭಯವನ್ನು ದೂರ ಮಾಡುವ ಕಾರ್ಯ ಗಳನ್ನು ರಕ್ತದಾನಿಗಳು ಮಾಡುತ್ತಿದ್ದಾರೆ. ಈ ಮೂಲಕ ರಕ್ತದಾನಿಗಳು ಇನ್ನೊಬ್ಬರ ಬದುಕಿನ ಆಶಾಕಿರಣ ಆಗಿದ್ದಾರೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಹಲವು ಬಾರಿ ರಕ್ತದಾನ ಮಾಡಿದ ರಕ್ತದಾನಿಗಳಾದ ರಾಘವೇಂದ್ರ ಪ್ರಭು ಕರ್ವಾಲು, ಮುಹಮ್ಮದ್ ಶರೀಫ್, ಮಹೇಶ್ ಪೂಜಾರಿ ಹೂಡೆ, ಅಜ್ಮಲ್ ಅಸಾದಿ, ಮುನೀರ್ ಕಲ್ಮಾಡಿ, ಡಾ.ಚರಿಷ್ಮಾ ಶೆಟ್ಟಿ, ರಾಮ್ ಅಜೆಕಾರು, ದಿವಾಕರ್ ಎನ್.ಖಾರ್ವಿ, ದೇವದಾಸ್ ಪಾಟ್ಕರ್, ರೋವಿನ್ ಪಾಲನ್ ಅವರನ್ನು ಸನ್ಮಾನಿಸಲಾಯಿತು.

ಉಡುಪಿ ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರದ ಮುಖ್ಯಸ್ಥೆ ಡಾ.ವೀಣಾ ಕುಮಾರಿ, ಹೋಪ್ ಇಂಡಿಯಾ ಫೌಂಡೇಶನ್‌ನ ಅನ್ಸಾರ್ ಅಹ್ಮದ್, ನಗರಸಭೆ ಮಾಜಿ ಸದಸ್ಯ ಶ್ಯಾಮ್‌ಪ್ರಸಾದ್ ಕುಡ್ವ, ಜಿಪಂ ಮಾಜಿ ಸದಸ್ಯೆ ಗೀತಾಂಜಲಿ ಸುವರ್ಣ, ಸಂಜೆ ಪ್ರಭಾ ಪತ್ರಿಕೆಯ ಸಂಪಾದ ವೆಂಕಟೇಶ್ ಪೈ ಮುಖ್ಯ ಅತಿಥಿಗಳಾಗಿದ್ದರು.

ಮಲಬಾರ್ ಗೋಲ್ಡ್ ಉಡುಪಿ ಶಾಖೆಯ ಮುಖ್ಯಸ್ಥ ಹಫೀಝ್ ರೆಹಮಾನ್, ಸ್ಟೋರ್ ಮೆನೇಜರ್ ಪುರಂದರ ತಿಂಗಳಾಯ, ಗೆಸ್ಟ್ ರಿಲೇಶನ್ ಮೆನೇಜರ್ ರಾಘವೇಂದ್ರ ನಾಯಕ್, ಮಾರ್ಕೆಟಿಂಗ್ ಮೆನೇಜರ್ ತಂಝೀಮ್ ಶಿರ್ವ, ಸಿಬ್ಬಂದಿ ವರ್ಗ, ಗ್ರಾಹಕರು ಉಪಸ್ಥಿತರಿದ್ದರು. ಸಿಬ್ಬಂದಿ ವಿಘ್ನೇಶ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

6 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

6 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago