ಉಡುಪಿ : ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಇದರ ೧೩ನೇ ವಾರ್ಷಿಕೋತ್ಸವದ ಪ್ರಯುಕ್ತ ಉಡುಪಿ ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರದ ಸಹಯೋಗದೊಂದಿಗೆ ರಕ್ತದಾನ ಶಿಬಿರ ಹಾಗೂ ರಕ್ತದಾನಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಶನಿವಾರ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಕೇಕ್ ಕತ್ತರಿಸುವ ಮೂಲಕ ಉದ್ಘಾಟಿಸಿದ ಉಡುಪಿ ಅಭಯ ಹಸ್ತ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷ, ರಕ್ತದ ಆಪತ್ಭಾಂಧವ ಸತೀಶ್ ಸಾಲ್ಯಾನ್ ಮಾತನಾಡಿ, ಉಡುಪಿ ಜಿಲ್ಲೆಯಲ್ಲಿ ಪ್ರಸ್ತುತ ೪೦೦೦೦ಯುನಿಟ್ ರಕ್ತದ ಕೊರತೆ ಇದೆ. ಕೆಲವೊಂದು ಕಾಯಿಲೆಗಳಿಗೆ ಪ್ರತಿ ತಿಂಗಳಿಗೆ ರಕ್ತ ಬೇಕಾ ಗುತ್ತದೆ. ಈ ನಿಟ್ಟಿನಲ್ಲಿ ರಕ್ತದಾನ ಶಿಬಿರ ಹಮ್ಮಿಕೊಳ್ಳುವುದರ ಜೊತೆಗೆ ಅದರ ಬಗ್ಗೆ ಅರಿವು ಮೂಡಿಸುವ ಕಾರ್ಯ ಕೂಡ ಮಾಡಬೇಕು ಎಂದರು.
ರಕ್ತದಾನ ಎಂಬುದು ಬಹಳಷ್ಟು ಪವಿತ್ರವಾದ ಕಾರ್ಯ. ಹುಟ್ಟು ಹಬ್ಬಗಳನ್ನು ರಕ್ತದಾನ ಮಾಡುವ ಮೂಲಕ ಆಚರಿಸುವುದರಿಂದ ರಕ್ತದ ಕೊರತೆಯನ್ನು ನಿಗೀಸಬಹುದು. ಹಣ ಇರುವವರು ಶ್ರೇಷ್ಠ ಅಲ್ಲ. ಬದಲು ರಕ್ತದಾನ ಮಾಡುವವರೇ ನಿಜವಾದ ಶ್ರೇಷ್ಠ ವ್ಯಕ್ತಿಗಳು ಎಂದು ಅವರು ಅಭಿಪ್ರಾಯ ಪಟ್ಟರು.
ಮುಖ್ಯ ಅತಿಥಿಯಾಗಿ ನ್ಯಾಯವಾದಿ ಹಬೀಬ್ ಅಲಿ ಖಾದರ್ ಮಾತನಾಡಿ, ರಕ್ತದಾನ ಎಂಬುದು ಶ್ರೇಷ್ಠ ಮಾನವೀಯ ಸೇವೆಯಾಗಿದೆ. ರಕ್ತವನ್ನು ಯಾವುದೇ ಫ್ಯಾಕ್ಟರಿಯಿಂದ ತಯಾರಿಸಲು ಸಾಧ್ಯವಿಲ್ಲ. ಆದುದರಿಂದ ಮನುಷ್ಯರೇ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಲು ಮುಂದಾಬೇಕು. ಇದರಿಂದ ರಕ್ತದ ಕೊರತೆಯನ್ನು ನಿಗೀಸಬಹುದು ಎಂದು ಹೇಳಿದರು.
ಉಡುಪಿ ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರದ ಡಾ.ನಿಕೇತಾ ರಕ್ತದಾನದ ಮಹತ್ವದ ಕುರಿತು ಮಾಹಿತಿ ನೀಡಿ, ರಕ್ತದಾನ ಮಾಡುವುದರಿಂದ ಒಬ್ಬರ ಜೀವ ಅಲ್ಲ, ಒಟ್ಟು ಮೂವರ ಜೀವವನ್ನು ಉಳಿಸಬಹುದಾಗಿದೆ. ೧೮ವರ್ಷ ಮೇಲ್ಪಟ್ಟವರು ೬೦ವರ್ಷ ಪ್ರಾಯದವರೆಗೂ ರಕ್ತದಾನ ಮಾಡಬಹುದು. ಆರು ತಿಂಗಳಿಗೊಮ್ಮೆ ರಕ್ತದಾನ ಮಾಡುವವರು ೬೫ವರ್ಷಗಳವರೆಗೂ ರಕ್ತ ದಾನ ಮಾಡಬಹುದಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ರಕ್ತದಾನಿಗಳಾದ ರಾಕೇಶ್ ಬಂಗೇರ ಪಲಿಮಾರು, ರೋಯ್ಸ್ ಉದ್ಯಾವರ, ಬದ್ರುದ್ದೀನ್ ಎಚ್.ಹೆಜಮಾಡಿ, ರಫೀಕ್ ಕಲ್ಯಾಣಪುರ ಹಾಗೂ ಉದಯ ಕರ್ಕೇರ ಪಿತ್ರೋಡಿ ಅವರನ್ನು ಸನ್ಮಾನಿಸ ಲಾಯಿತು.
ಅಧ್ಯಕ್ಷತೆಯನ್ನು ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖಾ ಮುಖ್ಯಸ್ಥ ವಿಜಯ ಕುಮಾರ್ ವಹಿಸಿದ್ದರು. ಸಾಮಾಜಿಕ ಕಾರ್ಯಕರ್ತೆ ವಿನುತಾ ಕಿರಣ್, ಮಂಗಳೂರು ಶಾಖಾ ಮುಖ್ಯಸ್ಥ ಹಫೀಝ್ ರೆಹಮಾನ್, ವ್ಯವಸ್ಥಾಪಕರಾದ ಪುರಂದರ ತಿಂಗಳಾಯ, ಮುಸ್ತಪಾ ಎ.ಕೆ., ಮಾರುಕಟ್ಟೆ ವ್ಯವಸ್ಥಾಪಕ ತಂಝೀಮ್ ಶಿರ್ವ ಉಪಸ್ಥಿತರಿದ್ದರು.
ಸಿಬ್ಬಂದಿ ದಿವ್ಯಾ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಘ್ನೇಶ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಶಿಬಿರದಲ್ಲಿ ಹಲವು ಮಂದಿ ಪಾಲ್ಗೊಂಡು ರಕ್ತದಾನ ಮಾಡಿದರು.
ಶಿರ್ವ: ಸಬ್ ಇನ್ಸ್ಪೆಕ್ಟರ್ ಹೆಸರಿನಲ್ಲಿ ಕರೆ ಮಾಡಿ 11 ಲಕ್ಷ ರೂ. ವಂಚನೆ ಶಿರ್ವ: ಅಪರಿಚಿತ ವ್ಯಕ್ತಿಗಳು ಮುಂಬಯಿಯ ಸಬ್…
ಸರ್ಕಾರದಿಂದ ಹಂಚಿಕೆಯಾಗಿರುವ ಸೈಟ್ನಲ್ಲಿ ಮನೆ ಕಟ್ಟದೇ ಖಾಲಿ ಬಿಟ್ಟರೆ ನಿವೇಶನ ವಾಪಸ್ : ಸಿಎಂ. ಎಚ್ಚರಿಕೆ ಬೆಂಗಳೂರು: ಸರ್ಕಾರದಿಂದ ಹಂಚಿಕೆಯಾಗಿರುವ…
ಲಾವಣ್ಯ ಹತ್ಯೆ ಪ್ರಕರಣ: ಆರೋಪಿ ಚೇತನ್ಗೆ ನ್ಯಾಯಾಂಗ ಬಂಧನ ಬಂಟ್ವಾಳ: ಬಿ.ಸಿ.ರೋಡ್ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಯುವತಿ ಲಾವಣ್ಯ ಹತ್ಯೆ…
ಮೂಡುಬಿದಿರೆ : ಸಹೋದರಿಗೆ ವೀಡಿಯೊ ಕಾಲ್ ಮೂಲಕ ಮಾತನಾಡುತ್ತಲೇ ಆತ್ಮಹತ್ಯೆಗೆ ಶರಣಾದ ಯುವಕ ಮೂಡುಬಿದಿರೆ : ತಾಲೂಕಿನ ಬೆಳುವಾಯಿ ಗ್ರಾಮ…
ನಿಂದಿಸಿದವರನ್ನು ಕ್ಷಮಿಸಲು ಬಯಸುತ್ತೇನೆ; ವಿದ್ಯಾರ್ಥಿಗಳಿಗೆ ಶಿಕ್ಷೆಯಲ್ಲ, ಮಾರ್ಗದರ್ಶನ ನೀಡಿ: ಪ್ರಧಾನಿ ಮೋದಿ ವೀಡಿಯೊ ಸಂದೇಶ ನವದೆಹಲಿ: ದೆಹಲಿಯ ಜಂತರ್ ಮಂತರ್ನಲ್ಲಿ…
ರೈಲ್ವೆಯಿಂದ ಬ್ಯಾಂಕ್ ಸೇವೆಗಳ ವರೆಗೆ ಹೊಸ ನಿಯಮ : ಇಂದಿನಿಂದ ದೇಶಾದ್ಯಂತ 5 ಪ್ರಮುಖ ಬದಲಾವಣೆ ಜಾರಿಗೆ .. ಏನೆಲ್ಲಾ…