ಉಡುಪಿ:ರಾಷ್ಟ್ರೀಯ ರೈತರ ದಿನ ಅಂಗವಾಗಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ರೈತರಾದ ರಾಮ ಕೃಷ್ಣ ಶರ್ಮ ಬಂಟಕಲ್,ರಘುಪತಿ ರಾವ್ ಮಾವಿನಕಾಡು,
ಸತೀಶ್ ಹೆಗ್ಡೆ ಅಮಾಸೆಬೈಲ್,
ಹಾಜಿ ಅಲಿಯಬ್ಬ ಉಚ್ಚಿಲ,
ಪ್ರೇಮ ಪೂಜಾರಿ ಕುಂಭಾಷಿ
ಇವರನ್ನು ಗೌರವಿಸಿ ಸನ್ಮಾನಿಸಲಾಯಿತು.
ಮುಖ್ಯ ಅತಿಥಿಯಾಗಿ ಬಂದ ಉಡುಪಿ ತಾಲೂಕು ಕೃಷಿ ಇಲಾಖೆ ಉಪ ನಿರ್ದೇಶಕರಾದ
ಮೋಹನ್ ರಾಜ್ ರವರು ಮಾತನಾಡಿ ಸಂಸ್ಥೆಯಲ್ಲಿ ರೈತರನ್ನು ಸನ್ಮಾನಿಸಿ ಅವರನ್ನು ಗುರುತಿಸಿದ ಕೆಲಸವನ್ನು ಪ್ರಶಂಶಿಸಿದರು.
ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುರೇಶ್ ನಾಯಕ್ ಮಾತನಾಡಿ ರೈತರಿಗೆ ಈ ಸಂಸ್ಥೆಯವರು ಯಾವ ರೀತಿ ಅವರ ಸಾಧನೆಯನ್ನು ಗುರುತಿಸಿದ್ದಾರೊ ಅದೇ ರೀತಿ ಸರಕಾರ ಕೂಡ ಗುರುತಿಸುವಂತಾಗಲಿ ಎಂದು ಅಭಿಪ್ರಾಯ ಪಟ್ಟರು.
ಸಾಮಾಜಿಕ ಕಾರ್ಯಕರ್ತರಾದ ಅಲ್ವಿನ್ ಅಂದ್ರಾದೆ ಹಾಗೂ ದಯಾನಂದ ಶೆಟ್ಟಿ ರೈತ ದಿನದ ಶುಭವನ್ನು ಹಾರೈಸಿದರು.
ಕಾರ್ಯಕ್ರಮದಲ್ಲಿ ಶಾಖ ಮುಖ್ಯಸ್ಥರಾದ ಹಫೀಝ್ ರೆಹಮಾನ್,ಪುರಂದರ ತಿಂಗಳಾಯ,,ಮುಸ್ತಫಾ ಎ.ಕೆ
ತಂಝೀಮ್ ಶಿರ್ವ ಉಪಸ್ಥಿತರಿದ್ದರು,
ರಾಘವೇಂದ್ರ ನಾಯಕ್ ಸ್ವಾಗತಿಸಿ ವಿಘ್ನೇಶ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…