Featured

ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ ನಲ್ಲಿ ‘ನೂವಾ’ ಸಂಗ್ರಹ ಬಿಡುಗಡೆ – vishwanews24

ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ ನಲ್ಲಿ ‘ನೂವಾ’ ಸಂಗ್ರಹ ಬಿಡುಗಡೆ

ಉಡುಪಿ: ವಿಶ್ವದ ಆರನೇ ಅತಿ ದೊಡ್ಡ ರಿಟೇಲರ್ ಚಿನ್ನದ ಕಂಪನಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ತನ್ನ ಗ್ರಾಹಕರಿಗಾಗಿ ಹೊರ ತಂದಿರುವ ‘ನೂವಾ’ ವಜ್ರಾಭರಣ ಸಂಗ್ರಹವನ್ನು ಮಳಿಗೆಯಲ್ಲಿ ದೀಪ್ತಿ ಪೈ, ಐಶ್ವರ್ಯ ಜಿ. ಭಂಡಾರಿ,ಶ್ರೇಯಾ ಎಸ್ ಪೂಜಾರಿ ಅನಾವರಣಗೊಳಿಸಿದರು.

13 ದೇಶಗಳಲ್ಲಿ 350 ಕ್ಕೂ ಹೆಚ್ಚು ಮಳಿಗೆ ಗಳನ್ನು ಹೊಂದಿರುವ ಮಲಬಾರ್ ಗೋಲ್ಡ್ ಈ ಹೊಸ ಆಭರಣ ಸಂಗ್ರಹ ಬಿಡುಗಡೆಯೊಂದಿಗೆ ಕರೀನಾ ಕಪೂರ್ ಅವರನ್ನು ರಾಯಬಾರಿಯನ್ನಾಗಿ ನೇಮಿಸಿದೆ.

ವಿನೂತನ ವಿನ್ಯಾಸದಿಂದ ಕೂಡಿರುವ ಆಭರಣಗಳ ಸಂಗ್ರಹವು ವಿಶೇಷ ವೇವ್ಸ್ ,ಫಾರ್ಮ್ಸ್,ಪೋಲ್ಡ್ ಮತ್ತು ಟೆಕ್ಟರ್ ಗಳನ್ನು ಒಳಗೊಂಡಿದೆ. ಇದನ್ನು ವಜ್ರಾಭರಣದ ಐಷಾರಾಮಿ ತುಣುಕುಗಳನ್ನು ಬಳಸಿ ಅತ್ಯಂತ ಜಾಣ್ಮೆ ಹಾಗೂ ನಿಖರತೆಯಿಂದ ಸಿದ್ದಪಡಿಸಲಾಗಿದೆ.

ನುವಾ ಸಂಗ್ರಹವನ್ನು ಉತ್ಸಾಹದಿಂದ ಪರಿಚಯಸಲಾಗಿದೆ.ಪ್ರಕೃತಿ ಮತ್ತು ಮಹಿಳೆಯರ ಅದಮ್ಯ ಮನೋಭಾವಗಳ ಸಂಭ್ರಮ ನೀಡಲಿದೆ.ಈ ಸಂಗ್ರಹದಲ್ಲಿ ಪ್ರತಿಯೊಂದು ಆಭರಣವನ್ನು ಅಪಾರ ಕಾಳಜಿ ಮತ್ತು ನಿಖರತೆಯಿಂದ ರಚಸಲಾಗಿದೆ.ಇದು ಇಂದಿನ ಮಹಿಳೆಯರ ಶ್ರೇಷ್ಠತೆ ಹಾಗೂ ಅವರ ಬದ್ಧತೆಗೆ ಸಾಕ್ಷಿ ಯಾಗಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪುರಂದರ ತಿಂಗಳಾಯ,ಮುಸ್ತಫಾ ಎ.ಕೆ,ರಾಘವೇಂದ್ರ ನಾಯಕ್,ತಂಝೀಮ್ ಶಿರ್ವ ಉಪಸ್ಥಿತರಿದ್ದರು.ಕವಿತಾ ಪ್ರಾಸ್ತಾವಿಕವಾಗಿ ಮಾತಾಡಿ ವಿಘ್ನೇಶ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

10 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

10 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

10 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

13 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

13 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

13 hours ago