Featured

ಉಡುಪಿ : ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಸ್ವಯಂಪ್ರೇರಿತ ರಕ್ತದಾನ ಶಿಬಿರ – vishwanews24

ಉಡುಪಿ : ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಸ್ವಯಂಪ್ರೇರಿತ ರಕ್ತದಾನ ಶಿಬಿರ

ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಸಂಸ್ಥೆಯ ೧೨ನೇ ವಾರ್ಷಿಕೋತ್ಸವ ಅಂಗವಾಗಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ಹಾಗೂ ಅತಿ ಹೆಚ್ಚು ಬಾರಿ ರಕ್ತದಾನ ಮಾಡಿದವರ ಅಭಿನಂದನಾ ಕಾರ್ಯಕ್ರಮ ಗುರುವಾರ ನಡೆಯಿತು.

ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಚಲನಚಿತ್ರ ನಿರ್ದೇಶಕ ಯಾಕೂಬ್ ಖಾದರ್ ಗುಲ್ವಾಡಿ ಮಾತನಾಡಿ, ಜಾತಿ, ಮತ, ಧರ್ಮವನ್ನು ಮೀರಿ ಜೀವ ಉಳಿಸಲು ಅಗತ್ಯವಾದ ರಕ್ತ ಸೌಹಾರ್ದಕ್ಕೆ ಪೂರಕವಾಗಿದೆ. ಹಸಿವು ಮುಕ್ತ ಜಗತ್ತು ರೂಪಿಸುವ ಹಾದಿಯಲ್ಲಿ ಬಡವರಿಗೆ ನೆರವು ಸಹಿತ ಮಲಬಾರ್ ಗೋಲ್ಡ್ ಸಂಸ್ಥೆಯ ಸಾಮಾಜಿಕ ಕಳಕಳಿ ಶ್ಲಾಘನೀಯ ಎಂದು ಹೇಳಿದರು.

ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಸಂಸ್ಥೆಯ ಮುಖ್ಯಸ್ಥ ಹಫೀಝ್ ರೆಹಮಾನ್ ಮಾತನಾಡಿ, ಸಂಸ್ಥೆಯ ಲಾಭಾಂಶದಲ್ಲಿ ಶೇ. 5 ಮೊತ್ತವನ್ನು ಮಲಬಾರ್ ಚಾರಿಟೇಬಲ್ ಟ್ರಸ್ಟ್ ಮೂಲಕ ಹೆಣ್ಮಕ್ಕಳಿಗೆ ವಿದ್ಯಾರ್ಥಿ ವೇತನ, ಹಸಿವು ಮುಕ್ತ ಜಗತ್ತು, ಅಜ್ಜಿ ಮನೆ, ಮೈಕ್ರೋ ಲರ್ನಿಂಗ್ ಸೆಂಟರ್ ಮೂಲಕ ದೇಶದಲ್ಲಿ ೨೮೨ ಕೋಟಿ ರೂ. ಹಾಗೂ ಕರ್ನಾಟಕದಲ್ಲಿ ೪೦.೮೮ಕೋಟಿ ರೂ. ವಿನಿಯೋಗಿಸಲಾಗಿದೆ ಎಂದು ನುಡಿದರು.

ಅಜ್ಜರಕಾಡು ಜಿಲ್ಲಾ ಸರಕಾರಿ ಆಸ್ಪತ್ರೆಯ ರಕ್ತ ನಿಧಿ ಕೇಂದ್ರದ ಮುಖ್ಯಸ್ಥೆ ಡಾ. ವೀಣಾ ಕುಮಾರಿ, ಮುಂಡ್ಕೂರು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಸುರೇಂದ್ರ ಶೆಟ್ಟಿ, ತುಳುನಾಡ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಫ್ರಾಂಕ್ಲಿ ಡಿಸೋಜಾ ಮಾತನಾಡಿದರು.

*ಒಟ್ಟು 118 ಯುನಿಟ್ ಸಂಗ್ರಯಿಸಲಾಯಿತು*.

ನವ ರಕ್ತದಾನಿಗಳಿಗೆ ಅಭಿನಂದನೆ: ದಿಶಾನ್ ಪೂಜಾರಿ, ಶಾಂತಾರಾಮ್ ಮೊಗವೀರ, ವಿನುತಾ ಕಿರಣ್, ಜಯರಾಜ್ ಸಾಲ್ಯಾನ್, ಅಬ್ದುಲ್ ಹಮೀದ್ ಉಚ್ಚಿಲ, ನಿತ್ಯಾನಂದ ಅಮೀನ್, ಚೇತು ಶಂಕರಪುರ, ಝಾಕಿರ್ ಹುಸೇನ್, ಶ್ರೀನಿವಾಸ್ ಪ್ರಸಾದ್ ಮಯ್ಯ ಅವರನ್ನು ಅತಿ ಹೆಚ್ಚು ರಕ್ತದಾನ ಮಾಡಿ ಸಮಾಜಕ್ಕೆ ನೀಡಿದ ಕೊಡುಗೆ, ಪ್ರೇರಣೆಗಾಗಿ ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನ ವ್ಯವಸ್ಥಾಪಕರಾದ ಪುರಂದರ ತಿಂಗಳಾಯ,ಮುಸ್ತಫಾ ಎ.ಕೆ ,ಗುರುರಾಜ್, ತಂಝೀಮ್ ಶಿರ್ವ ಉಪಸ್ಥಿತರಿದ್ದರು,

ವಿಘ್ನೇಶ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

5 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago