Featured

ಉಡುಪಿ : ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ ವತಿಯಿಂದ ಶಿಕ್ಷಕರಿಗೆ ಗೌರವ ಪುರಸ್ಕಾರ – Vishwanews24

ಉಡುಪಿ : ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ ವತಿಯಿಂದ ಶಿಕ್ಷಕರಿಗೆ ಗೌರವ ಪುರಸ್ಕಾರ

ಉಡುಪಿ:ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಉಡುಪಿ ಜಿಲ್ಲೆಯ 5 ಹಿರಿಯ ಸಾಧಕ ಶಿಕ್ಷಕರಿಗೆ ಗೌರವ ಪುರಸ್ಕಾರ 2022 ನೀಡಿ ಗೌರವಿಸಲಾಯಿತು.

ಸೆಪ್ಟೆಂಬರ್ 5 ರಂದು ಉಡುಪಿಯ ಮಲಬಾರ್ ಅಂಡ್ ಗೋಲ್ಡ್ ಡೈಮಂಡ್ಸ್ ಶಾಖೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಲಕ್ಷ್ಮೀನಾರಾಯಣ ಭಟ್ (ಶಿಕ್ಷಣ ಹಾಗೂ ರಂಗಭೂಮಿ) , ರಾಜೇಂದ್ರ ಭಟ್ ಕೆ (ಶಿಕ್ಷಣ ಹಾಗೂ ನಿರೂಪಣೆ ) , ಪ್ರೊ. ನಾರಾಯಣ ಎಂ. ಹೆಗಡೆ (ಶಿಕ್ಷಣ ಹಾಗೂ ಸಂಘಟನೆ), ಪ್ರೊ. ಕೊಕ್ಕರ್ಣೆ ಸುರೇಂದ್ರನಾಥ್ ಶೆಟ್ಟಿ ( ಶಿಕ್ಷಣ ಹಾಗೂ ಅರ್ಥಶಾಸ್ತ್ರ) , ಡಾ. ರೇಖಾ ವಿ. ಬನ್ನಾಡಿ (ಶಿಕ್ಷಣ ಹಾಗೂ ಸಾಹಿತ್ಯ ) ಕ್ಷೇತ್ರದಲ್ಲಿ ಸಲ್ಲಿಸಿದ ಅನನ್ಯ ಸೇವೆಗಾಗಿ ಈ ಪುರಸ್ಕಾರ ನೀಡಲಾಯಿತು.

ಸಭಾಧ್ಯಕ್ಷತೆಯನ್ನು ವಹಿಸಿದ ಯಕ್ಷಗಾನ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಪ್ರೊ . ಎಂ. ಎಲ್ ಸಾಮಗ ಮಾತನಾಡಿ ಶಿಕ್ಷಕರ ಸೇವೆ ಬಹುದೊಡ್ಡ ಸೇವೆ ಸಮಾಜದಲ್ಲಿ ಅವರನ್ನು ಗುರುತಿಸಿ ಗೌರವಿಸುವುದು ಅಗತ್ಯ. ಈ ನಿಟ್ಟಿನಲ್ಲಿ ಸಾಹಿತ್ಯ ಪರಿಷತ್ತು ಹಾಗೂ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶ್ಲಾಘನೀಯ ಕೆಲಸ ಮಾಡಿದೆ ಎಂದರು .

ಸಮಾರಂಭದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವಾಧ್ಯಕ್ಷ ಉಡುಪಿ ವಿಶ್ವನಾಥ ಶೆಣೈ,ಅಧ್ಯಕ್ಷರಾದ ಪ್ರೊ. ಶಂಕರ್, ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ ಇದರ ವ್ಯವಸ್ಥಾಪಕ ಹಫೀಝ್ ರೆಹಮಾನ್ , ಕನ್ನಡ ಸಾಹಿತ್ಯ ಪರಿಷತ್ತಿನ ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ್ ಹೆಚ್. ಪಿ ಉಪಸ್ಥಿತರಿದ್ದು , ಹಾಸ್ಯ ಭಾಷಣಕಾರರಾದ ಸಂಧ್ಯಾ ಶೆಣೈ ಸ್ವಾಗತಿಸಿ ಶ್ರೀನಿವಾಸ್ ಉಪಾಧ್ಯ ವಂದಿಸಿ,ರಾಘವೇಂದ್ರ ಪ್ರಭು ಕರ್ವಾಲು ನಿರೂಪಿಸಿದರು.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

7 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

7 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

8 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

8 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

8 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

8 hours ago