Featured

ಉಡುಪಿ : ಮಲಬಾರ್ ಗೋಲ್ಡ್ ನಲ್ಲಿ ವಜ್ರಾಭರಣಗಳ ಪ್ರದರ್ಶನಕ್ಕೆ ಚಾಲನೆ – Vishwanews24

ಉಡುಪಿ : ಮಲಬಾರ್ ಗೋಲ್ಡ್ ನಲ್ಲಿ ವಜ್ರಾಭರಣಗಳ ಪ್ರದರ್ಶನಕ್ಕೆ ಚಾಲನೆ

ಉಡುಪಿ, : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಎ.28ರವರೆಗೆ ಹಮ್ಮಿಕೊಳ್ಳಲಾಗಿರುವ ವಜ್ರಾಭರಣಗಳ ಪ್ರದರ್ಶನಕ್ಕೆ  ಚಾಲನೆ ನೀಡಲಾಯಿತು.

ಮುಖ್ಯ ಅತಿಥಿಗಳಾಗಿ ಜ್ಯೋತಿ ಶೆಟ್ಟಿ, ಸರಿತಾ ಪಿ.ಅಮೀನ್, ಪೂರ್ಣಿಮಾ ಶೆಟ್ಟಿ ವೈವಿಧ್ಯಮಯ ವಜ್ರಾಭರಣಗಳನ್ನು ಅನಾವರಣಗೊಳಿಸಿದರು. ಬಳಿಕ ಮಾತನಾಡಿದ ಜ್ಯೋತಿ ಶೆಟ್ಟಿ, ವಿಶ್ವ ಮಾನ್ಯತೆ ಪಡೆದಿರುವ ಮಲಬಾರ್ ಗೋಲ್ಡ್ ಸಂಸ್ಥೆಯಲ್ಲಿ ಉತ್ತಮ, ಗುಣಮಟ್ಟದ ಚಿನ್ನ ಹಾಗೂ ವಜ್ರಗಳ ಆಭರಣಗಳ ಸಂಗ್ರಹ ಇದೆ. ಈ ಸಂಸ್ಥೆ ಮುಂದೆ ಇನ್ನಷ್ಟು ಉತ್ತಮ ಸೇವೆ ನೀಡಲಿ ಎಂದು ಶುಭ ಹಾರೈಸಿದರು.

ಸರಿತಾ ಪಿ. ಅಮೀನ್ ಮಾತನಾಡಿ, ಎಲ್ಲೂ ಸಿಗದ ವಜ್ರಾಭರಣಗಳ ಸಂಗ್ರಹವು ಮಲಬಾರ್ ಗೋಲ್ಡ್ ನಲ್ಲಿ ಇದೆ. ಗ್ರಾಹಕರ ಸ್ನೇಹಿಯಾಗಿರುವ ಈ ಸಂಸ್ಥೆ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಹಾರೈಸಿದರು.

ಪೂರ್ಣಿಮಾ ಶೆಟ್ಟಿ ಮಾತನಾಡಿ, ಮಲಬಾರ್ ಗೋಲ್ಡ್ ವ್ಯವಹಾರದ ಜೊತೆ ಸಮಾಜ ಸೇವಾ ಕಾರ್ಯದಲ್ಲೂ ತೊಡಗಿಸಿಕೊಂಡಿದೆ. ಬಡವರ ಶಿಕ್ಷಣ, ಆರೋಗ್ಯ, ಮದುವೆ ಕಾರ್ಯಕ್ಕೆ ನೆರವು ಒದಗಿಸುತ್ತಿರುವ ಈ ಸಂಸ್ಥೆ ಇತರ ಸಂಸ್ಥೆಗಳಿಗೆ ಮಾದರಿಯಾಗಿದೆ ಎಂದು ಹೇಳಿದರು.

ವೇದಿಕೆಯಲ್ಲಿ ಮಲಬಾರ್ ಗೋಲ್ಡ್ ಉಡುಪಿ ಶಾಖಾ ಮುಖ್ಯಸ್ಥ ಹಫೀಝ್ ರೆಹಮಾನ್, ಪುರಂದರ ತಿಂಗಳಾಯ, ರಾಘವೇಂದ್ರ ನಾಯಕ್, ತಂಝೀಮ್ ಶಿರ್ವ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ವಿಘ್ನೇಶ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

9 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago