ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಮೈನ್ ಎಂಬ ಸಬ್ ಬ್ರಾಂಡಿನ ನೂತನ ಸಂಗ್ರಹ ನುವಾ ಡೈಮಂಡ್ಸ್ ಆಭರಣಗಳ ಸಂಗ್ರಹವನ್ನು ರವಿವಾರ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಅನಾವರಣ ಗೊಳಿಸಲಾಯಿತು.
ಮಲಬಾರ್ ಗೊಲ್ಡ್ನ ಗ್ರಾಹಕರಾದ ಚಂದ್ರಿಕಾ ನಾಗರಾಜ್ ಹಾಗೂ ಎಸ್.ಎಂ.ಪ್ರಜ್ವಲಾ ಕೇಕ್ ಕತ್ತರಿಸಿ, ನೂತನ ನೂಹ ಡೈಮಂಡ್ಸ್ ಆಭರಣಗಳನ್ನು ಅನಾವರಣಗೊಳಿಸಿದರು. ಬಳಿಕ ಮಾತನಾಡಿದ ಚಂದ್ರಿಕಾ ನಾಗರಾಜ್, ಹೆಣ್ಣು ಮಕ್ಕಳಿಗೆ ಶೃಂಗಾರವೇ ಮುಖ್ಯ. ಅದರಲ್ಲೂ ಡೈಮಂಡ್ಸ್ ಆಭರಣಗಳಂದರೇ ಅಚ್ಚು ಮೆಚ್ಚು. ಮಲಬಾರ್ ಗೋಲ್ಡ್ನಲ್ಲಿ ಮಹಿಳೆಯರಿಗೆ ಇಷ್ಟವಾಗುವ ಡೈಮಂಡ್ ಆಭರಣಗಳ ಸಂಗ್ರಹವೇ ಇದೆ. ಈ ಸಂಸ್ಥೆಯು ವ್ಯವಹಾರದ ಜೊತೆ ಜನಪರ ಕಾರ್ಯಕ್ರಮಗಳನ್ನು ಕೂಡ ನಡೆಸುತ್ತಿದೆ ಎಂದು ತಿಳಿಸಿದರು.
ಹೊಸ ಆಭರಣದ ಕುರಿತು ಮಾತನಾಡಿದ ಸಂಸ್ಥೆಯ ಸಿಬ್ಬಂದಿ ಯಾಸೀರ್ ಅರಾಫತ್, ನ್ಯಾಚುರಲ್ ಡೈಮಂಡ್ಸ್ ಜ್ಯುವೆಲ್ಲರಿಯಾಗಿರುವ ನುವಾ, ಸಮುದ್ರದ ಅಲೆ, ಹೂವು, ಕಟ್ಟಡದ ಆರ್ಕಿಟೆಕ್ಟ್ ರೀತಿಯಲ್ಲಿ ತಯಾರಿಸಲಾಗಿದೆ. ಇದರಲ್ಲಿ ತುಂಬಾ ಸಂಗ್ರಹ ಇದ್ದು, ಯಾವುದೇ ಶುಭ ಕಾರ್ಯಕ್ರಮಗಳಿಗೂ ಈ ಆಭರಣವನ್ನು ಧರಿಸಬಹುದಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಲಬಾರ್ ಗೋಲ್ಡ್ ಉಡುಪಿ ಶಾಖೆಯ ವ್ಯವಸ್ಥಾಪಕ ಪುರಂದರ ತಿಂಗಳಾಯ, ಸೇಲ್ಸ್ ಮೆನೇಜರ್ ಮುಸ್ತಾಫ ಎ.ಕೆ.,ಸಂದೀಪ್ ಸಫಲ್ಯ,ಗುರುರಾಜ್ ಮಾರುಕಟ್ಟೆ ವ್ಯವಸ್ಥಾಪಕ ತಂಝೀಮ್ ಶಿರ್ವ ,ದಿವ್ಯ,ಉಪಸ್ಥಿತರಿದ್ದರು. ವಿಘ್ನೇಶ್ ಕಾರ್ಯಕ್ರಮ ನಿರೂಪಿಸಿ
ನಿತ್ಯಾನಂದ್ ನಾಯಕ್ ವಂದಿಸಿದರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…