Featured

ಉಡುಪಿ : ಮಲಬಾರ್ ಗೋಲ್ಡ್ ನಲ್ಲಿ ಬ್ರೈಡ್ಸ್ ಆಫ್ ಇಂಡಿಯಾ ಶೋ ಅನಾವರಣ – vishwanews24

ಉಡುಪಿ : ಮಲಬಾರ್ ಗೋಲ್ಡ್ ನಲ್ಲಿ ಬ್ರೈಡ್ಸ್ ಆಫ್ ಇಂಡಿಯಾ ಶೋ ಅನಾವರಣ

ಉಡುಪಿ: ನಗರದ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ನಲ್ಲಿ ಬ್ರೈಡ್ಸ್ ಆಫ್ ಇಂಡಿಯಾ ಶೋ ಶಾಖೆಯಲ್ಲಿ ಅನಾವರಣಗೊಳಿಸಲಾಯಿತು. ಈ ಪ್ರದರ್ಶನ ಮತ್ತು ಮಾರಾಟವು ಡಿಸೆಂಬರ್ 20ರಿಂದ 28ರ ವರೆಗೆ ನಡೆಯಲಿದೆ .

ಈ ಸಂದರ್ಭದಲ್ಲಿ ಮಲಬಾರ್ ಗೊಲ್ಡ್‌ನ ಗ್ರಾಹಕರಾದ ಬಿಂದು ತಂಗಪ್ಪನ್,ಸ್ವಾತಿ ಮಿಥುನ್,ವಿದ್ಯಾಸರಸ್ವತಿ ಹಾಗೂ ಚರಿಷ್ಮಾ ಶೆಟ್ಟಿ ಇವರು ಆಭರಣಗಳನ್ನು ಅನಾವರಣಗೊಳಿಸಿದರು. ಬಳಿಕ ಮಾತನಾಡಿದ ಬಿಂದು ತಂಗಪ್ಪನ್ ಇವರು ಆಭರಣದ ಗುಣಮಟ್ಟ ಮತ್ತು ವೈಶಿಷ್ಟ್ಯವನ್ನು ಪ್ರಶಂಶಿಸಿದರು.

ಬಳಿಕ ಮಾತನಾಡಿದ ಸ್ವಾತಿ ಮಿಥುನ್ ಇವರು ಗ್ರಾಹಕರ ಸೇವೆ ಮತ್ತು ಚಿನ್ನದ ಲೈಟ್ ವೈಟ್ ಆಭರಣ ಗಳ ಬಗ್ಗೆ ಪ್ರಶಂಸೆ ವ್ಯಕ್ತ ಪಡಿಸಿದರು, ಚರಿಷ್ಮ ಶೆಟ್ಟಿ ಇವರು ಅಂಟಿಕ್ ಡಿಸೈನ್ ಮತ್ತು ಡೈಮಂಡ್ ನ ಸಂಗ್ರಹದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು, ವಿದ್ಯಾ ಸರಸ್ವತಿ ಇವರು ಮಲಬಾರ್ ಸಾಮಾಜಿಕ ಕಾರ್ಯದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.

ರೂಪದರ್ಶಿಗಳಾದ ಶ್ರಾವ್ಯ ಪ್ರವೀಣ, ವೈಷ್ಣವಿ ಶೆಟ್ಟಿ ಪೂರ್ವಿಕ ಶೆಟ್ಟಿ. ರಾಂಪ್ ವಾಕ್ ಮಾಡುವ ಮೂಲಕ ಆಭರಣ ಪ್ರದರ್ಶಿಸಿದರು.

ಸಂದೀಪ್ ಸಫಲ್ಯ ಡೈಮಂಡ್ಸ್ ಪ್ರಿಶಿಯಾ ಮತ್ತು ಆಂಟಿಕ್ ಡಿಸೈನ್ ನಲ್ಲಿರುವ ಕರ ಕುಶಲತೆ ಬಗ್ಗೆ ವಿವರಿಸಿದರು ಹಾಗೂ ಚಿನ್ನ,ರತ್ನ , ವಜ್ರಭರಣಗಳ ಮೇಲೆ ಶೇ. 30 ರವರಗೆ ಕಡಿತಗೊಳಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಮಲಬಾರ್ ಗೋಲ್ಡ್ ಉಡುಪಿ ಶಾಖಾ ಮುಖ್ಯಸ್ಥರಾದ ಹಫೀಝ್ ರೆಹಮಾನ್, ವ್ಯವಸ್ಥಾಪಕ ಪುರಂದರ ತಿಂಗಳಾಯ, ಸೇಲ್ಸ್ ಮೆನೇಜರ್ ಮುಸ್ತಾಫ ಎ.ಕೆ ,ದಿವ್ಯ,ಉಪಸ್ಥಿತರಿದ್ದರು. ವಿಘ್ನೇಶ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

16 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

17 hours ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

17 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

18 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

19 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

19 hours ago