ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ ನೂತನ ವಜ್ರಾಭರಣ `ಆನಿಕಾ’ವನ್ನು ಸೋಮವಾರ ಅನಾವರಣಗೊಳಿಸಲಾಯಿತು.
ರೂಪದರ್ಶಿಗಳಾದ ಅನುಷಾ ಕರ್ಕೇರ ಹಾಗೂ ನಿಸರ್ಗ ಈ ವಿನೂತನ ವಜ್ರಾಭರಣ ಆನಿಕಾವನ್ನು ಅನಾವರಣಗೊಳಿಸಿದರು. ಬಳಿಕ ಮಾತನಾಡಿದ ಅನುಷಾ ಕರ್ಕೇರ, ಮಲಬಾರ್ ಗೋಲ್ದ್ ನಲ್ಲಿ ವಜ್ರಾಭರಣಗಳ ಸಂಗ್ರಹ ವೈವಿಧ್ಯಮಯ ಹಾಗೂ ಆಕರ್ಷಣೀಯವಾಗಿದೆ. ಇಲ್ಲಿನ ಸಿಬ್ಬಂದಿಗಳ ಸೇವೆ ಕೂಡ ಅತ್ಯುತ್ತಮವಾಗಿದೆ. ಸಾಮಾಜಿಕ ಕಾರ್ಯದಲ್ಲೂ ಈ ಸಂಸ್ಥೆ ತೊಡಗಿಸಿ ಕೊಂಡಿದ್ದು, ಇನ್ನಷ್ಟು ಎತ್ತರಕ್ಕೇರಲಿ ಎಂದು ಹಾರೈಸಿದರು.
ನಿಸರ್ಗ ಮಾತನಾಡಿ, ಕಳೆದ ೮-೧೦ವರ್ಷಗಳಿಂದ ಮಲಬಾರ್ ಗೋಲ್ಡ್ನ ಗ್ರಾಹಕನಾಗಿದ್ದೆನೆ. ನನಗೆ ಇಲ್ಲಿನ ಚಿನ್ನ ಹಾಗೂ ವಜ್ರಾಭರಣ ಗಳಲ್ಲಿ ಸಂತೃಪ್ತಿ ಇದೆ. ಈ ಹೊಸ ಉತ್ಪನ್ನ ವೈವಿಧ್ಯಮಯವಾಗಿದ್ದು, ತುಂಬಾ ಆಕರ್ಷಣೀಯವಾಗಿದೆ ಎಂದು ಹೇಳಿದರು.
ಸಿಬ್ಬಂದಿ ಹರೀಶ್ ಎಂ.ಜಿ. ಅನಿಕಾ ಬಗ್ಗೆ ಮಾಹಿತಿ ನೀಡಿ, ಈ ವಜ್ರಾಭರಣವು ನ್ಯಾಚುರಲ್ ಡೈಮಂಡ್ಸ್ ಆಗಿದ್ದು, ಇದರಲ್ಲಿ ವೈವಿಧ್ಯಮಯ ಡಿಸೈನ್ಗಳಿವೆ. ಸಾಕಷ್ಟು ಆಕರ್ಷಕ ರೀತಿಯ ಈ ವಜ್ರಾಭರಣವು ೧೫ಸಾವಿರ ರೂ.ನಿಂದ ೧೫ಲಕ್ಷರೂ.ವರಗೆ ಬೆಲೆಬಾಳುತ್ತದೆ. ಅನಿಕಾದ ವಿವಿಧ ವಜ್ರಾಭರಣಗಳ ಸಂಗ್ರಹವು ಮಲಬಾರ್ನಲ್ಲಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಉಡುಪಿ ಶಾಖಾ ಮುಖ್ಯಸ್ಥ ವಿಜಯ ಕುಮಾರ್ ಡಿ., ವ್ಯವಸ್ಥಾಪಕರಾದ ಪುರಂದರ ತಿಂಗಳಾಯ, ಮುಸ್ತಫಾ ಎ.ಕೆ., ಮಾರುಕಟ್ಟೆ ವ್ಯವಸ್ಥಾಪಕ ತಂಝೀಮ್ ಶಿರ್ವ ಮೊದಲಾದವರು ಉಪಸ್ಥಿತರಿದ್ದರು. ವಿಘ್ನೇಶ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು ಮಡಿಕೇರಿ :…
ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ ಕಲಬುರಗಿ: ದೇಶದ ಆರ್ಥಿಕ ಸಂಕಷ್ಟದಲ್ಲಿದೆ ಅಂತ…
ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು ಕಾರ್ಕಳ: ಧರ್ಮಸ್ಥಳದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ…
ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ಮಂಗಳೂರು: ಕರಾವಳಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ…
ಪ್ಯಾಸೆಂಜರ್ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ :ತಪ್ಪಿದ ಭಾರೀ ಅನಾಹುತ ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳಲು…
ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಪ್ರಮಾಣವಚನ ಸ್ವೀಕಾರ ತಿರುವನಂತಪುರಂ: ಕೇರಳಂ ಸರಕಾರದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಪ್ರಮಾಣವಚನ ಸ್ವೀಕರಿಸಿದರು.…