ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಮಹಿಳಾ ದಿನಾಚರಣೆಯ ಪ್ರಯುಕ್ತ ಸಾಧಕ ಮಹಿಳೆ ಯರಿಗೆ ಸನ್ಮಾನ ಮತ್ತು ಸಂವಾದ ಕಾರ್ಯಕ್ರಮವನ್ನು ಬುಧವಾರ ಉಡುಪಿ ಶಾಖೆಯಲ್ಲಿ ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು.
ಮುಖ್ಯ ಅತಿಥಿಯಾಗಿ ಆಗಮಿಸಿದ ಉಡುಪಿ ಶಿಶು ಅಭಿವೃದ್ಧಿ ಜಿಲ್ಲಾ ಯೋಜನಾ ಅಧಿಕಾರಿ ಶ್ರೀಮತಿ ವೀಣಾ ಮಹಿಳಾ ದಿನಾಚರಣೆ ಎಂಬುದು ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತವಾಗಿರಬಾರದು, ಮಹಿಳೆಯರಿಗೆ ಸಿಗಬೇಕಾದ ಸಮಾನ ಗೌರವ, ಪ್ರತಿದಿನವೂ ಸಿಗುವಂತಾಗಬೇಕು. ಅವರ ಬಗ್ಗೆ ಕೀಳರಿಮೆ ಮನೋಭಾವ ದೂರ ಮಾಡಬೇಕು. ಆ ರೀತಿಯ ಹೃದಯ ಶ್ರೀಮಂತಿಕೆ ಎಲ್ಲರಲ್ಲೂ ಮೂಡಿಬರ ಬೇಕಾಗಿದೆ ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀಮತಿ ರಶ್ಮಿತಾ ಬಾಲಕೃಷ್ಣ ಶೆಟ್ಟಿ, ಸಮಾಜ ಸೇವಕಿ ಸಿಂತಿಯ ಡಿಸೋಜ,ಡಾ. ಚರಿಷ್ಮ ಶೆಟ್ಟಿ ಮಾತನಾಡಿದರು.
ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ನ್ಯಾಯಾಧೀಶರಾದ ಮುಮ್ತಾಜ್,ಸಫಲ್ಯ ಟ್ರಸ್ಟ್ ನ ಅಧ್ಯಕ್ಷರಾದ ನಿರೂಪಮ ಪ್ರಸಾದ್ ಶೆಟ್ಟಿ,ಸಾಮಾಜಿಕ ಕಾರ್ಯಕರ್ತರಾದ ಜನೆಟ್ ಬರ್ಬೋಜ,ಅಂತರಾಷ್ಟ್ರೀಯ ಕ್ರೀಡಾ ಹಾಗೂ ನೃತ್ಯ ಪಟು ಎಮ್.ಜೆ ಅರ್ಚನಾ,ಪವರ್ಲಿಫ್ಟರ್ ಸುಮನ ಎಮ್ ಪೂಜಾರಿ ಇವರಿಗೆ
ಸನ್ಮಾನಿಸಿ ಗೌರವಿಸಲಾಯಿತು.
ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖಾ ಮುಖ್ಯಸ್ಥ ಹಫೀಝ್ ರೆಹಮಾನ್, ಪುರಂದರ ತಿಂಗಳಾಯ,ರಾಘವೇಂದ್ರ ನಾಯಕ್, ತಂಝಿಮ್ ಶಿರ್ವ, ಉಪಸ್ಥಿತರಿದ್ದರು.
ವಿಘ್ನೇಶ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…