ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಉಡುಪಿ ಶಾಖೆಯಲ್ಲಿ ಜೂ.೧ರವರೆಗೆ ಹಮ್ಮಿಕೊಳ್ಳಲಾಗಿರುವ ಪ್ರಸಿದ್ಧ ವಾಚ್ ಬ್ರಾಂಡ್ಗಳ ವಿಶೇಷ ಪ್ರದರ್ಶನ ಹಾಗೂ ಮಾರಾಟ ಮೇಳಕ್ಕೆ ಮೇ ೧೫ರಂದು ಚಾಲನೆ ನೀಡಲಾಯಿತು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಉಡುಪಿಯ ಉದ್ಯಮಿಗಳಾದ ಯಾಕೂಬ್, ಸತೀಶ್ ಹೆಗ್ಡೆ, ಅಶ್ರಫ್,ಶೇಖ್ ವಹೀದ್, ಕಿರಣ್ ಶೆಟ್ಟಿ, ಇರ್ಫಾನ್ ಮೇಳವನ್ನು ಉದ್ಘಾಟಿಸಿ ವಿವಿಧ ಬ್ರಾಂಡ್ಗಳ ವಾಚ್ಗಳನ್ನು ಅನಾವರಣಗೊಳಿಸಿದರು.
ಬಳಿಕ ಮಾತನಾಡಿದ ಉದ್ಯಮಿ ಅಶ್ರಫ್, ಈ ರೀತಿಯ ಬ್ರಾಂಡ್ಗಳ ವಾಚ್ಗಳು ಒಂದೇ ಕಡೆ ಸಿಗಬೇಕಾದರೆ ದೂರದ ಬೆಂಗಳೂರಿಗೆ ಹೋಗ ಬೇಕಾಗಿತ್ತು. ಇದೀಗ ಮಲಬಾರ್ ಗೋಲ್ಡ್ ಆ ಅವಕಾಶವನ್ನು ಉಡುಪಿಯಲ್ಲಿ ಮಾಡಿಕೊಟ್ಟಿದೆ. ಒಂದಕ್ಕೊಂದು ಮೀರಿಸುವ ಶೈಲಿಯ ಆಕರ್ಷಕ ವಾಚ್ಗಳು ಇಲ್ಲಿವೆ ಎಂದು ಹೇಳಿದರು.
ಇದನ್ನೂ ಓದಿ :
ಉದ್ಯಮಿ ಸತೀಶ್ ಹೆಗ್ಡೆ, ಮಲಬಾರ್ ಗೋಲ್ಡ್ ಜೊತೆ ವ್ಯವಹಾರಿಕ ಮಾತ್ರವಲ್ಲ, ಭಾವನಾತ್ಮಕ ಸಂಬಂಧ ಕೂಡ ಇದೆ. ಮಲಬಾರ್ ಗೋಲ್ಡ್ ಅವರ ಸೇವೆ ಅತ್ಯುನ್ನತವಾದುದು. ವ್ಯವಹಾರದ ಜೊತೆ ಸಾಮಾಜಿಕ ಕಾರ್ಯದಲ್ಲೂ ತೊಡಗಿಸಿಕೊಂಡಿದ್ದಾರೆ. ಈ ಮೇಳದಲ್ಲಿ ಅತ್ಯುನ್ನತ ಬ್ರಾಂಡ್ಗಳ ವಾಚ್ಗಳು ಒಂದೇ ಸೂರಿನಲ್ಲಿ ಸಿಗುವುದರಿಂದ ಸಾಕಷ್ಟು ಅವಕಾಶಗಳಿವೆ. ಈ ಮೇಳ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.
ಮಲಬಾರ್ ವಾಚಸ್ನ ಪ್ರಧಾನ ವ್ಯವಸ್ಥಾಪಕ ವಿಶ್ವ ಮೋಹನ್, ಪ್ರದರ್ಶನ ಮೇಳ ಹಾಗೂ ವಿವಿಧ ಬ್ರಾಂಡ್ನ ವಾಚ್ಗಳ ಕುರಿತು ಮಾಹಿತಿ ನೀಡಿದರು. ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಮಂಗಳೂರು ಶಾಖಾ ಮುಖ್ಯಸ್ಥ ಹಫೀಝ್ ರೆಹಮಾನ್ ವಂದಿಸಿದರು. ಸಿಬ್ಬಂದಿ ವಿಘ್ನೇಶ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.
ಇದನ್ನೂ ಓದಿ :
ಉಡುಪಿ ಶಾಖಾ ಮುಖ್ಯಸ್ಥ ವಿಜಯ ಕುಮಾರ್ ಡಿ,ಮಲಬಾರ್ ವಾಚ್ ನ ಹಿರಿಯ ವ್ಯವಸ್ಥಾಪಕ ಅಬ್ದುಲ್ ವಹೀದ್, ವ್ಯವಸ್ಥಾಪಕ ಪುರಂದರ ತಿಂಗಳಾಯ, ಮುಸ್ತಫಾ ಎ.ಕೆ., ಮಾರುಕಟ್ಟೆ ವ್ಯವಸ್ಥಾಪಕ ತಝೀಮ್ ಶಿರ್ವ ಮೊದಲಾದವರು ಉಪಸ್ಥಿತರಿದ್ದರು.
ಮೇಳದಲ್ಲಿ ಸುಮಾರು ೧೭ಕ್ಕೂ ಅಧಿಕ ಪ್ರಸಿದ್ಧ ವಾಚ್ ಬ್ರಾಂಡ್ಗಳ ಪ್ರದರ್ಶನ ಮತ್ತು ಮಾರಾಟ ನಡೆಯಲಿದ್ದು,
ಈ ವಿಶೇಷ ಸಂದರ್ಭದಲ್ಲಿ ವಿವಿಧ ಮಾದರಿಗಳ ಪ್ರೀಮಿಯಂ ವಾಚ್ಗಳು ಆಕರ್ಷಕ ದರದಲ್ಲಿ ಶೇ.೫೦ರ ವರೆಗೆ ವಿಶೇಷ ರಿಯಾಯಿತಿ ನೀಡಲಾಗುತ್ತದೆ. ಅದರೊಂದಿಗೆ ಉಚಿತ ಬ್ಯಾಟರಿ ಹಾಗೂ ಪಾಲಿಶ್ ಸೇವೆ ಕೂಡ ಲಭ್ಯ ಇವೆ.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಮಂಗಳೂರು: ಕೇರಳಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ 27 ಜಾನುವಾರುಗಳು ವಶಕ್ಕೆ; ಇಬ್ಬರ ಬಂಧನ ಮಂಗಳೂರು: ಹಾವೇರಿಯಿಂದ ಮಲಪ್ಪುರಂಗೆ ಲಾರಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ…