Featured

ಉಡುಪಿ: ಮಲ್ಪೆತೊಟ್ಟಂ ಕಡಲ ತೀರದಲ್ಲಿ ಹಿಮಾಲಯ ಅಘೋರಿಗಳಿಂದ ನಡೆಯುತ್ತಿದೆ ಮಹಾಯಾಗ – Vishwanews24

ಉಡುಪಿ: ಮಲ್ಪೆತೊಟ್ಟಂ ಕಡಲ ತೀರದಲ್ಲಿ ಹಿಮಾಲಯ ಅಘೋರಿಗಳಿಂದ ಗ್ರಹಣ ದೋಷ ನಿವಾರಣೆಗಾಗಿ ನಡೆಯುತ್ತಿದೆ ಮಹಾಯಾಗ

ಉಡುಪಿ: ಮಲ್ಪೆ ಸಮೀಪದ ತೊಟ್ಟಂನಲ್ಲಿ ಉತ್ತರ ಭಾರತದ ಅಘೋರ ಪಂಥದ ಸನ್ಯಾಸಿಯರು ರಹಸ್ಯವಾಗಿ ಮಹಾಯಾಗವೊಂದನ್ನು ಕಳೆದ ಒಂದು ವಾರದಿಂದೀಚೆಗೆ ನಡೆಸುತ್ತಿದ್ದಾರೆ. 15 ದಿನಗಳ ಅಂತರದಲ್ಲಿ ಸೂರ್ಯಗ್ರಹಣ ಮತ್ತು ಚಂದ್ರ ಗ್ರಹಣ ಸಂಭವಿಸಿ ಜಗತ್ತುಗೆ ಉಂಟಾಗಿರುವ ದೋಷಗಳ ನಿವಾರಣೆಗಾಗಿ ಅಘೋರಿಗಳು ಈ ಯಾಗ ನಡೆಸುತ್ತಿದ್ದಾರೆ. ಈ ರೀತಿ ಗ್ರಹಣವಾದಾಗಲೆಲ್ಲ ಪ್ರಾಕೃತಿಕ ವಿಪ್ಲವಗಳು ಸಂಭವಿಸುವ ಆತಂಕ ಇರುವ ಕಾರಣಕ್ಕೆ ಮಹಾಯಾಗ ಕೈಗೊಳ್ಳಲಾಗಿದೆ.

ಅಘೋರಿಗಳು ನಡೆಸುತ್ತಿರುವ ಮಹಾ ಮೃತ್ಯುಂಜಯ ಯಾಗ ಇದೀಗ ಹೊರಜಗತ್ತಿಗೆ ತಿಳಿದುಬಂದಿದೆ. ಸಂಚಾರದಲ್ಲಿದ್ದ ಅಘೋರಿಗಳು ಲೋಕ ಕಲ್ಯಾಣಾರ್ಥ ಈ ಯಾಗ ಕೈಗೊಂಡಿದ್ದಾರೆ. ಸಂಚಾರ ಮಾರ್ಗದಲ್ಲಿ ಇದ್ದಲ್ಲಿಯೇ ಯಾಗ ನಡೆಸುವಂತೆ ಸೂಚನೆ ಬಂದಿರುವ ಹಿನ್ನೆಲೆಯಲ್ಲಿ ಈ ಮಹಾ ಯಾಗವನ್ನು ಮಲ್ಪೆ ಸಮೀಪದ ತೊಟ್ಟಂ ಕಡಲ ತೀರದಲ್ಲಿ ನಡೆಸಲಾಗುತ್ತಿದೆ. ಯಾಗ ನಡೆಸಲು ಸೂಕ್ತ ಸ್ಥಾನವನ್ನು ಹುಡುಕಿ ಅವಿಭಜಿತ ಜಿಲ್ಲೆಗಳ ಅನೇಕ ಸ್ಥಳಗಳಿಗೆ ಅಘೋರಿಗಳು ಭೇಟಿ ಕೊಟ್ಟಿದ್ದರು. ಬಳಿಕ ತೊಟ್ಟಂ ಪರಿಸರದ ಕಡಲ ತೀರದ ಒಂದು ಫಾರ್ಮ್ ಹೌಸ್ ಅನ್ನು ಯಾಗಕ್ಕೆ ಆಯ್ಕೆ ಮಾಡಿಕೊಂಡಿದ್ದಾರೆ.

ಉಡುಪಿ : ತುರ್ತು ಚಿಕಿತ್ಸೆ – ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಆಸ್ಪತ್ರೆಗೆ ದಾಖಲು – Vishwanews24

ಗೌಪ್ಯ ಯಾಗ ಸ್ಥಳೀಯವಾಗಿ ಯಾವುದೇ ಸಂಪರ್ಕವಿಲ್ಲದೆ ಸೀಮಿತ ವ್ಯಕ್ತಿಗಳ ಸಹಕಾರದೊಂದಿಗೆ ಅತ್ಯಂತ ಗೌಪ್ಯವಾಗಿ ಯಾಗ ನಡೆಸಲಾಗುತ್ತಿದೆ. ಸತತ ಒಂಬತ್ತು ದಿನಗಳ ಕಾಲ ಅಹೋರಾತ್ರಿ ಈ ಯಾಗ ಮುಂದುವರಿಯಲಿದೆ. ಏಕಕಾಲದಲ್ಲಿ ಎರಡು ಗ್ರಹಣಗಳು ಬಂದ ಸಂದರ್ಭದಲ್ಲಿ, ಪ್ರಾಕೃತಿಕ ಅನಾಹುತಗಳು ಸಂಭವಿಸುವ ಅಪಾಯ ಹೆಚ್ಚು ಎಂದು ಹೇಳಲಾಗುತ್ತೆ. ಅದಕ್ಕೆ ಪೂರಕವೋ ಎಂಬಂತೆ ವಿಶ್ವದ ನಾನಾ ಭಾಗಗಳಲ್ಲಿ ಗ್ರಹಣದ ನಂತರ ಭೂಕಂಪಗಳು ಕೂಡ ಸಂಭವಿಸಿವೆ. ರಾತ್ರಿ ಹೊತ್ತು ಮಾತ್ರ ಈ ಯಾಗ ನಡೆಯುತ್ತಿದೆ. ಇಂದು ರಾತ್ರಿ ಯಾಗದ ಪೂರ್ಣಾಹುತಿ ನಡೆಯಲಿದೆ.ನಾಳೆ ಸಾರ್ವಜನಿಕರಿಗೆ ಯಾಗ ಸ್ಥಳ ಭೇಟಿಗೆ ಅವಕಾಶ ಸಿಗಲಿದೆ. ಅನ್ನಸಂತರ್ಪಣೆಯೂ ನಡೆಯಲಿದೆ ಎಂದು ತಿಳಿದುಬಂದಿದೆ.

ಈ ರೀತಿ ದೇಶದ ಅನೇಕ ಭಾಗಗಳಲ್ಲಿ ಅಘೋರಿಗಳು ಯಾಗ ನಿರತರಾಗಿದ್ದಾರಂತೆ. ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ, ನಿಸ್ವಾರ್ಥಭಾವದಿಂದ ನಾಲ್ವರು ಅಘೋರಿಗಳು ಇಲ್ಲಿ ಯಾಗ ನಿರತರಾಗಿದ್ದಾರೆ. ಪ್ರಕೃತಿಯಲ್ಲಿ ದೊರಕುವ ಅಮೃತಬಳ್ಳಿ, ಗರಿಕೆ ಮುಂತಾದ ಸಸ್ಯ ಜೋತೆಗೆ ಲೀಟರ್ ಗಟ್ಟಲೆ ಶುದ್ಧ ತುಪ್ಪವನ್ನು ಯಾಗಕ್ಕೆ ಬಳಸಲಾಗುತ್ತಿದೆ.

ಚಂದ್ರಗ್ರಹಣ ಮುಗಿಯುತ್ತಿದ್ದಂತೆ ಆರಂಭವಾದ ಈ ಯಾಗ ನ. 17ರಂದು ಪೂರ್ಣಗೊಳ್ಳಲಿದೆ. ಹಿಮಾಲಯದಿಂದ ದಕ್ಷಿಣ ಭಾರತಕ್ಕೆ ಆಗಮಿಸಿದ ಆಘೋರಿಗಳು ಈ ಯಾಗವನ್ನು ಕೈಗೊಂಡಿದ್ದಾರೆ. ಖಂಡಗ್ರಸ್ತ ಸೂರ್ಯ ಗ್ರಹಣ, ರಕ್ತಚಂದನ ಚಂದ್ರಗ್ರಹಣದಿಂದ ಲೋಕಕ್ಕೆ ಅತಿವೃಷ್ಟಿ, ಅನಾವೃಷ್ಟಿ ಮುಂತಾದ ವಿಪತ್ತು ಸಂಭವಿಸದೆ ಲೋಕ ಸುಭಿಕ್ಷೆಯಿಂದ ಕೂಡಿರುವಂತೆ ಪ್ರಾರ್ಥಿಸಿ ಯಾಗ ನಡೆಸುತ್ತಿದ್ದೇವೆ ಎಂದಷ್ಟೇ ಯಾಗ ನಿರತ ಅಘೋರಿಗಳು ತಿಳಿಸಿದ್ದಾರೆ.

ನಂಬಿಕೆ ದ್ರೋಹ – ಪ್ರೇಯಸಿಯ ಕತ್ತು ಸೀಳಿ ಕೊಲೆ..⏺️ ಮೃತದೇಹದೊಂದಿಗೆ ವೀಡಿಯೋ ಪೋಸ್ಟ್‌ ಮಾಡಿದ ಪ್ರಿಯಕರ – Vishwanews24

ಪ್ರತಿ ಒಂದೂವರೆ ಸಾವಿರ ನಾಗ ಸಾಧುಗಳಿಗೆ, ಓರ್ವ ಅಘೋರಿ ಮುಖ್ಯಸ್ಥನಾಗಿರುತ್ತಾರೆ. ಇಂತಹ ನಾಲ್ವರು ಅಘೋರಿಗಳು ಉಡುಪಿಯಲ್ಲಿ ಯಾಗ ನಿರತರಾಗಿದ್ದಾರೆ. ಯಾವುದೇ ಪ್ರಚಾರವಿಲ್ಲದೆ, ಅಪೇಕ್ಷೆ ಇಲ್ಲದೆ ನಡೆಸುವ ಯಾಗ ನಡೆಯುತ್ತಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago