Featured

ಉಡುಪಿ : ಮಲ್ಪೆಯಲ್ಲಿ ರಾಜ್ಯದ ಪ್ರಥಮ ಫ್ಲೋಟಿಂಗ್‌ ಬ್ರಿಡ್ಜ್‌ʼ ಲೋಕಾರ್ಪಣೆ – Vishwanews24

ಇಂದು ಸಂಜೆ 5 ಗಂಟೆಗೆ ಮಲ್ಪೆಯಲ್ಲಿ ರಾಜ್ಯದ ಪ್ರಥಮ ಫ್ಲೋಟಿಂಗ್‌ ಬ್ರಿಡ್ಜ್‌ʼ ಲೋಕಾರ್ಪಣೆ

ಉಡುಪಿ: ಪ್ರವಾಸೋದ್ಯಮಕ್ಕೆ ಹೆಸರಾದ ಉಡುಪಿ ಜಿಲ್ಲೆಯ ಮಲ್ಪೆ ಸಮುದ್ರ ತೀರದಲ್ಲಿ ಇನ್ನಷ್ಟು ಪ್ರವಾಸಿಗರನ್ನು ಸೆಳೆಯುವ ನಿಟ್ಟಿನಲ್ಲಿ ಇಲಾಖೆ ಕಾರ್ಯಪ್ರವೃತ್ತವಾಗಿದ್ದು ಮಲ್ಪೆ ಬೀಚ್‌ ನಲ್ಲಿ ಹೊಸದಾದ ತೇಲುವ ಸೇತುವೆ ಮೇ 6ರಂದು ಲೋಕಾರ್ಪಣೆಗೊಳ್ಳಲಿದೆ.

ಈ ತೇಲುವ ಸೇತುವೆಯು ಒಂದು ರೀತಿಯಲ್ಲಿ ಸಾಹಸ ಕ್ರೀಡೆಯಾಗಿದ್ದು, ಗಟ್ಟಿ ಗುಂಡಿಗೆ ಇರುವ ಯಾರು ಬೇಕಾದರೂ ಆನಂದಿಸಬಹುದು. ಈ ಸೇತುವೆಯ ಮೇಲೆ ನಡೆದು ಹೋಗಬಹುದು. ಇದರಡಿಯಲ್ಲಿ ಬರುವ ಅಲೆಗಳು ಸಣ್ಣದಿರಲಿ, ದೊಡ್ಡದಿರಲಿ, ಈ ಸೇತುವೆಯನ್ನು ಮೇಲಕ್ಕೆತ್ತಿ ಕೆಳಗಿಳಿಸುತ್ತದೆ. ಅಲೆಯ ರಬಸಕ್ಕೆ ಅಲೆಯಂತಯೇ ಮೇಲೇರಿ ಅದೇ ರಭಸದಲ್ಲಿ ಕೆಳಗಿಳಿದು ಬರುವ ಅನುಭವ ವರ್ಣಸಲಸಾಧ್ಯ. ಇದು ಪ್ರವಾಸಿಗರಿಗೆ ಅತ್ಯಂತ ನವನವೀನ ಅನುಭವ ನೀಡುವ ಹಿನ್ನೆಲೆಯಲ್ಲಿ ಇದನ್ನು ನಿರ್ಮಿಲಾಗಿದೆ. ಸೇತುವೆಯು 100 ಮೀಟರ್‌ ಉದ್ದವನ್ನು ಮತ್ತು 3.5 ಮೀಟರ್‌ ಅಗಲ ವಿಸ್ತೀರ್ಣವನ್ನು ಹೊಂದಿದೆ. ಸೇತುವೆಯ ಎರಡು ಇಕ್ಕೆಲಗಳಲ್ಲಿ ರೇಲಿಂಗ್‌ ಸಿಸ್ಟಮ್‌ ಅಳವಡಿಸಿದ್ದು ಸುಮಾರು 80 ಲಕ್ಷ ರೂ ವೆಚ್ಚದಲ್ಲಿ ಬೀಚ್‌ ನಿರ್ವಹಣಾ ತಂಡದ ಸುದೇಶ್‌ ಶೆಟ್ಟಿ ನೇತೃತ್ವದಲ್ಲಿ ನಿರ್ಮಿಸಲಾಗಿದೆ.

ಇದರಲ್ಲಿ 10 ಮಂದಿ ಲೈಫ್‌ ಗಾರ್ಡ್‌, 30 ಲೈಫ್‌ ಬ್ಯಾಗ್ಸ್, ಹೊಂದಿದ್ದು, ಪ್ರವಾಸಿಗರು ಕಡ್ಡಾಯವಾಗಿ ಲೈಫ್‌ ಜಾಕೆಟ್‌ ಧರಿಸಿಕೊಂಡು ಸೇತುವೆಯ ಮೇಲೆ ನಡೆಯಬಹುದು. ಇದನ್ನು ಹೈ ಡೆನ್ಸಿಟಿ ಪಾಲಿಎತಿಲೀನ್ (HDPI) ಬ್ಲಾಕ್‍‍ಗಳಿಂದ ಮಾಡಲ್ಪಟ್ಟಿದ್ದು, ಅಲೆಯ ಏರಿಳಿತದಿಂದ ಭಯಬೀತರಾದವರು ರೈಲಿಂಗುಗಳ ಆಸರೆ ಪಡೆಯಬಹುದು. ಕೇರಳದ ಬೇಪೂರ್‌ ಬೀಚ್‌ ಹೊರತುಪಡಿಸಿದರೆ ಇಂತಹ ಸೌಲಭ್ಯ ಹೊಂದುವ ಕರ್ನಾಟಕದ ಮೊದಲ ಬೀಚ್ ಮಲ್ಪೆಯಾಗಿದೆ ಎಂದು ಬೀಚ್‌ ನಿರ್ವಹಣಾ ತಂಡದ ಸುದೇಶ್‌ ಶೆಟ್ಟಿ ಹೇಳಿದ್ದಾರೆ.

ಇದರ ಲೋಕಾರ್ಪಣೆ ಕಾರ್ಯಕ್ರಮ ಶುಕ್ರವಾರ ಸಂಜೆ 5 ಗಂಟೆಗೆ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಕೂರ್ಮಾ ರಾವ್‌ ಎಂ, ಉಡುಪಿ ಶಾಸಕ ರಘುಪತಿ ಭಟ್‌, ನಗರಸಭೆಯ ಅಧ್ಯಕ್ಷೆ ಸುಮಿತ್ರಾ ನಾಯಕ್‌ ಭಾಗವಹಿಸಲಿದ್ದು, ಅತಿಥಿಗಳಾಗಿ ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌, ನಗರಸಭೆಯ ಪೌರಾಯುಕ್ತ ಉದಯ್‌ ಕುಮಾರ್‌ ಶೆಟ್ಟಿ, ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕ ಕ್ಲಿಫರ್ಡ್‌ ಲೋಬೊ, ದಕ ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್‌ ಅಧ್ಯಕ್ಷ ಯಶ್ಪಾಲ್‌ ಸುವರ್ಣ ನಗರಸಭೆಯ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್‌, ಬೀಚ್‌ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಪಾಂಡುರಂಗ ಮಲ್ಪೆ, ಮಲ್ಪೆ ಠಾಣಾಧಿಕಾರಿ ಸಕ್ತೀವೇಲು, ಹಿಂದೂ ಯುವಸೇನೆಯ ಉಡುಪಿ ಜಿಲ್ಲಾಧ್ಯಕ್ಷರಾದ ಮಂಜು ಕೊಳ ಭಾಗವಹಿಸಲಿದ್ದಾರೆ.

Vishwa News 24

Recent Posts

ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಸವರಾಜ ಹೊರಟ್ಟಿ -vishwanews24

ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಸವರಾಜ ಹೊರಟ್ಟಿ ಬೆಂಗಳೂರು,  : ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ…

14 hours ago

ಕಾಪು: ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಯು.ಟಿ. ಖಾದರ್ ಭೇಟಿ, ಪರಿಶೀಲನೆ -vishwanews24

ಕಾಪು: ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಯು.ಟಿ. ಖಾದರ್ ಭೇಟಿ, ಪರಿಶೀಲನೆ ಕಾಪು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ…

14 hours ago

ಮುದರಂಗಡಿ : ಗ್ರಾಪಂ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು -vishwanews24

ಮುದರಂಗಡಿ : ಗ್ರಾಪಂ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು ಶಿರ್ವ: ಕಾಂಗ್ರೆಸ್ ಮುಖಂಡ, ಉದ್ಯಮಿ ಡೇವಿಡ್…

14 hours ago

ಕಾಪು ಪುರಸಭೆ ವ್ಯಾಪ್ತಿಯಲ್ಲಿ ನೂರಾರು ಬೀದಿನಾಯಿಗಳು-ಪ್ರತಿದಿನ ಹತ್ತಾರು ಪ್ರಕರಣಗಳು :vishwanews24

ಕಾಪು ಪುರಸಭೆ ವ್ಯಾಪ್ತಿಯಲ್ಲಿ ನೂರಾರು ಬೀದಿನಾಯಿಗಳು-ಪ್ರತಿದಿನ ಹತ್ತಾರು ಪ್ರಕರಣಗಳು ಕಾಪು: ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿ ವಿಶೇಷವಾಗಿ ಕಾಪು ಪೇಟೆ ಹಾಗೂ…

17 hours ago

ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್‌ ಖಂಡ್ರೆ ಸೂಚನೆ -vishwanews24

ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್‌ ಖಂಡ್ರೆ ಸೂಚನೆ ಬೆಂಗಳೂರು: ಸೆ.14ರಂದು ರಾಜ್ಯಾದ್ಯಂತ ಆಚರಿಸಲಿರುವ…

2 days ago

ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್ ಪ್ರಗತಿ-2026ಕ್ಕೆ  ಚಾಲನೆ -vishwanews24

ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್…

2 days ago