ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಬ್ರಹ್ಮಾವರ ಹೋಬಳಿಯ ಕಲ್ಯಾಣಪುರ ಗ್ರಾಮದಲ್ಲಿ ಮೊಬೈಲ್ ಟವರ್ ಕಳವು ಪ್ರಕರಣವೊಂದು ವರದಿಯಾಗಿದೆ.
ಜಿಟಿಎಲ್ ಮೊಬೈಲ್ ಕಂಪನಿಗೆ ಸೇರಿದ ಮೊಬೈಲ್ ಟವರ್ ಅನ್ನು ಕಲ್ಯಾಣಪುರದಲ್ಲಿ ಸ್ಥಾಪಿಸಿದ ಸ್ಥಳದಿಂದ ಕಳವು ಮಾಡಲಾಗಿದೆ ಎಂದು ವರದಿಯಾಗಿದೆ. ಜಿಟಿಎಲ್ ಇನ್ಫ್ರಾಸ್ಟ್ರಕ್ಚರ್ ಪ್ರೈವೇಟ್ ಲಿಮಿಟೆಡ್ನ ಅಧಿಕೃತ ಅಧಿಕಾರಿ ಸಂದೀಪ್ ಎಂಬವರು ಈ ಘಟನೆಗೆ ಸಂಬಂಧಿಸಿದಂತೆ ದೂರು ದಾಖಲಿಸಿದ್ದಾರೆ.
2023ರ ಮಾರ್ಚ್ 31 ರಂದು ಕಂಪನಿಯ ತಂತ್ರಜ್ಞರು ನಡೆಸಿದ ದಿನನಿತ್ಯದ ಪರಿಶೀಲನೆಯ ಸಂದರ್ಭದಲ್ಲಿ ಸರ್ವೆ ನಂಬರ್ 232/2b2-p2 ರಲ್ಲಿ ಅಳವಡಿಸಲಾಗಿದ್ದ ಮೊಬೈಲ್ ಟವರ್ ಕಾಣೆಯಾಗಿರುವುದು ಕಂಡುಬಂದಿದೆ. ಕಳ್ಳತನ ನಡೆದಿರುವುದು ಬೆಳಕಿಗೆ ಬಂದ ತಕ್ಷಣ ಕಂಪನಿಗೆ ಮಾಹಿತಿ ನೀಡಲಾಯಿತು ಮತ್ತು ಆಂತರಿಕ ತನಿಖೆಯ ಮೂಲಕ ಅಪರಿಚಿತ ವ್ಯಕ್ತಿಗಳು ಟವರ್ ಅನ್ನು ಕಳವು ಮಾಡಿದ್ದಾರೆ ಎಂದು ದೃಢಪಟ್ಟಿದೆ.
ಕಳವು ಮಾಡಿದ ಆಸ್ತಿಯ ಮೌಲ್ಯ 36,92,992 ರೂಪಾಯಿಗಳಾಗಿದೆ. ಈ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…