ಉಡುಪಿ, : ಮಲ್ಪೆಯ ತೊಟ್ಟಂ ನಲ್ಲಿ ಕಂಟೈನರ್ ನಿಂದ ಗ್ರಾನೈಟ್ ಇಳಿಸುವಾಗ ಆಕಸ್ಮಿಕ ಕಾರ್ಮಿಕರಿಬ್ಬರ ಮೇಲೆ ಬಿದ್ದು ಒರಿಸ್ಸಾದ ಇಬ್ಬರು ದಾರುಣವಾಗಿ ಮೃತಪಟ್ಟ ದುರ್ಘಟನೆ ನಡೆದಿದೆ. ಈ ದುರ್ಘಟನೆಗೆ SDTU ಉಡುಪಿ ಜಿಲ್ಲೆ ತೀವ್ರವಾಗಿ ಖಂಡನೆ ವ್ಯಕ್ತಪಡಿಸುತ್ತಿದೆ..
ಕುಟುಂಬದ ಜೀವನ ನಿರ್ವಹಣೆಗಾಗಿ ಜವಾಬ್ದಾರಿಯನ್ನು ಹೊತ್ತು ಹೊರರಾಜ್ಯದಿಂದ ಕೆಲಸವನ್ನು ಹರಸಿ ಬರುವ ಕಾರ್ಮಿಕರು ಸೂಕ್ತ ಸುರಕ್ಷಾ ಕ್ರಮ ಇಲ್ಲದೆ ವಿವಿಧ ಅಪಾಯಗಳನ್ನು ಎದುರಿಸುತ್ತಿದ್ದಾರೆ. ದುಡಿಸುವವರು ಅನುಕೂಲಕ್ಕೆ ತಕ್ಕ ಹೊರರಾಜ್ಯದ ಕಾರ್ಮಿಕರನ್ನು ಯಾವುದೇ ಸುರಕ್ಷಾ ಕ್ರಮ ವಹಿಸದೆ ಕಾರ್ಮಿಕರನ್ನು ವಿವಿಧ ರೀತಿಯಲ್ಲಿ ಬಳಸುತ್ತಿರುವ ಕಾರಣದಿಂದ ಸಾವು ನೋವುಗಳು ಸಂಭವಿಸುವ ಘಟನೆಗಳು ನಡೆಯುತ್ತಿದೆ. ಕಾರ್ಮಿಕರ ಶ್ರಮವನ್ನು ನಮ್ಮ ಅನುಕೂಲಕ್ಕೆ ತಕ್ಕ ಬಳಸುವಾಗ ಅವರ ಕ್ಷೇಮಭಿವೃದ್ಧಿ ಮತ್ತು ಸುರಕ್ಷತೆಯನ್ನು ಖಾತ್ರಿ ಪಡಿಸುವೂದಕ್ಕಾಗಿ ಅಧಿಕೃತರು ವಿಶೇಷ ಕ್ರಮ ವಹಿಸಬೇಕು ಮಾತ್ರವಲ್ಲ ದುಡಿಮೆಗಾಗಿ ಹೊರ ರಾಜ್ಯದಿಂದ ಬರುವ ಹೊರರಾಜ್ಯಕ್ಕೆ ತೆರಳುವ ಕಾರ್ಮಿಕರ ಕ್ಷೇಮಾಭಿವೃದ್ಧಿಗಾಗಿ ಸರಕಾರ ವಿಶೇಷ ಕ್ರಮವಹಿಸಲು ಸೋಷಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಉಡುಪಿ ಜಿಲ್ಲೆ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಉಚ್ಚಿಲ ಪ್ರಕಟನೆಯಲ್ಲಿ ತಿಳಿಸಿದ್ದಾರೆ..
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…