ಉಡುಪಿ, : ಮಲ್ಪೆಯ ಪಡುಕೆರೆಯಲ್ಲಿ ಮರೀನಾ ಬೀಚ್ ಆಗಲು ಬಿಡುವುದಿಲ್ಲ ಎಂದು ಮೀನುಗಾರರು ಮತ್ತು ಸ್ಥಳೀಯರು ಒಕ್ಕೊರಲಿನಿಂದ ಮಂಗಳವಾರ ಉಡುಪಿ ಶಾಸಕ ರಘುಪತಿ ಭಟ್ ಅವರ ಜೊತೆ ನಡೆದ ಮುಖಾಮುಖಿ ಚರ್ಚೆಯಲ್ಲಿ ವಿರೋಧಿಸಿದರು.
ಇತ್ತೀಚೆಗೆ ಪಡುಕೆರೆಯಲ್ಲಿ ಮರೀನಾ ಬೀಚ್ ಆಗದಂತೆ ಮೀನುಗಾರರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇಂದು ನಡೆದ ಚರ್ಚೆಯಲ್ಲಿ ಶಾಸಕರ ಮನವೊಲಿಸುವ ಪ್ರಯತ್ನ ಕೂಡ ವಿಫಲವಾಯಿತು. ಚರ್ಚೆಯ ನೇತೃತ್ವ ವಹಿಸಿದ್ದ ಪ್ರಕಾಶ್ ಮಲ್ಪೆಯವರು ಒಂಭತ್ತು ಅಂಶಗಳಿರುವ ನಿರ್ಣಯವನ್ನು ಸಭೆಯಲ್ಲಿ ಮಂಡಿಸಿದರು.
ಪ್ರತಿ ತಾಲೂಕಿಗೆ ಒಂದರಂತೆ ಗೋಶಾಲೆ ಆರಂಭ :ಸಚಿವ ಪ್ರಭು ಚೌವ್ಹಾಣ್ -Vishwanews24
ತದನಂತರ ಮಾತನಾಡಿದ ಶಾಸಕ ರಘುಪತಿ ಭಟ್, “ಪಡುಕೆರೆ ಯಲ್ಲಿ ಮರೀನಾ ಬೀಚ್ ಮಾಡುವುದು ಕೇವಲ ಪ್ರಸ್ತಾವನೆ ಮಾತ್ರ. ಯಾವ ನಿರ್ದಾರವೂ ಆಗಿಲ್ಲ. ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಮೂಲಕ ಸಿಡಬ್ಲ್ಯುಪಿಆರ್ ಎಸ್ ನಿಂದ ಒಂದು ಕೋಟಿ ವೆಚ್ಚದಲ್ಲಿ ಅಧ್ಯಯನ ಮಾಡಿ ಸಾಧಕ-ಬಾಧಕಗಳ ಬಗ್ಗೆ ವರದಿ ಸಿದ್ದ ಮಾಡಲು ಮಾತುಕತೆ ನಡೆಸಿದ್ದೇವೆ. ಈ ವರದಿ ಸಿದ್ದವಾಗಲು ಕನಿಷ್ಠ ಒಂದು ವರ್ಷ ಬೇಕಾಗುತ್ತದೆ. ಮೆರೈನ್ ಟೆಕ್ ಸಂಸ್ಥೆ ಯಿಂದ ಈ ಯೋಜನೆ ಮಾಡಲು ಇಯರ್ ಮಾರ್ಕ್ ಮಾಡಿದೆ. ಪಡುಕೆರೆಯ ಶಾಂತಿನಗರದ ವಾಸಿಗಳಿಗೆ ಯಾವುದೇ ಹಾನಿಯಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ನನ್ನದು” ಎಂದು ಭರವಸೆ ನೀಡಿದರು.
ಇತಿಹಾಸವು ಯಾವುದೇ ಸರ್ಕಾರ ರೈತರ ವಿರುದ್ಧ ಗೆದ್ದಿಲ್ಲ ಎಂದು ಹೇಳುತ್ತದೆ : ನವಜೋತ್ ಸಿಂಗ್ ಸಿಧು -Vishwanews24
ಅಲ್ಲದೆ “ಮರೀನಾ ಬೀಚ್ ಆದರೂ ಅಲ್ಲಿ ಪಬ್, ಕ್ಲಬ್, ಹೋಟೆಲ್ಗಳು ಆಗಲು ಅವಕಾಶ ಕೊಡುವುದಿಲ್ಲ. ಶೋರೂಮ್ಸ್ , ಮನೋರಂಜನಾ ಔಟ್ ಲೆಟ್ ಗಳು ಬರಬಹುದು. ಮೀನುಗಾರಿಕೆಗೆ ಸಮಸ್ಯೆ ಯಾಗುವ, ಸಂಸ್ಕೃತಿಗೆ ದಕ್ಕೆಯಾಗುವ ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಒಂದು ಬಾರಿ ತಜ್ಞರ ವರದಿ ಬಂದರೆ, ಇಲ್ಲಿಗೆ ಅವರನ್ನು ಕರೆತಂದು ಮುಖಾಮುಖಿ ಚರ್ಚೆ ಮಾಡಲು ಸೂಚಿಸುತ್ತೇನೆ. ಮೀನುಗಾರಿಕಾ ಆಂತರಿಕ ಸಮಸ್ಯೆ ಬಗ್ಗೆ ಸ್ಪಷ್ಟವಾದ ಅರಿವಿಲ್ಲ. ಆಂತರಿಕ ಮತ್ತು ಅಂತಾರಾಷ್ಟ್ರೀಯ ಬೋಟ್ ನಿಲುಗಡೆ ವ್ಯವಸ್ಥೆ ಬೇರೆಯೇ ಇದೆ. ಅವೆಲ್ಲವನ್ನೂ ವರದಿ ಬಂದ ಮೇಲೆಯೇ ಕೂಲಂಕಷವಾಗಿ ಅಧ್ಯಯನ ಮಾಡಿದ ಮೇಲೆ ನಿರ್ಧಾರ ಮಾಡಲಾಗುತ್ತದೆ” ಎಂದು ಶಾಸಕ ಭಟ್ ಸ್ಪಷ್ಟಪಡಿಸಿದರು.
ಸಭೆಯಲ್ಲಿ ಉಡುಪಿ ಜಿಲ್ಲಾ ಪಂಚಾಯತ್ ನ ಅಧ್ಯಕ್ಷ ದಿನಕರ್ ಬಾಬು, ತಾಲೂಕು ಪಂಚಾಯತ್ ನ ಉಪಾಧ್ಯಕ್ಷ ರಾಜೇಂದ್ರ ಪಂದುಬೆಟ್ಟು, ಪಂಡರಿನಾಥ್ ಭಜನಾ ಮಂದಿರದ ಗೌರವಾಧ್ಯಕ್ಷರಾದ ಶಿವರಾಜ್ ಪುತ್ರನ್ ಉಪಸ್ಥಿತರಿದ್ದರು.
ಏಪ್ರಿಲ್ 1ರಿಂದ ಪಡಿತರದಾರರಿಗೆ ಅಕ್ಕಿ ಜೊತೆಗೆ ಜೋಳ, ತೊಗರಿ, ರಾಗಿ ವಿತರಣೆ -Vishwanews24
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್ಪಾಲ್ ಯಾದವ್ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…