Featured

ಉಡುಪಿ: ಮಲ್ಪೆಯ ಮೀನುಗಾರರ ಮೇಲೆ ಮಹಾರಾಷ್ಟ್ರದ ಕಡಲ್ಗಳ್ಳರಿಂದ ಹಲ್ಲೆ -Vishwanews24

ಉಡುಪಿ : ಉಡುಪಿಯಿಂದ ಕಸುಬಿಗೆ ತೆರಳಿದ ಮೀನುಗಾರರಿಗೆ ಮಹಾರಾಷ್ಟ್ರದ ಕಡಲ್ಗಳ್ಳರು ಮಾರಣಾಂತಿಕ ಹಲ್ಲೆ ಮಾಡಿ, ಮೀನು ದೋಚಿ ಅಟ್ಟಹಾಸ ಮೆರೆದಿದ್ದಾರೆ.

ಮಲ್ಪೆಯಿಂದ ತೆರಳಿ ಮಹಾರಾಷ್ಟ್ರದ ಮಾಲ್ವಾನ್ ಕಡಲ ತೀರದಲ್ಲಿ 7 ಮೀನುಗಾರರು ಸಾವನ್ನಪ್ಪಿದ ಘಟನೆ ಮಾಸುವ ಮುನ್ನವೇ ಉಡುಪಿಯ ಮಲ್ಪೆಯ ಮೀನುಗಾರರ ಮೇಲೆ ಮಹಾರಾಷ್ಟ್ರದ ಕಡಲ್ಗಳ್ಳರು ಹಲ್ಲೆ ಮಾಡಿದ್ದಾರೆ. ಬೋಟ್ ಮೂಲಕ 200 ಮೀನುಗಾರರು ಮಲ್ಪೆಯ ಆಳಸಮುದ್ರದ ಬೋಟನ್ನು ಸುತ್ತುವರಿದು 7 ಮೀನುಗಾರರಿಗೆ ಮನಬಂದಂತೆ ಥಳಿಸಿದ್ದಾರೆ.

ಕರಾವಳಿ ಮೀನುಗಾರರು ಮೀನುಗಾರಿಕೆಗೆ ಗೋವಾ, ಮಹಾರಾಷ್ಟ್ರದ ಕಡೆ ತೆರಳುತ್ತಾರೆ. ಹೀಗೆ, ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ 4 ಆಳಸಮುದ್ರ ಬೋಟನ್ನು ಅಡ್ಡಗಟ್ಟಿದ ಕಡಲ್ಗಳ್ಳರು ಲೂಟಿ ಮಾಡಿದ್ದಾರೆ. ಸುಮಾರು 8 ಲಕ್ಷ ರೂಪಾಯಿಯ ಮೀನು, ಟಬ್, ಬಲೆಗಳು, ಜಿಪಿಎಸ್ ಮತ್ತಿತರ ಮಷೀನ್‍ಗಳನ್ನು ದೋಚಿದ್ದಾರೆ.

ರಾಜ್ಯದ ಮೀನುಗಾರರ ಮೇಲೆ ಕಳೆದ ಹಲವಾರು ತಿಂಗಳಿಂದ ಮಹಾರಾಷ್ಟ್ರ ಮೀನುಗಾರರು ದೌರ್ಜನ್ಯ ನಡೆಸುತ್ತಿದ್ದರೂ ಸರ್ಕಾರ ಈ ಬಗ್ಗೆ ಕ್ರಮ ಕೈಗೊಂಡಿಲ್ಲ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago