ಉಡುಪಿ : ಉಡುಪಿಯಿಂದ ಕಸುಬಿಗೆ ತೆರಳಿದ ಮೀನುಗಾರರಿಗೆ ಮಹಾರಾಷ್ಟ್ರದ ಕಡಲ್ಗಳ್ಳರು ಮಾರಣಾಂತಿಕ ಹಲ್ಲೆ ಮಾಡಿ, ಮೀನು ದೋಚಿ ಅಟ್ಟಹಾಸ ಮೆರೆದಿದ್ದಾರೆ.
ಮಲ್ಪೆಯಿಂದ ತೆರಳಿ ಮಹಾರಾಷ್ಟ್ರದ ಮಾಲ್ವಾನ್ ಕಡಲ ತೀರದಲ್ಲಿ 7 ಮೀನುಗಾರರು ಸಾವನ್ನಪ್ಪಿದ ಘಟನೆ ಮಾಸುವ ಮುನ್ನವೇ ಉಡುಪಿಯ ಮಲ್ಪೆಯ ಮೀನುಗಾರರ ಮೇಲೆ ಮಹಾರಾಷ್ಟ್ರದ ಕಡಲ್ಗಳ್ಳರು ಹಲ್ಲೆ ಮಾಡಿದ್ದಾರೆ. ಬೋಟ್ ಮೂಲಕ 200 ಮೀನುಗಾರರು ಮಲ್ಪೆಯ ಆಳಸಮುದ್ರದ ಬೋಟನ್ನು ಸುತ್ತುವರಿದು 7 ಮೀನುಗಾರರಿಗೆ ಮನಬಂದಂತೆ ಥಳಿಸಿದ್ದಾರೆ.
ಕರಾವಳಿ ಮೀನುಗಾರರು ಮೀನುಗಾರಿಕೆಗೆ ಗೋವಾ, ಮಹಾರಾಷ್ಟ್ರದ ಕಡೆ ತೆರಳುತ್ತಾರೆ. ಹೀಗೆ, ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ 4 ಆಳಸಮುದ್ರ ಬೋಟನ್ನು ಅಡ್ಡಗಟ್ಟಿದ ಕಡಲ್ಗಳ್ಳರು ಲೂಟಿ ಮಾಡಿದ್ದಾರೆ. ಸುಮಾರು 8 ಲಕ್ಷ ರೂಪಾಯಿಯ ಮೀನು, ಟಬ್, ಬಲೆಗಳು, ಜಿಪಿಎಸ್ ಮತ್ತಿತರ ಮಷೀನ್ಗಳನ್ನು ದೋಚಿದ್ದಾರೆ.
ರಾಜ್ಯದ ಮೀನುಗಾರರ ಮೇಲೆ ಕಳೆದ ಹಲವಾರು ತಿಂಗಳಿಂದ ಮಹಾರಾಷ್ಟ್ರ ಮೀನುಗಾರರು ದೌರ್ಜನ್ಯ ನಡೆಸುತ್ತಿದ್ದರೂ ಸರ್ಕಾರ ಈ ಬಗ್ಗೆ ಕ್ರಮ ಕೈಗೊಂಡಿಲ್ಲ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…