Featured

ಉಡುಪಿ: ಮಲ್ಪೆ ಕಡಲ ತೀರದಲ್ಲಿ ತೇಲುವ ಸೇತುವೆ ಪುನರಾರಂಭ – ಉದ್ಘಾಟಿಸಿದ ಶಾಸಕ ರಘುಪತಿ ಭಟ್ – Vishwanews24

ಉಡುಪಿ: ಮಲ್ಪೆ ಕಡಲ ತೀರದಲ್ಲಿ ತೇಲುವ ಸೇತುವೆ ಉದ್ಘಾಟಿಸಿದ ಶಾಸಕ ರಘುಪತಿ ಭಟ್

ಉಡುಪಿ: ಮಲ್ಪೆ ಕಡಲ ತೀರದಲ್ಲಿ ತೇಲುವ ಸೇತುವೆಯನ್ನು ಶಾಸಕ ರಘುಪತಿ ಭಟ್ ಭಾನುವಾರ ಡಿ.25ರಂದು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೇರಳ ಬಿಟ್ಟರೆ ಇಡೀ ದೇಶದಲ್ಲಿ ಮಲ್ಪೆ ಬೀಚ್‌ನಲ್ಲಿ ಮಾತ್ರ ನಿರ್ಮಾಣಗೊಂಡಿರುವ ಸೇತುವೆ ಇದಾಗಿದ್ದು ಪ್ರವಾಸಿಗರು ಇನ್ನಷ್ಟು ಖುಷಿ ಪಡಬಹುದು ಎಂದರು.

ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌, ಎಸ್‌ಪಿ ಅಕ್ಷಯ್‌ ಹಾಕೆ ಮುಖ್ಯ ಅತಿಥಿಗಳಾಗಿದ್ದು, ಕಳೆದ ಮೇ ತಿಂಗಳ ಮಧ್ಯೆ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಪ್ರವಾಸಿಗರ ಆಕರ್ಷಣೆಗೆ ತೇಲು ಸೇತುವೆಯನ್ನು ಆರಂಭಿಸಲಾಗಿತ್ತು. ಕೆಲವೊಂದು ತಾಂತ್ರಿಕ ಕಾರಣದಿಂದ ಕೆಲವೇ ದಿನಗಳಲ್ಲಿ ಅದು ಸ್ಥಗಿತಗೊಂಡಿತ್ತು.

ಇನ್ನು ಕೇರಳ ಮತ್ತು ರಾಜ್ಯದ ತಜ್ಞರ ತಂಡ ಪರಿಶೀಲನೆಗೆ ಆಗಮಿಸಿದ್ದು, ತೇಲುವ ಸೇತುವೆಯ ಸಾಮರ್ಥ್ಯ ಕಾರ್ಯಕ್ಷಮತೆಯನ್ನು ಪರೀಕ್ಷೆಗೆ ಒಳಪಡಿಸಿ ದೃಢೀಕರಿಸಿದೆ. ವೈಜ್ಞಾನಿಕ ವಾಗಿ ಪರೀಕ್ಷೆಗೆ ಒಳಪಡಿಸಲಾಗಿದ್ದು ಈ ಸೇತುವೆಯ ಬ್ಲಾಕ್‌ಗಳು ಮಾಂಡೌಸ್‌ ಚಂಡಮಾರುತಕ್ಕೂ ಹಾನಿಯಾಗಿಲ್ಲ. ಹೆಚ್ಚು ದೃಢವಾದ ಜೋಡಣೆಯಿಂದ ಗಟ್ಟಿಯಾಗಿದೆ. ವರದಿ ಆಧಾರದಲ್ಲಿ ಜಿಲ್ಲಾಡಳಿತವು ಅನುಮೋದನೆ ನೀಡಿರುವ ಹಿನ್ನೆಲೆಯಲ್ಲಿ ರವಿವಾರ ಆರಂಭಗೊಂಡಿದೆ.

ಸಂಸ್ಥೆಯ ಪಾಲುದಾರರಾದ ಶೇಖರ್‌ ಪುತ್ರನ್‌, ಧನಂಜಯ ಕಾಂಚನ್‌, ಸುದೇಶ್‌ ಶೆಟ್ಟಿ ಮೊದ ಲಾದವರು ಪಾಲ್ಗೊಂಡಿದ್ದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

19 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

19 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago