Featured

ಉಡುಪಿ: ಮಲ್ಪೆ ಕಡಲ ತೀರದಲ್ಲಿ ತೇಲುವ ಸೇತುವೆ ಪುನರಾರಂಭ – ಉದ್ಘಾಟಿಸಿದ ಶಾಸಕ ರಘುಪತಿ ಭಟ್ – Vishwanews24

ಉಡುಪಿ: ಮಲ್ಪೆ ಕಡಲ ತೀರದಲ್ಲಿ ತೇಲುವ ಸೇತುವೆ ಉದ್ಘಾಟಿಸಿದ ಶಾಸಕ ರಘುಪತಿ ಭಟ್

ಉಡುಪಿ: ಮಲ್ಪೆ ಕಡಲ ತೀರದಲ್ಲಿ ತೇಲುವ ಸೇತುವೆಯನ್ನು ಶಾಸಕ ರಘುಪತಿ ಭಟ್ ಭಾನುವಾರ ಡಿ.25ರಂದು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೇರಳ ಬಿಟ್ಟರೆ ಇಡೀ ದೇಶದಲ್ಲಿ ಮಲ್ಪೆ ಬೀಚ್‌ನಲ್ಲಿ ಮಾತ್ರ ನಿರ್ಮಾಣಗೊಂಡಿರುವ ಸೇತುವೆ ಇದಾಗಿದ್ದು ಪ್ರವಾಸಿಗರು ಇನ್ನಷ್ಟು ಖುಷಿ ಪಡಬಹುದು ಎಂದರು.

ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌, ಎಸ್‌ಪಿ ಅಕ್ಷಯ್‌ ಹಾಕೆ ಮುಖ್ಯ ಅತಿಥಿಗಳಾಗಿದ್ದು, ಕಳೆದ ಮೇ ತಿಂಗಳ ಮಧ್ಯೆ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಪ್ರವಾಸಿಗರ ಆಕರ್ಷಣೆಗೆ ತೇಲು ಸೇತುವೆಯನ್ನು ಆರಂಭಿಸಲಾಗಿತ್ತು. ಕೆಲವೊಂದು ತಾಂತ್ರಿಕ ಕಾರಣದಿಂದ ಕೆಲವೇ ದಿನಗಳಲ್ಲಿ ಅದು ಸ್ಥಗಿತಗೊಂಡಿತ್ತು.

ಇನ್ನು ಕೇರಳ ಮತ್ತು ರಾಜ್ಯದ ತಜ್ಞರ ತಂಡ ಪರಿಶೀಲನೆಗೆ ಆಗಮಿಸಿದ್ದು, ತೇಲುವ ಸೇತುವೆಯ ಸಾಮರ್ಥ್ಯ ಕಾರ್ಯಕ್ಷಮತೆಯನ್ನು ಪರೀಕ್ಷೆಗೆ ಒಳಪಡಿಸಿ ದೃಢೀಕರಿಸಿದೆ. ವೈಜ್ಞಾನಿಕ ವಾಗಿ ಪರೀಕ್ಷೆಗೆ ಒಳಪಡಿಸಲಾಗಿದ್ದು ಈ ಸೇತುವೆಯ ಬ್ಲಾಕ್‌ಗಳು ಮಾಂಡೌಸ್‌ ಚಂಡಮಾರುತಕ್ಕೂ ಹಾನಿಯಾಗಿಲ್ಲ. ಹೆಚ್ಚು ದೃಢವಾದ ಜೋಡಣೆಯಿಂದ ಗಟ್ಟಿಯಾಗಿದೆ. ವರದಿ ಆಧಾರದಲ್ಲಿ ಜಿಲ್ಲಾಡಳಿತವು ಅನುಮೋದನೆ ನೀಡಿರುವ ಹಿನ್ನೆಲೆಯಲ್ಲಿ ರವಿವಾರ ಆರಂಭಗೊಂಡಿದೆ.

ಸಂಸ್ಥೆಯ ಪಾಲುದಾರರಾದ ಶೇಖರ್‌ ಪುತ್ರನ್‌, ಧನಂಜಯ ಕಾಂಚನ್‌, ಸುದೇಶ್‌ ಶೆಟ್ಟಿ ಮೊದ ಲಾದವರು ಪಾಲ್ಗೊಂಡಿದ್ದರು.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

20 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

21 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

22 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

22 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

22 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

23 hours ago