Featured

ಉಡುಪಿ : ಮಲ್ಪೆ ಕೊಚ್ಚಿನ್ ಶಿಪ್ ಯಾರ್ಡ್ ನಲ್ಲಿ 70 ಟನ್ ಬೊಲ್ಲಾರ್ಡ್ ಟಗ್ (ಹಡಗು) ಲೋಕಾರ್ಪಣೆ – vishwanews24

ಉಡುಪಿ : ಮಲ್ಪೆ ಕೊಚ್ಚಿನ್ ಶಿಪ್ ಯಾರ್ಡ್ ನಲ್ಲಿ 70 ಟನ್ ಬೊಲ್ಲಾರ್ಡ್ ಟಗ್ (ಹಡಗು) ಲೋಕಾರ್ಪಣೆ

ಉಡುಪಿ: ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್‌ನಿಂದ ಅದಾನಿ ಪೋರ್ಟ್ಸ್ ಮತ್ತು ಎಸ್‌ಇಝೆಡ್‌ನ ಅಂಗ ಸಂಸ್ಥೆಯಾದ ಓಷಿಯನ್ ಸ್ಪಾರ್ಕಲ್ ಲಿಮಿಟೆಡ್‌ಗಾಗಿ ನಿರ್ಮಿಸಲಾದ 70 ಟನ್ ಬೊಲ್ಲಾರ್ಡ್ ಫುಲ್ ಟಗ್(ಹಡಗು) ಮಲ್ಪೆಯ ಶಿಪ್ ಬಿಲ್ಡಿಂಗ್ ಯಾರ್ಡ್‌ನಲ್ಲಿ ಲೋಕಾರ್ಪಣೆಗೊಂಡಿತು.

60ಕೋಟಿ ರೂ. ವೆಚ್ಚದ ಈ ಹಡಗು 33 ಮೀಟರ್ ಉದ್ದ, 12.2 ಮೀಟರ್ ಅಗಲ ಮತ್ತು 4.2 ಮೀಟರ್ ಆಳ ಹೊಂದಿದ್ದು, ಎರಡು 1838 ಕಿಲೋವಾಟ್ ಸಾಮರ್ಥ್ಯದ ಎಂಜಿನ್‌ಗಳನ್ನು ಮತ್ತು 2.7 ಮೀಟರ್ ಪ್ರೊಪೆಲರ್‌ಗಳು ಹಾಗೂ ಡೆಕ್ ಉಪಕರಣಗಳನ್ನು ಹೊಂದಿವೆ.

ಹಡಗನ್ನು ಉದ್ಘಾಟಿಸಿ ಮಾತನಾಡಿದ ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು, ಬೈಂದೂರಿನಿಂದ ಮಂಗಳೂರಿನ ಉಳ್ಳಾಲದವರೆಗೆ ಕಡಲ ಕಿನಾರೆಯಲ್ಲಿ ಪ್ರಯಾಣಿಕರ ಬೋಟನ್ನು ಪ್ರಾರಂಭಿಸುವ ಚಿಂತನೆ ಇದೆ. ಹೆದ್ದಾರಿಗೆ ಪರ್ಯಾಯವಾಗಿ ಸಮುದ್ರ ಕಿನಾರೆಯಲ್ಲಿ ವಾಟರ್ ಮೆಟ್ರೋ ಮಾದರಿಯಲ್ಲಿ ಈ ಪ್ರಯಾಣಿಕರ ಹಡಗು ಆರಂಭಿಸಬೇಕೆಂಬುದು ನಮ್ಮ ಗುರಿಯಾಗಿದೆ. ಅದಕ್ಕಾಗಿ ಕೇಂದ್ರ ಸರಕಾರಕ್ಕೆ ಪ್ರಾಸ್ತಾವನೆ ಸಲ್ಲಿಸಲಾಗಿದೆ. ಈ ಪ್ರಯಾಣಿಕರ ಹಡಗಿಗೆ ಮಂಜೂರಾತಿ ದೊರತರೆ ಅದನ್ನು ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್ ಮೂಲಕವೇ ನಿರ್ಮಾಣ ಮಾಡಿಸಲಾಗುವುದು ಎಂದರು.

ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ಸ್ಥಳೀಯರಿಗೆ ಹೆಚ್ಚಿನ ಉದ್ಯೋಗ ಸಿಗಬೇಕು ಎಂಬುದು ನಮ್ಮ ಆಶಯ. ನಿಮ್ಮ ನಿಯಮಗಳನ್ನು ಗಮನದಲ್ಲಿ ಇಟ್ಟುಕೊಂಡು ಉಡುಪಿ ಜಿಲ್ಲೆಗೆ ಆದ್ಯತೆ ನೀಡಿ ಕರ್ನಾಟಕದವರಿಗೆ ಇದರಲ್ಲಿ ಅವಕಾಶವನ್ನು ಕಲ್ಪಿಸಿಕೊಡಬೇಕು. ಅದೇ ರೀತಿ ಸ್ಥಳೀಯ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಸಹಕರಿಸಬೇಕಾಗಿದೆ ಎಂದು ಅವರು ಹೇಳಿದರು.

ಮುಖ್ಯ ಅತಿಥಿಗಳಾಗಿ ಕೊಚ್ಚಿನ್ ಶಿಪ್‌ಯಾರ್ಡ್‌ನ ತಾಂತ್ರಿಕ ನಿರ್ದೇಶಕ ರಾಜೇಶ್ ಗೋಪಾಲ ಕೃಷ್ಣನ್, ಓಷಿಯನ್ ಸ್ಪಾರ್ಕಲ್‌ನ ಶಾಖಾ ಮುಖ್ಯಸ್ಥ ಮರಿಯಾ ಅನ್ಸೋನ್ ಹಾಗೂ ಪ್ರಶಾಂತ್ ನಾಯರ್ ಉಪಸ್ಥಿತರಿದ್ದರು.

ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರಿ ಕುಮಾರ್ ಎ. ಸ್ವಾಗತಿಸಿದರು. ಮುಖ್ಯ ಆರ್ಥಿಕ ಅಧಿಕಾರಿ ಶಂಕರ್ ನಟರಾಜ್ ವಂದಿಸಿದರು. ಸವಿತಾ ಕರ್ಕೇರ ಕಾರ್ಯಕ್ರಮ ನಿರೂಪಿಸಿದರು

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

4 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

5 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

5 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

6 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

7 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

7 hours ago