Featured

ಉಡುಪಿ : ಮಲ್ಪೆ ಕೊಚ್ಚಿನ್ ಶಿಪ್ ಯಾರ್ಡ್ ನಲ್ಲಿ 70 ಟನ್ ಬೊಲ್ಲಾರ್ಡ್ ಟಗ್ (ಹಡಗು) ಲೋಕಾರ್ಪಣೆ – vishwanews24

ಉಡುಪಿ : ಮಲ್ಪೆ ಕೊಚ್ಚಿನ್ ಶಿಪ್ ಯಾರ್ಡ್ ನಲ್ಲಿ 70 ಟನ್ ಬೊಲ್ಲಾರ್ಡ್ ಟಗ್ (ಹಡಗು) ಲೋಕಾರ್ಪಣೆ

ಉಡುಪಿ: ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್‌ನಿಂದ ಅದಾನಿ ಪೋರ್ಟ್ಸ್ ಮತ್ತು ಎಸ್‌ಇಝೆಡ್‌ನ ಅಂಗ ಸಂಸ್ಥೆಯಾದ ಓಷಿಯನ್ ಸ್ಪಾರ್ಕಲ್ ಲಿಮಿಟೆಡ್‌ಗಾಗಿ ನಿರ್ಮಿಸಲಾದ 70 ಟನ್ ಬೊಲ್ಲಾರ್ಡ್ ಫುಲ್ ಟಗ್(ಹಡಗು) ಮಲ್ಪೆಯ ಶಿಪ್ ಬಿಲ್ಡಿಂಗ್ ಯಾರ್ಡ್‌ನಲ್ಲಿ ಲೋಕಾರ್ಪಣೆಗೊಂಡಿತು.

60ಕೋಟಿ ರೂ. ವೆಚ್ಚದ ಈ ಹಡಗು 33 ಮೀಟರ್ ಉದ್ದ, 12.2 ಮೀಟರ್ ಅಗಲ ಮತ್ತು 4.2 ಮೀಟರ್ ಆಳ ಹೊಂದಿದ್ದು, ಎರಡು 1838 ಕಿಲೋವಾಟ್ ಸಾಮರ್ಥ್ಯದ ಎಂಜಿನ್‌ಗಳನ್ನು ಮತ್ತು 2.7 ಮೀಟರ್ ಪ್ರೊಪೆಲರ್‌ಗಳು ಹಾಗೂ ಡೆಕ್ ಉಪಕರಣಗಳನ್ನು ಹೊಂದಿವೆ.

ಹಡಗನ್ನು ಉದ್ಘಾಟಿಸಿ ಮಾತನಾಡಿದ ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು, ಬೈಂದೂರಿನಿಂದ ಮಂಗಳೂರಿನ ಉಳ್ಳಾಲದವರೆಗೆ ಕಡಲ ಕಿನಾರೆಯಲ್ಲಿ ಪ್ರಯಾಣಿಕರ ಬೋಟನ್ನು ಪ್ರಾರಂಭಿಸುವ ಚಿಂತನೆ ಇದೆ. ಹೆದ್ದಾರಿಗೆ ಪರ್ಯಾಯವಾಗಿ ಸಮುದ್ರ ಕಿನಾರೆಯಲ್ಲಿ ವಾಟರ್ ಮೆಟ್ರೋ ಮಾದರಿಯಲ್ಲಿ ಈ ಪ್ರಯಾಣಿಕರ ಹಡಗು ಆರಂಭಿಸಬೇಕೆಂಬುದು ನಮ್ಮ ಗುರಿಯಾಗಿದೆ. ಅದಕ್ಕಾಗಿ ಕೇಂದ್ರ ಸರಕಾರಕ್ಕೆ ಪ್ರಾಸ್ತಾವನೆ ಸಲ್ಲಿಸಲಾಗಿದೆ. ಈ ಪ್ರಯಾಣಿಕರ ಹಡಗಿಗೆ ಮಂಜೂರಾತಿ ದೊರತರೆ ಅದನ್ನು ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್ ಮೂಲಕವೇ ನಿರ್ಮಾಣ ಮಾಡಿಸಲಾಗುವುದು ಎಂದರು.

ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ಸ್ಥಳೀಯರಿಗೆ ಹೆಚ್ಚಿನ ಉದ್ಯೋಗ ಸಿಗಬೇಕು ಎಂಬುದು ನಮ್ಮ ಆಶಯ. ನಿಮ್ಮ ನಿಯಮಗಳನ್ನು ಗಮನದಲ್ಲಿ ಇಟ್ಟುಕೊಂಡು ಉಡುಪಿ ಜಿಲ್ಲೆಗೆ ಆದ್ಯತೆ ನೀಡಿ ಕರ್ನಾಟಕದವರಿಗೆ ಇದರಲ್ಲಿ ಅವಕಾಶವನ್ನು ಕಲ್ಪಿಸಿಕೊಡಬೇಕು. ಅದೇ ರೀತಿ ಸ್ಥಳೀಯ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಸಹಕರಿಸಬೇಕಾಗಿದೆ ಎಂದು ಅವರು ಹೇಳಿದರು.

ಮುಖ್ಯ ಅತಿಥಿಗಳಾಗಿ ಕೊಚ್ಚಿನ್ ಶಿಪ್‌ಯಾರ್ಡ್‌ನ ತಾಂತ್ರಿಕ ನಿರ್ದೇಶಕ ರಾಜೇಶ್ ಗೋಪಾಲ ಕೃಷ್ಣನ್, ಓಷಿಯನ್ ಸ್ಪಾರ್ಕಲ್‌ನ ಶಾಖಾ ಮುಖ್ಯಸ್ಥ ಮರಿಯಾ ಅನ್ಸೋನ್ ಹಾಗೂ ಪ್ರಶಾಂತ್ ನಾಯರ್ ಉಪಸ್ಥಿತರಿದ್ದರು.

ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರಿ ಕುಮಾರ್ ಎ. ಸ್ವಾಗತಿಸಿದರು. ಮುಖ್ಯ ಆರ್ಥಿಕ ಅಧಿಕಾರಿ ಶಂಕರ್ ನಟರಾಜ್ ವಂದಿಸಿದರು. ಸವಿತಾ ಕರ್ಕೇರ ಕಾರ್ಯಕ್ರಮ ನಿರೂಪಿಸಿದರು

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

12 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

15 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

15 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

16 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

16 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

16 hours ago