ಉಡುಪಿ: ಉಡುಪಿ ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ನಿಂದ ಅದಾನಿ ಪೋರ್ಟ್ಸ್ ಮತ್ತು ಎಸ್ಇಝೆಡ್ನ ಅಂಗ ಸಂಸ್ಥೆಯಾದ ಓಷಿಯನ್ ಸ್ಪಾರ್ಕಲ್ ಲಿಮಿಟೆಡ್ಗಾಗಿ ನಿರ್ಮಿಸಲಾದ 70 ಟನ್ ಬೊಲ್ಲಾರ್ಡ್ ಫುಲ್ ಟಗ್(ಹಡಗು) ಮಲ್ಪೆಯ ಶಿಪ್ ಬಿಲ್ಡಿಂಗ್ ಯಾರ್ಡ್ನಲ್ಲಿ ಲೋಕಾರ್ಪಣೆಗೊಂಡಿತು.
60ಕೋಟಿ ರೂ. ವೆಚ್ಚದ ಈ ಹಡಗು 33 ಮೀಟರ್ ಉದ್ದ, 12.2 ಮೀಟರ್ ಅಗಲ ಮತ್ತು 4.2 ಮೀಟರ್ ಆಳ ಹೊಂದಿದ್ದು, ಎರಡು 1838 ಕಿಲೋವಾಟ್ ಸಾಮರ್ಥ್ಯದ ಎಂಜಿನ್ಗಳನ್ನು ಮತ್ತು 2.7 ಮೀಟರ್ ಪ್ರೊಪೆಲರ್ಗಳು ಹಾಗೂ ಡೆಕ್ ಉಪಕರಣಗಳನ್ನು ಹೊಂದಿವೆ.
ಹಡಗನ್ನು ಉದ್ಘಾಟಿಸಿ ಮಾತನಾಡಿದ ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು, ಬೈಂದೂರಿನಿಂದ ಮಂಗಳೂರಿನ ಉಳ್ಳಾಲದವರೆಗೆ ಕಡಲ ಕಿನಾರೆಯಲ್ಲಿ ಪ್ರಯಾಣಿಕರ ಬೋಟನ್ನು ಪ್ರಾರಂಭಿಸುವ ಚಿಂತನೆ ಇದೆ. ಹೆದ್ದಾರಿಗೆ ಪರ್ಯಾಯವಾಗಿ ಸಮುದ್ರ ಕಿನಾರೆಯಲ್ಲಿ ವಾಟರ್ ಮೆಟ್ರೋ ಮಾದರಿಯಲ್ಲಿ ಈ ಪ್ರಯಾಣಿಕರ ಹಡಗು ಆರಂಭಿಸಬೇಕೆಂಬುದು ನಮ್ಮ ಗುರಿಯಾಗಿದೆ. ಅದಕ್ಕಾಗಿ ಕೇಂದ್ರ ಸರಕಾರಕ್ಕೆ ಪ್ರಾಸ್ತಾವನೆ ಸಲ್ಲಿಸಲಾಗಿದೆ. ಈ ಪ್ರಯಾಣಿಕರ ಹಡಗಿಗೆ ಮಂಜೂರಾತಿ ದೊರತರೆ ಅದನ್ನು ಉಡುಪಿ ಕೊಚ್ಚಿನ್ ಶಿಪ್ಯಾರ್ಡ್ ಮೂಲಕವೇ ನಿರ್ಮಾಣ ಮಾಡಿಸಲಾಗುವುದು ಎಂದರು.
ಉಡುಪಿ ಕೊಚ್ಚಿನ್ ಶಿಪ್ಯಾರ್ಡ್ನಲ್ಲಿ ಸ್ಥಳೀಯರಿಗೆ ಹೆಚ್ಚಿನ ಉದ್ಯೋಗ ಸಿಗಬೇಕು ಎಂಬುದು ನಮ್ಮ ಆಶಯ. ನಿಮ್ಮ ನಿಯಮಗಳನ್ನು ಗಮನದಲ್ಲಿ ಇಟ್ಟುಕೊಂಡು ಉಡುಪಿ ಜಿಲ್ಲೆಗೆ ಆದ್ಯತೆ ನೀಡಿ ಕರ್ನಾಟಕದವರಿಗೆ ಇದರಲ್ಲಿ ಅವಕಾಶವನ್ನು ಕಲ್ಪಿಸಿಕೊಡಬೇಕು. ಅದೇ ರೀತಿ ಸ್ಥಳೀಯ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಸಹಕರಿಸಬೇಕಾಗಿದೆ ಎಂದು ಅವರು ಹೇಳಿದರು.
ಮುಖ್ಯ ಅತಿಥಿಗಳಾಗಿ ಕೊಚ್ಚಿನ್ ಶಿಪ್ಯಾರ್ಡ್ನ ತಾಂತ್ರಿಕ ನಿರ್ದೇಶಕ ರಾಜೇಶ್ ಗೋಪಾಲ ಕೃಷ್ಣನ್, ಓಷಿಯನ್ ಸ್ಪಾರ್ಕಲ್ನ ಶಾಖಾ ಮುಖ್ಯಸ್ಥ ಮರಿಯಾ ಅನ್ಸೋನ್ ಹಾಗೂ ಪ್ರಶಾಂತ್ ನಾಯರ್ ಉಪಸ್ಥಿತರಿದ್ದರು.
ಉಡುಪಿ ಕೊಚ್ಚಿನ್ ಶಿಪ್ಯಾರ್ಡ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರಿ ಕುಮಾರ್ ಎ. ಸ್ವಾಗತಿಸಿದರು. ಮುಖ್ಯ ಆರ್ಥಿಕ ಅಧಿಕಾರಿ ಶಂಕರ್ ನಟರಾಜ್ ವಂದಿಸಿದರು. ಸವಿತಾ ಕರ್ಕೇರ ಕಾರ್ಯಕ್ರಮ ನಿರೂಪಿಸಿದರು
ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…
ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…
ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…
ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…
ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…
ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…