Featured

ಉಡುಪಿ: ಮಲ್ಪೆ ಪಡುಕೆರೆ ಸೇತುವೆ ಬಳಿ ನೀರಿಗೆ ಬಿದ್ದು ನಾಪತ್ತೆ ನಾಟಕವಾಡಿದ್ದ ಯುವಕ ದಾವಣಗೆರೆಯಲ್ಲಿ ಪತ್ತೆ – Vishwanews24

ಉಡುಪಿ: ಮಲ್ಪೆ ಪಡುಕೆರೆ ಸೇತುವೆ ಬಳಿ ನೀರಿಗೆ ಬಿದ್ದು ನಾಪತ್ತೆ : ಯುವಕ ದಾವಣಗೆರೆಯಲ್ಲಿ ಪತ್ತೆ..

ಪತ್ನಿಯನ್ನು ಬಿಟ್ಟು ಅನ್ಯ ಯುವತಿಯೊಂದಿಗೆ ಸಂಸಾರ ನಡೆಸುವ ಉದ್ದೇಶದಿಂದ ನೀರಿನಲ್ಲಿ ಮುಳುಗಿ ನಾಪತ್ತೆ ನಾಟಕವಾಡಿದ್ದ ಯುವಕ..

ಉಡುಪಿ : ಬೈಕ್‌, ಚಪ್ಪಲಿಯನ್ನು ಮಲ್ಪೆ ಪಡುಕೆರೆ ಸೇತುವೆ ಬಳಿ ಇರಿಸಿ ನೀರಿಗೆ ಬಿದ್ದು ನಾಪತ್ತೆಯಾದ ರೀತಿಯಲ್ಲಿ ನಾಟಕವಾಡಿದ ದಾವಣಗೆರೆ ಮೂಲದ ಯುವಕನೋರ್ವ ಆತನ ತವರು ಜಿಲ್ಲೆ ದಾವಣಗೆರೆಯಲ್ಲೇ ಸೋಮವಾರ ಪತ್ತೆಯಾಗಿದ್ದಾನೆ.

ಶಿವಪ್ಪ ನಾಯ್ಕ ನಾಪತ್ತೆ ನಾಟಕವಾಡಿ ಸಿಕ್ಕಿ ಬಿದ್ದಾತ. ಪತ್ನಿಯನ್ನು ಬಿಟ್ಟು, ಅನ್ಯ ಯುವತಿಯೊಂದಿಗೆ ಸಂಸಾರ ನಡೆಸುವ ಉದ್ದೇಶದಿಂದ ಆತ ನೀರಿನಲ್ಲಿ ಮುಳುಗಿ ನಾಪತ್ತೆಯಾದ ನಾಟಕವಾಡಿದ್ದ. ಪೊಲೀಸರ ಹಾದಿ ತಪ್ಪಿಸುವ ಉದ್ದೇಶ ಅವನದಾಗಿತ್ತು. ಆದರೆ ಆತನ ನಾಟಕದ ನೈಜತೆ ಇದೀಗ ಬಯಲಾಗಿದ್ದು, ದಾವಣಗೆರೆಯಲ್ಲಿ ಸೋಮವಾರ ಪತ್ತೆಯಾಗಿದ್ದಾನೆ. ಮಲ್ಪೆ ಪೊಲೀಸರು ಆತನನ್ನು ಠಾಣೆಗೆ ಕರೆ ತಂದಿದ್ದಾರೆ.

ಶಿವಪ್ಪ ನಾಯ್ಕ ಆರು ತಿಂಗಳ ಹಿಂದೆ ದಾವಣಗೆರೆ ಉತ್ಕಟಿ ತಾಂಡ ಮೂಲದ ಆಶಾ ಎಂಬಾಕೆಯನ್ನು ಪ್ರೀತಿಸಿ ವರಿಸಿದ್ದ. ಬಳಿಕ ಮಲ್ಪೆ ಕೊಳದಲ್ಲಿ ದಂಪತಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಮೀನುಗಾರಿಕೆ ಬಂದರಿನಲ್ಲಿ ಮೀನು ಹೊರುವ ಕೆಲಸ ನಿರ್ವಹಿಸುತ್ತಿದ್ದ. ಈ ನಡುವೆ ಮೀನುಗಾರಿಕಾ ಬಂದರಿನಲ್ಲಿ ಕೆಲಸ ಮಾಡುತ್ತಿದ್ದ ಹೊಸಪೇಟೆ ಹರಪ್ಪನಹಳ್ಳಿಯ ಕಮಲಿ ಎಂಬಾಕೆಯೊಂದಿಗೆ ಆತನ ಸಂಪರ್ಕ ಹೊಂದಿದ್ದ. ಬಳಿಕ ಆಕೆಯನ್ನು ಪಡೆಯುವ ಉದ್ದೇಶದಿಂದ ಪತ್ನಿಯೊಂದಿಗೆ ಗಲಾಟೆ ಮಾಡುತ್ತಿದ್ದ. ಸೆ. 23ರಂದು ಆತನ ಬೈಕ್ ಮತ್ತು ಚಪ್ಪಲಿ ಪಡುಕೆರೆ ಸೇತುವೆಯಲ್ಲಿ ಕಂಡು ಬಂದ ಹಿನ್ನೆಲೆಯಲ್ಲಿ ಆತ ಸೇತುವೆಯಿಂದ ನದಿಗೆ ಬಿದ್ದಿದ್ದಾನೆಂದು ಶಂಕಿಸಿ ನಾಪತ್ತೆ ದೂರು ದಾಖಲಿಸಲಾಗಿತ್ತು. ಬಳಿಕ ಪೊಲೀಸರ ಮನವಿ ಮೇರೆಗೆ ಮುಳುಗು ತಜ್ಞ ಈಶ್ವರ ಮಲ್ಪೆ ಅವರು ನದಿಯಲ್ಲಿ ಹುಡುಕಾಟ ನಡೆಸಿದ್ದರು. ಆದರೆ ಶಿವಪ್ಪ ಪತ್ತೆಯಾಗಿರಲಿಲ್ಲ.

ಸುರತ್ಕಲ್: ಭಾರ್ಗವಿ ಫೈನಾನ್ಸ್‌ ಮತ್ತು ಚಿಟ್ ಫಂಡ್ ಹೆಸರಲ್ಲಿ ವಂಚನೆ ಪ್ರಕರಣ : ಆರೋಪಿಗಳ ಸೆರೆ – Vishwanews24

ಬಳಿಕ ಆತನ ಮೊಬೈಲ್ ಪರಿಶೀಲಿಸಿದ ಪೊಲೀಸರಿಗೆ ಬ್ಯಾಂಕಿನಿಂದ 24 ಸಾವಿರ ರೂ. ಹಣ ಡ್ರಾ ಮಾಡಿರುವ ಮೆಸೇಜ್ ಬಂದಿರುವುದು ಗೊತ್ತಾಯಿತು. ಇದರಿಂದಾಗಿ ಆತ ಜೀವಂತ ಇರುವುದನ್ನು ಕಂಡುಕೊಂಡ ಪೊಲೀಸರು, ಸಂಬಂಧಿಕರ ಮೂಲಕ ಮಾಹಿತಿ ಪಡೆದುಕೊಂಡು ಆತನನ್ನು ಮಲ್ಪೆಗೆ ಕರೆಸಿಕೊಂಡಿದ್ದಾರೆ.

ವಿಚಾರಣೆ ವೇಳೆ ತನ್ನ ನಾಟಕವನ್ನು ಪೊಲೀಸರೆದುರು ಬಾಯ್ಬಿಟ್ಟಿದ್ದಾನೆ. ಬೈಕ್ ಬ್ರೇಕ್‌ ಒತ್ತಿ, ಎಕ್ಸಲೇಟರ್ ಜಾಸ್ತಿ ಮಾಡಿದಾಗ ಸೇತುವೆ ತಡೆಗೋಡೆಗೆ ತಾಗಿ ಆತ ನದಿಗೆ ಎಸೆಯಲ್ಪಟ್ಟಿದ್ದಾನೆ ಎಂದು ಬಿಂಬಿಸುವುದು ಆತನ ಉದ್ದೇಶವಾಗಿದೆ. ಅಲ್ಲದೆ ಕೋಳಿ ಕೊಯ್ದು ಅದರ ರಕ್ತವನ್ನು ರಸ್ತೆ ಮೇಲೆ ಹರಿಸಿದ್ದ. ಇದು ಆತನಿಗೆ ಅಪಘಾತದಲ್ಲಿ ಗಾಯವಾಗಿತ್ತು ಎಂದು ಬಿಂಬಿಸುವ ನಾಟಕವಾಗಿತ್ತು. ಒಂದು ಚಪ್ಪಲಿ ಮತ್ತು ಮೊಬೈಲ್‌ನ್ನು ಅಲ್ಲೇ ಬಿಟ್ಟ ಆತನ ಉಡುಪಿ ಲಾಡ್ಜ್‌ನಲ್ಲಿ ಉಳಿದು ಮರುದಿನ ಸಂಬಂಧಿಕರ ಮನೆಗೆ ಹೋಗಿದ್ದಾನೆ. ಪತ್ನಿ ಬಿಟ್ಟು ಅನ್ಯ ಯುವತಿಯೊಂದಿಗೆ ಸಂಸಾರ ನಡೆಸುವ ಉದ್ದೇಶದಿಂದ ಹೀಗೆ ಮಾಡಿರುವುದಾಗಿ ಬಾಯ್ಬಿಟ್ಟಿದ್ದಾನೆ. ಬಳಿಕ ಪತ್ನಿಯೊಂದಿಗೆ ಸಂಸಾರ ಮಾಡುವಂತೆ ಬುದ್ದಿವಾದ ಹೇಳಿ ಪೊಲೀಸರು ಆತನನ್ನು ಕಳುಹಿಸಿಕೊಟ್ಟಿದ್ದಾರೆ.

ಸಂಸದೆಯೊಂದಿಗೆ ಸೆಲ್ಫಿ ಮಿಥುನ್ ರೈ ಹೇಳಿಕೆಗೆ ಯಶ್ ಪಾಲ್ ಸುವರ್ಣ ತಿರುಗೇಟು

Vishwa News 24

Recent Posts

ಉಡುಪಿ :ಸಂಚಾರ ನಿಯಮ ಉಲ್ಲಂಘನೆ ಹಾಗೂ ಅತಿ ವೇಗದ ಚಾಲನೆಗೆ ಕಡಿವಾಣ ಹಾಕಲು ಜಿಲ್ಲೆಯಾದ್ಯಂತ ಹೈಟೆಕ್ ಸ್ಪೀಡ್ ರಾಡಾರ್ ಕ್ಯಾಮೆರಾ ಕಾರ್ಯಾರಂಭ -vishwanews24

ಉಡುಪಿ :ಸಂಚಾರ ನಿಯಮ ಉಲ್ಲಂಘನೆ ಹಾಗೂ ಅತಿ ವೇಗದ ಚಾಲನೆಗೆ ಕಡಿವಾಣ ಹಾಕಲು ಜಿಲ್ಲೆಯಾದ್ಯಂತ ಹೈಟೆಕ್ ಸ್ಪೀಡ್ ರಾಡಾರ್ ಕ್ಯಾಮೆರಾ…

14 hours ago

ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆ ಕಡಿತ ಮಾಡಲ್ಲ :  ಸಿದ್ದರಾಮಯ್ಯ ಸ್ಪಷ್ಟನೆ -vishwanews24

ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆ ಕಡಿತ ಮಾಡಲ್ಲ :  ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು : ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆಯನ್ನು…

19 hours ago

ಕರಾವಳಿಯಲ್ಲಿ ಜೂನ್ 1 ರಿಂದ ಜುಲೈ 31 ರವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ -vishwanews24

ಕರಾವಳಿಯಲ್ಲಿ ಜೂನ್ 1 ರಿಂದ ಜುಲೈ 31 ರವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ ಮಂಗಳೂರು/ಉಡುಪಿ :ಕರ್ನಾಟಕ ಸಮುದ್ರ ಮೀನುಗಾರಿಕೆ ನಿಯಂತ್ರಣ…

21 hours ago

ಶಿವಮೊಗ್ಗ : ಮೇ 22ರಿಂದ ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ -vishwanews24

ಶಿವಮೊಗ್ಗ : ಮೇ 22ರಿಂದ ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ ಶಿವಮೊಗ್ಗ: ದುಬಾರೆ ಆನೆ ಬಿಡಾರದಲ್ಲಿ ಎರಡು…

22 hours ago

ಬೆಳ್ತಂಗಡಿ : ಜಲಪಾತ ವೀಕ್ಷಣೆಗೆ ತೆರಳಿದ್ದ ಯುವತಿಯರಿಗೆ ಲೈಂಗಿಕ ಕಿರುಕುಳ; ಕಾಸರಗೋಡಿನ ಮೂವರು ಪೊಲೀಸ್ ವಶಕ್ಕೆ -vishwanews24

ಬೆಳ್ತಂಗಡಿ : ಜಲಪಾತ ವೀಕ್ಷಣೆಗೆ ತೆರಳಿದ್ದ ಯುವತಿಯರಿಗೆ ಲೈಂಗಿಕ ಕಿರುಕುಳ; ಕಾಸರಗೋಡಿನ ಮೂವರು ಪೊಲೀಸ್ ವಶಕ್ಕೆ ಬೆಳ್ತಂಗಡಿ : ಮಂಗಳೂರಿನಲ್ಲಿ…

22 hours ago

ರಾಜ್ಯಾದ್ಯಂತ ಇಂದಿನಿಂದ 4 ದಿನ ಭಾರೀ ಮಳೆ ಮುನ್ಸೂಚನೆ ; ಮುಂದಿನ 3 ದಿನ ಯೆಲ್ಲೋ ಅಲರ್ಟ್ ಘೋಷಣೆ  -vishwanews24

ರಾಜ್ಯಾದ್ಯಂತ ಇಂದಿನಿಂದ 4 ದಿನ ಭಾರೀ ಮಳೆ ಮುನ್ಸೂಚನೆ ; ಮುಂದಿನ 3 ದಿನ ಯೆಲ್ಲೋ ಅಲರ್ಟ್ ಘೋಷಣೆ  ಬೆಂಗಳೂರು…

22 hours ago