Featured

ಉಡುಪಿ: ಮಲ್ಪೆ ಬಂದರಿನಲ್ಲಿರುವ ಅಗ್ನಿಶಾಮಕ ದಳಕ್ಕೆ ತಕ್ಷಣ ವಾಹನ ಒದಗಿಸುವಂತೆ ಸರಕಾರಕ್ಕೆ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ – Vishwanews24

ಉಡುಪಿ: ಮಲ್ಪೆ ಬಂದರಿನಲ್ಲಿರುವ ಅಗ್ನಿಶಾಮಕ ದಳಕ್ಕೆ ಸರಕಾರ ತಕ್ಷಣ ವಾಹನ ಒದಗಿಸುವಂತೆ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ

ಉಡುಪಿ: ಮಲ್ಪೆ ಮೀನುಗಾರಿಕೆ ಬಂದರಿನಲ್ಲಿರುವ ಅಗ್ನಿಶಾಮಕ ದಳದ 15 ವರ್ಷ ಹಿಂದಿನ ಎರಡು ವಾಹನಗಳನ್ನು ಸರ್ಕಾರ ಎರಡು ತಿಂಗಳ ಹಿಂದೆ ಸೇವೆಯಿಂದ ಹಿಂಪಡೆದಿದ್ದು, ಇದೀಗ ತುರ್ತು ಸಂದರ್ಭದಲ್ಲಿ ಯಾವುದೇ ಅಗ್ನಿಶಾಮಕ ವಾಹನ ಲಭ್ಯವಿಲ್ಲದೆ ಸಮಸ್ಯೆ ಸೃಷ್ಟಿಯಾಗಿದೆ. ಸರಕಾರ ತಕ್ಷಣ ವಾಹನ ಒದಗಿಸುವಂತೆ ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಪತ್ರ ಬರೆದು ಆಗ್ರಹ ಮಾಡಿದ್ದಾರೆ.

ದೇಶದ ಪ್ರಮುಖ ಮೀನುಗಾರಿಕೆ ಬಂದರುಗಳಲ್ಲಿ ಒಂದಾದ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಈ ಹಿಂದೆ ಹಲವು ಅಗ್ನಿ ದುರಂತ ಪ್ರಕರಣದ ಬಳಿಕ ಮೀನುಗಾರರ ಬೇಡಿಕೆಗೆ ಸ್ಪಂದಿಸಿದ ಅಂದಿನ ಗೃಹ ಸಚಿವರಾಗಿದ್ದ ಡಾ. ವಿ. ಎಸ್. ಆಚಾರ್ಯ ಮಲ್ಪೆ ಮೀನುಗಾರಿಕಾ ಬಂದರಿನ ಸುರಕ್ಷತೆಯ ದೃಷ್ಟಿಯಿಂದ ಮಂಜೂರು ಮಾಡಿದ್ದ ಅಗ್ನಿಶಾಮಕ ದಳ ಇದೀಗ ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ.

ನಿನ್ನೆ ಮಲ್ಪೆಯಲ್ಲಿ ಸಂಭವಿಸಿದ ಅಗ್ನಿ ಅವಘಡದ ಸಂದರ್ಭದಲ್ಲಿ ಅಗ್ನಿಶಾಮಕದಳದ ವಾಹನ ಲಭ್ಯವಿಲ್ಲದೇ ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಇತ್ತೀಚೆಗೆ ಗಂಗೊಳ್ಳಿಯಲ್ಲಿ ನಡೆದ ಬೋಟ್ ಅಗ್ನಿ ದುರಂತ ಘಟನೆಯ ಬಳಿಕವೂ ಎಚ್ಚೆತ್ತುಕೊಳ್ಳದ ಸರ್ಕಾರ ಮೀನುಗಾರರ ಜೀವನದೊಂದಿಗೆ ಚೆಲ್ಲಾಟವಾಡುತ್ತಿದೆ.

ರಾಜ್ಯದಾದ್ಯಂತ 15 ವರ್ಷ ಹಿಂದಿನ ಸುಮಾರು 250 ಅಗ್ನಿಶಾಮಕ ದಳದ ವಾಹನವನ್ನು ಸಾರಿಗೆ ಇಲಾಖೆಯ ನಿಯಮದಂತೆ ಸೇವೆಯಿಂದ ಹಿಂಪಡೆದಿದ್ದು ಈವರೆಗೆ ಯಾವುದೇ ಹೊಸ ವಾಹನವನ್ನು ಒದಗಿಸಿಲ್ಲ.

ಬೇಸಿಗೆ ಸಂದರ್ಭದಲ್ಲಿ ಗಣನೀಯ ಪ್ರಮಾಣದ ಅಗ್ನಿ ಆಕಸ್ಮಿಕ ಗಳು ಸಂಭವಿಸುವ ಸಾಧ್ಯತೆಯ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಸಮಸ್ಯೆಯ ಗಂಭೀರತೆ ಅರಿತು ಸಾವಿರಾರು ಮೀನುಗಾರಿಕಾ ಬೋಟ್ ಗಳು ಮೀನುಗಾರಿಕೆ ನಡೆಸುವ ಮಲ್ಪೆ ಮೀನುಗಾರಿಕಾ ಬಂದರಿನ ಅಗ್ನಿಶಾಮಕ ದಳಕ್ಕೆ ತಕ್ಷಣ ವಾಹನ ಒದಗಿಸುವಂತೆ ಹಾಗೂ ರಾಜ್ಯದಾದ್ಯಂತ ಎಲ್ಲಾ ಅಗ್ನಿಶಾಮಕ ದಳಕ್ಕೆ ಅಗತ್ಯ ಮೂಲ ಸೌಕರ್ಯ ಒದಗಿಸುವಂತೆ ಆಗ್ರಹ ಮಾಡಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago