Featured

ಉಡುಪಿ: ಮಲ್ಪೆ ಬಂದರಿನಲ್ಲಿರುವ ಅಗ್ನಿಶಾಮಕ ದಳಕ್ಕೆ ತಕ್ಷಣ ವಾಹನ ಒದಗಿಸುವಂತೆ ಸರಕಾರಕ್ಕೆ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ – Vishwanews24

ಉಡುಪಿ: ಮಲ್ಪೆ ಬಂದರಿನಲ್ಲಿರುವ ಅಗ್ನಿಶಾಮಕ ದಳಕ್ಕೆ ಸರಕಾರ ತಕ್ಷಣ ವಾಹನ ಒದಗಿಸುವಂತೆ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ

ಉಡುಪಿ: ಮಲ್ಪೆ ಮೀನುಗಾರಿಕೆ ಬಂದರಿನಲ್ಲಿರುವ ಅಗ್ನಿಶಾಮಕ ದಳದ 15 ವರ್ಷ ಹಿಂದಿನ ಎರಡು ವಾಹನಗಳನ್ನು ಸರ್ಕಾರ ಎರಡು ತಿಂಗಳ ಹಿಂದೆ ಸೇವೆಯಿಂದ ಹಿಂಪಡೆದಿದ್ದು, ಇದೀಗ ತುರ್ತು ಸಂದರ್ಭದಲ್ಲಿ ಯಾವುದೇ ಅಗ್ನಿಶಾಮಕ ವಾಹನ ಲಭ್ಯವಿಲ್ಲದೆ ಸಮಸ್ಯೆ ಸೃಷ್ಟಿಯಾಗಿದೆ. ಸರಕಾರ ತಕ್ಷಣ ವಾಹನ ಒದಗಿಸುವಂತೆ ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಪತ್ರ ಬರೆದು ಆಗ್ರಹ ಮಾಡಿದ್ದಾರೆ.

ದೇಶದ ಪ್ರಮುಖ ಮೀನುಗಾರಿಕೆ ಬಂದರುಗಳಲ್ಲಿ ಒಂದಾದ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಈ ಹಿಂದೆ ಹಲವು ಅಗ್ನಿ ದುರಂತ ಪ್ರಕರಣದ ಬಳಿಕ ಮೀನುಗಾರರ ಬೇಡಿಕೆಗೆ ಸ್ಪಂದಿಸಿದ ಅಂದಿನ ಗೃಹ ಸಚಿವರಾಗಿದ್ದ ಡಾ. ವಿ. ಎಸ್. ಆಚಾರ್ಯ ಮಲ್ಪೆ ಮೀನುಗಾರಿಕಾ ಬಂದರಿನ ಸುರಕ್ಷತೆಯ ದೃಷ್ಟಿಯಿಂದ ಮಂಜೂರು ಮಾಡಿದ್ದ ಅಗ್ನಿಶಾಮಕ ದಳ ಇದೀಗ ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ.

ನಿನ್ನೆ ಮಲ್ಪೆಯಲ್ಲಿ ಸಂಭವಿಸಿದ ಅಗ್ನಿ ಅವಘಡದ ಸಂದರ್ಭದಲ್ಲಿ ಅಗ್ನಿಶಾಮಕದಳದ ವಾಹನ ಲಭ್ಯವಿಲ್ಲದೇ ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಇತ್ತೀಚೆಗೆ ಗಂಗೊಳ್ಳಿಯಲ್ಲಿ ನಡೆದ ಬೋಟ್ ಅಗ್ನಿ ದುರಂತ ಘಟನೆಯ ಬಳಿಕವೂ ಎಚ್ಚೆತ್ತುಕೊಳ್ಳದ ಸರ್ಕಾರ ಮೀನುಗಾರರ ಜೀವನದೊಂದಿಗೆ ಚೆಲ್ಲಾಟವಾಡುತ್ತಿದೆ.

ರಾಜ್ಯದಾದ್ಯಂತ 15 ವರ್ಷ ಹಿಂದಿನ ಸುಮಾರು 250 ಅಗ್ನಿಶಾಮಕ ದಳದ ವಾಹನವನ್ನು ಸಾರಿಗೆ ಇಲಾಖೆಯ ನಿಯಮದಂತೆ ಸೇವೆಯಿಂದ ಹಿಂಪಡೆದಿದ್ದು ಈವರೆಗೆ ಯಾವುದೇ ಹೊಸ ವಾಹನವನ್ನು ಒದಗಿಸಿಲ್ಲ.

ಬೇಸಿಗೆ ಸಂದರ್ಭದಲ್ಲಿ ಗಣನೀಯ ಪ್ರಮಾಣದ ಅಗ್ನಿ ಆಕಸ್ಮಿಕ ಗಳು ಸಂಭವಿಸುವ ಸಾಧ್ಯತೆಯ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಸಮಸ್ಯೆಯ ಗಂಭೀರತೆ ಅರಿತು ಸಾವಿರಾರು ಮೀನುಗಾರಿಕಾ ಬೋಟ್ ಗಳು ಮೀನುಗಾರಿಕೆ ನಡೆಸುವ ಮಲ್ಪೆ ಮೀನುಗಾರಿಕಾ ಬಂದರಿನ ಅಗ್ನಿಶಾಮಕ ದಳಕ್ಕೆ ತಕ್ಷಣ ವಾಹನ ಒದಗಿಸುವಂತೆ ಹಾಗೂ ರಾಜ್ಯದಾದ್ಯಂತ ಎಲ್ಲಾ ಅಗ್ನಿಶಾಮಕ ದಳಕ್ಕೆ ಅಗತ್ಯ ಮೂಲ ಸೌಕರ್ಯ ಒದಗಿಸುವಂತೆ ಆಗ್ರಹ ಮಾಡಿದ್ದಾರೆ.

Vishwa News 24

Recent Posts

ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು -vishwanews24

ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…

2 days ago

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ -vishwanews24

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್‌…

2 days ago

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು -vishwanews24

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…

2 days ago

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ -vishwanews24

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…

2 days ago

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ -vishwanews24

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…

2 days ago

ಶಿರ್ವ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು -vishwanews24

ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…

2 days ago