Featured

ಉಡುಪಿ : ಮಲ್ಪೆ ಬಂದರಿನಲ್ಲಿ ಬಲೆಗೆ ಬಿದ್ದ ಅಪರೂಪದ  ಹೆಲಿಕಾಪ್ಟರ್ ಮೀನು ; ಕೇರಳದಲ್ಲಿ ಇದಕ್ಕೆ ಭಾರೀ ಬೇಡಿಕೆ  – VIshwanews24

ಉಡುಪಿ: ಅರಬ್ಬೀ ಸಮುದ್ರದಿಂದ ಭಾರೀ ಗಾತ್ರದ ಹೆಲಿಕಾಪ್ಟರ್ ಫಿಶ್‍ನನ್ನು ಬಲೆಹಾಕಿ ಹಿಡಿಯಲಾಗಿದೆ. ಮಲ್ಪೆ ಸರ್ವಋತು ಮೀನುಗಾರಿಕಾ ಬಂದರಿನಲ್ಲಿ ಅಪರೂಪದ ಮೀನೊಂದು ಕಾಣಿಸಿಕೊಂಡು ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ. ಹೆಲಿಕಾಪ್ಟರ್ ಮೀನಿನ ಗಾತ್ರ ಆಕಾರ ನೋಡಿದರೆ ಆಶ್ಚರ್ಯಗೊಳ್ಳುತ್ತಾರೆ.

ಉಡುಪಿಯ ಮಲ್ಪೆ ಬಂದರಿನಲ್ಲಿ ಭಾರೀ ಗಾತ್ರ ಉದ್ದ ಬಾಲ, ಅಕ್ಕಪಕ್ಕ ಬೆನ್ನ ಮೇಲೆ ಅಗಲಗಲ ರೆಕ್ಕೆಯಿರುವ ಬಲು ಅಪರೂಪದ ಮೀನು ಸಿಕ್ಕಿದೆ. ಉಡುಪಿಯಿಂದ ಪಶ್ಚಿಮ ಕಡಲ ತೀರದಲ್ಲಿ ಸುಮಾರು 20 ನಾಟೇಕಲ್ ದೂರದಲ್ಲಿ ಲುಕ್ಮನ್ ಎಂಬವರಿಗೆ ಸೇರಿದ ಮೀನುಗಾರಿಕಾ ಬೋಟ್ ನಲ್ಲಿ ಬಲೆ ಬೀಸಲಾಗಿತ್ತು. ಬಂಗುಡೆ, ಅಂಜಲ್ ಮೀನಿನ ಜೊತೆಗೆ ಭಾರೀ ಗಾತ್ರದ ಈ ಮೀನು ಬಿದ್ದಿದೆ.

ಕೋವಿಡ್‌ನಿಂದ ಮೃತಪಟ್ಟವರಿಗೆ ಪರಿಹಾರ ನೀಡಿಕೆಗೆ ಯಾವ ರಾಜ್ಯವೂ ತಡೆ ಒಡ್ಡಬಾರದು : ಸುಪ್ರೀಂ – Vishwanews24

ಸ್ಥಳೀಯವಾಗಿ ಇದಕ್ಕೆ ನೆಮ್ಮೀನ್ ಎಂಬ ಹೆಸರಿದೆ. ಹೆಲಿಕಾಪ್ಟರ್ ಫಿಶ್ ಅಂತ ಅಡ್ಡ ಹೆಸರಿದೆ. ಭಾರೀ ಗಾತ್ರದ ಮೀನು 84 ಕಿಲೋ ತೂಗುತ್ತಿತ್ತು. ಕರ್ನಾಟಕದ ಮಂದಿಗೆ ಹೆಲಿಕಾಪ್ಟರ್ ಫಿಶ್ ನ ಮಾಂಸ ಇಷ್ಟ ಇಲ್ಲ. ಇಲ್ಲಿನವರಿಗೆ ಅದರ ರುಚಿ ಹಿಡಿಸುವುದಿಲ್ಲ. ಕೇರಳಿಗರು ಕೆಜಿಗೆ ಐವತ್ತು ರೂಪಾಯಿ ಕೊಟ್ಟು ನೆಮ್ಮೀನ್ ನ ಮಾಂಸವನ್ನು ಖರೀದಿ ಮಾಡುತ್ತಾರೆ. ಮಲ್ಪೆಯಿಂದ ಮಂಗಳೂರು ಮೂಲಕ ಕೇರಳಕ್ಕೆ ನೆಮ್ಮಿನನ್ನು ರವಾನೆ ಮಾಡಲಾಯಿತು.

Vishwa News 24

Recent Posts

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

9 hours ago

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

12 hours ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

12 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

12 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

12 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

12 hours ago