ಉಡುಪಿ: ನೀರಿಗಿಳಿದ ಮೂರು ಪ್ರವಾಸಿಗರರು ಸಮುದ್ರಪಾಲಾದ ಘಟನೆ ಉಡುಪಿಯ ಮಲ್ಪೆ ಬೀಚ್ನಲ್ಲಿ ಸಂಭವಿಸಿದೆ. ಸಮುದ್ರದ ಅಲೆಗಳ ಸೆಳೆತಕ್ಕೆ ಕೊಚ್ಚಿಹೋದ ಮೂವರ ಪೈಕಿ ಓರ್ವ ಸಾವನ್ನಪ್ಪಿದರೆ ಮತ್ತಿಬ್ಬರನ್ನು ರಕ್ಷಿಸಲಾಗಿದೆ.
ಮೃತರನ್ನು ಹಾಸನ ಜಿಲ್ಲೆಯ ದಾಬೆಬೇಲೂರು ನಿವಾಸಿ ಗಿರೀಶ್ ಎಂದು ಗುರುತಿಸಲಾಗಿದೆ. ಸಂತೋಷ್ ಹಾಗೂ ಮತ್ತೊಬ್ಬರನ್ನು ರಕ್ಷಿಸಲಾಗಿದ್ದು, ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದಾಬೆ ಬೇಲೂರಿನಿಂದ 20 ಜನರು ಮಲ್ಪೆ ಬೀಚ್ ಗೆ ಪ್ರವಾಸಕ್ಕೆ ಬಂದಿದ್ದರು. ಸಮುದ್ರಕ್ಕಿಳಿದು ಸ್ನಾನ ಮಾಡುತ್ತಿದ್ದಾಗ ಮೂವರು ಅಲೆಗಳ ಸೆಳೆತಕ್ಕೆ ಕೊಚ್ಚಿಹೋಗಿದ್ದಾರೆ.
ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ಮುಳುಗು ತಜ್ಞ ಈಶ್ವರ್ ಮಲ್ಪೆ ಹಾಗೂ ತಂಡದವರು ಮೂವರನ್ನು ರಕ್ಷಿಸಿ, ದಡಕ್ಕೆ ತಂದಿದ್ದಾರೆ. ಮೂವರ ಪೈಕಿ ಗಂಭೀರ ಸ್ಥಿತಿಯಲ್ಲಿದ್ದ ಗಿರೀಶ್ ಅವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಇಬ್ಬರು ಬಚಾವ್ ಆಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…
ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…
ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್ ವಾಹನ ಡಿಕ್ಕಿ : ಐವರು ದುರ್ಮರಣ ಕೊಪ್ಪಳ: ಗೂಡ್ಸ್ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…
ಮಲ್ಪೆ ಪ್ರಕರಣ: ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಬೆಂಗಳೂರು: ಕಳೆದ ವರ್ಷ ಮಲ್ಪೆ ಬಂದರಿನಲ್ಲಿ ಕಳ್ಳತನ ಮಾಡಿ…