ಉಡುಪಿ: ಮಹಾಲಕ್ಷ್ಮಿ ಬ್ಯಾಂಕ್ ನ ಮಲ್ಪೆ ಬ್ರಾಂಚ್ ನಲ್ಲಿ ಕೋಟ್ಯಂತರ ರೂ. ಅವ್ಯವಹಾರ ನಡೆದಿದ್ದು ಅದನ್ನು ಎಸ್ಐಟಿ ತನಿಖೆಗೆ ಒಪ್ಪಿಸಬೇಕು ಎಂದು ಮಾಜಿ ಶಾಸಕ ರಘುಪತಿ ಭಟ್ ಒತ್ತಾಯಿಸಿದ್ದಾರೆ.
ಉಡುಪಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ರಘುಪತಿ ಭಟ್ ವಂಚನೆಗೊಳಗಾದ ನೂರು ಮಂದಿ ಜೊತೆಗೆ ಸುದ್ದಿಗೋಷ್ಠಿ ನಡೆಸಿದರು. ಬ್ಯಾಂಕ್ ನಲ್ಲಿ ಮೂರು ರೀತಿಯ ಅಕ್ರಮ ನಡೆದಿದೆ. ಮೊದಲನೆಯದಾಗಿ ಹಲವು ಮಂದಿಗೆ ಬ್ಯಾಂಕ್ ನವರೇ ಅವರ ಮನೆಗೆ ತೆರಳಿ 20,30 ಸಾವಿರ ಸಾಲ ನೀಡಿದ್ದಾರೆ. ಈಗ ಬ್ಯಾಂಕ್ ನಿಂದ ಎರಡು ಲಕ್ಷ ಕಟ್ಟಬೇಕು ಎಂಬ ನೋಟೀಸ್ ನೀಡಲಾಗಿದೆ. ಇನ್ನೂ ಕೆಲವರಿಗೆ ಮೀನುಗಾರಿಕೆಗಾಗಿ ಸಾಲದ ಹೆಸರಿನಲ್ಲಿ ಸಹಿ ಪಡೆಯಲಾಗಿದ್ದು ಅವರಿಗೆ ಯಾವುದೇ ಹಣ ನೀಡಿಲ್ಲ. ಇದೇ ರೀತಿ ಹಲವಾರು ರೀತಿಯಲ್ಲಿ ಬ್ಯಾಂಕ್ ನವರು ಕೋಟ್ಯಂತರ ರೂ. ಅಕ್ರಮ ಎಸಗಿದ್ದಾರೆ.
ಸಂತ್ರಸ್ತರು ಈಗ ತಮ್ಮನ್ನು ಸಂಪರ್ಕಿಸಿದ್ದು ನ್ಯಾಯಕ್ಕಾಗಿ ಒತ್ತಾಯ ಮಾಡಿದ್ದಾರೆ. ಅವರ ದನಿಯಾಗಿ ನಾನು ಅವರ ಜೊತೆ ನಿಂತಿದ್ದೇನೆ. ಸರಕಾರ ಮಹಾಲಕ್ಷ್ಮಿ ಬ್ಯಾಂಕ್ ವಿರುದ್ಧ ಎಸ್ಐಟಿ ತನಿಖೆ ನಡೆಸುವ ಮೂಲಕ ನೊಂದವರಿಗೆ ನ್ಯಾಯ ಒದಗಿಸಿಕೊಡಬೇಕು ಮತ್ತು ಬ್ಯಾಂಕ್ ನವರು ಆಣೆ ಪುಮಾಣಕ್ಕೆ ಆಹ್ವಾನ ನೀಡಿದ್ದು ತಾವದಕ್ಕೆ ಸಿದ್ಧ ಎಂದು ರಘುಪತಿ ಭಟ್ ಅವರು ಹೇಳಿದ್ದಾರೆ . ರಘುಪತಿ ಭಟ್ ಜೊತೆಗೆ ಬ್ಯಾಂಕ್ ನಿಂದ ನೊಂದ ಸುಮಾರು ನೂರು ಮಂದಿ ಜನರು ಉಪಸ್ಥಿತರಿದ್ದು ತಮ್ಮ ಸಮಸ್ಯೆಗಳನ್ನು ಮಾಧ್ಯಮದ ಮುಂದೆ ಹಂಚಿಕೊಂಡರು.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…