ಉಡುಪಿ: ಮಹಾಲಕ್ಷ್ಮಿ ಬ್ಯಾಂಕ್ ನ ಮಲ್ಪೆ ಬ್ರಾಂಚ್ ನಲ್ಲಿ ಕೋಟ್ಯಂತರ ರೂ. ಅವ್ಯವಹಾರ ನಡೆದಿದ್ದು ಅದನ್ನು ಎಸ್ಐಟಿ ತನಿಖೆಗೆ ಒಪ್ಪಿಸಬೇಕು ಎಂದು ಮಾಜಿ ಶಾಸಕ ರಘುಪತಿ ಭಟ್ ಒತ್ತಾಯಿಸಿದ್ದಾರೆ.
ಉಡುಪಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ರಘುಪತಿ ಭಟ್ ವಂಚನೆಗೊಳಗಾದ ನೂರು ಮಂದಿ ಜೊತೆಗೆ ಸುದ್ದಿಗೋಷ್ಠಿ ನಡೆಸಿದರು. ಬ್ಯಾಂಕ್ ನಲ್ಲಿ ಮೂರು ರೀತಿಯ ಅಕ್ರಮ ನಡೆದಿದೆ. ಮೊದಲನೆಯದಾಗಿ ಹಲವು ಮಂದಿಗೆ ಬ್ಯಾಂಕ್ ನವರೇ ಅವರ ಮನೆಗೆ ತೆರಳಿ 20,30 ಸಾವಿರ ಸಾಲ ನೀಡಿದ್ದಾರೆ. ಈಗ ಬ್ಯಾಂಕ್ ನಿಂದ ಎರಡು ಲಕ್ಷ ಕಟ್ಟಬೇಕು ಎಂಬ ನೋಟೀಸ್ ನೀಡಲಾಗಿದೆ. ಇನ್ನೂ ಕೆಲವರಿಗೆ ಮೀನುಗಾರಿಕೆಗಾಗಿ ಸಾಲದ ಹೆಸರಿನಲ್ಲಿ ಸಹಿ ಪಡೆಯಲಾಗಿದ್ದು ಅವರಿಗೆ ಯಾವುದೇ ಹಣ ನೀಡಿಲ್ಲ. ಇದೇ ರೀತಿ ಹಲವಾರು ರೀತಿಯಲ್ಲಿ ಬ್ಯಾಂಕ್ ನವರು ಕೋಟ್ಯಂತರ ರೂ. ಅಕ್ರಮ ಎಸಗಿದ್ದಾರೆ.
ಸಂತ್ರಸ್ತರು ಈಗ ತಮ್ಮನ್ನು ಸಂಪರ್ಕಿಸಿದ್ದು ನ್ಯಾಯಕ್ಕಾಗಿ ಒತ್ತಾಯ ಮಾಡಿದ್ದಾರೆ. ಅವರ ದನಿಯಾಗಿ ನಾನು ಅವರ ಜೊತೆ ನಿಂತಿದ್ದೇನೆ. ಸರಕಾರ ಮಹಾಲಕ್ಷ್ಮಿ ಬ್ಯಾಂಕ್ ವಿರುದ್ಧ ಎಸ್ಐಟಿ ತನಿಖೆ ನಡೆಸುವ ಮೂಲಕ ನೊಂದವರಿಗೆ ನ್ಯಾಯ ಒದಗಿಸಿಕೊಡಬೇಕು ಮತ್ತು ಬ್ಯಾಂಕ್ ನವರು ಆಣೆ ಪುಮಾಣಕ್ಕೆ ಆಹ್ವಾನ ನೀಡಿದ್ದು ತಾವದಕ್ಕೆ ಸಿದ್ಧ ಎಂದು ರಘುಪತಿ ಭಟ್ ಅವರು ಹೇಳಿದ್ದಾರೆ . ರಘುಪತಿ ಭಟ್ ಜೊತೆಗೆ ಬ್ಯಾಂಕ್ ನಿಂದ ನೊಂದ ಸುಮಾರು ನೂರು ಮಂದಿ ಜನರು ಉಪಸ್ಥಿತರಿದ್ದು ತಮ್ಮ ಸಮಸ್ಯೆಗಳನ್ನು ಮಾಧ್ಯಮದ ಮುಂದೆ ಹಂಚಿಕೊಂಡರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…