ಉಡುಪಿ: ಹಿಜಾಬ್ ವಿವಾದ ಪ್ರಕರಣದಲ್ಲಿ ಹೈಕೋರ್ಟ್ ಮೆಟ್ಟಿಲೇರಿರುವ ವಿದ್ಯಾರ್ಥಿನಿಯ ಕುಟುಂಬದ ಸದಸ್ಯರ ಮೇಲೆ ಹಲ್ಲೆ ನಡೆಸಿದ್ದು, ಈ ಘಟನೆಯಲ್ಲಿ ಶಾಸಕ ರಘುಪತಿ ಭಟ್ ಕೈವಾಡ ಇದೆ ಎಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಆರೋಪಿಸಿದೆ.
ವಿದ್ಯಾರ್ಥಿನಿ ಶಿಫಾ ಅವರ ಸಹೋದರ ಸೈಫ್ ಮೇಲೆ ತಂಡದಿಂದ ಹಲ್ಲೆ ಪ್ರಕರಣ ನಡೆದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಫ್ಐ ಜಿಲ್ಲಾಧ್ಯಕ್ಷ ಅಸೀಲ್ ಅಕ್ರಂ, ಶಾಸಕ ರಘುಪತಿ ಭಟ್ ಕೈವಾಡ ಇದೆ ಎಂದು ಆರೋಪಿಸಿದ್ದು, ಕೆಲವರು ಬಿಸ್ಮಿಲ್ಲಾ ಹೋಟೆಲ್ಗೆ ತೆರಳದಂತೆ ಜನರನ್ನು ಒತ್ತಾಯಿಸುತ್ತಿದ್ದಾರೆ ಎಂದರು.
ಅಲ್ಲದೆ ಸೈಫ್ಗೆ ಈ ಹಿಂದೆಯೇ ಬೆದರಿಕೆ ಹಾಕಲಾಗಿತ್ತು, ಆದರೆ ನಿನ್ನೆ ಅವರು ಹೋಟೆಲ್ ಮುಚ್ಚುವ ಸಮಯದಲ್ಲಿ 50 ಜನರ ಗುಂಪೊಂದು ಕಲ್ಲು ತೂರಾಟ ನಡೆಸಿದೆ ಹಾಗೂ ಆತನ ಮೇಲೆ ಆರು ಜನರು ಹಲ್ಲೆ ಮಾಡಿದ್ದಾರೆ ಎಂದರು.
ಇದನ್ನೂ ಓದಿ :
ಇನ್ನು ಖಾಸಗಿ ಟೆಲಿವಿಷನ್ ಚಾನೆಲ್ನ ಕ್ಯಾಮರಾದಲ್ಲಿ ಬಿಸ್ಮಿಲ್ಲಾ ಹೋಟೆಲ್ ಮೇಲೆ ದಾಳಿ ನಡೆಸಿದ ಚಿತ್ರಣವು ಸೆರೆಯಾಗಿದ್ದು, ಈ ವೀಡಿಯೋವನ್ನು ಪ್ರಸಾರ ಮಾಡಿದ ನಂತರ ಹೈದರ್ ಅವರಿಗೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಆರೋಪಿಸಿದರು.
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮತ್ತು ಹಿಜಾಬ್ ವಿಚಾರಕ್ಕೆ ಯಾವುದೇ ಸಂಬಂಧವಿಲ್ಲ. ವಿದ್ಯಾರ್ಥಿಗಳು ತಮ್ಮ ಹಕ್ಕನ್ನು ಕೇಳಿ ಅಷ್ಟೇ. ಇದುವರೆಗೆ ಹೈಕೋರ್ಟ್ನಲ್ಲಿ ನಡೆಯುತ್ತಿರುವ ವಾದಗಳು ನಮ್ಮ ಪರವಾಗಿವೆ. ತೀರ್ಪು ನಮ್ಮ ಪರವಾಗಿ ಬರುತ್ತದೆ ಎಂಬ ನಿರೀಕ್ಷೆ ಇದೆ ಎಂದು ಅವರು ಹೇಳಿದರು.
ಘಟನೆಯ ಕುರಿತು ಮಲ್ಪೆ ಠಾಣೆಯಲ್ಲಿ ದಾಖಲಿಸಿಲಾಗಿದ್ದು, ತಪ್ಪಿತಸ್ಥರ ವಿರುದ್ದ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು, ಇಲ್ಲವಾದರೆ ಸಿಎಫ್ಐ ವತಿಯಿಂದ ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದರು.
ಇದನ್ನೂ ಓದಿ :
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…