Featured

ಉಡುಪಿ : ಮಳೆಯಿಂದಾದ ಬೆಳೆ ಹಾನಿಗೆ ರಾಜ್ಯ ಸರಕಾರ ಗರಿಷ್ಠ ಮೊತ್ತದ ಪರಿಹಾರ ನೀಡಿ : ದೀಪಕ್ ಕೋಟ್ಯಾನ್ – VIshwanews24

ಉಡುಪಿ: ಮಳೆಯಿಂದಾದ ಬೆಳೆ ಹಾನಿಗೆ ರಾಜ್ಯ ಸರಕಾರ ಗರಿಷ್ಠ ಮೊತ್ತದ ಪರಿಹಾರ ನೀಡಿ : ದೀಪಕ್ ಕೋಟ್ಯಾನ್

ಉಡುಪಿ: ಕಳೆದ ಹತ್ತು ದಿನಗಳಿಂದ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಪ್ರವಾಹದಿಂದ ಜಿಲ್ಲೆಯ ಕೃಷಿಕರ ಸಾವಿರಾರು ಎಕರೆ ಪ್ರದೇಶದ ಭತ್ತ ಅಡಿಕೆ ಸೇರಿದಂತ ಹಲವಾರು ಬೆಳೆಗಳು ನಾಶವಾಗಿದ್ದು ಇದಕ್ಕೆ ರಾಜ್ಯ ಸರಕಾರ ಗರಿಷ್ಠ ಮೊತ್ತದ ಪರಿಹಾರವನ್ನು ನೀಡುವಂತೆ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್ ಆಗ್ರಹಿಸಿದ್ದಾರೆ.

ಜಿಲ್ಲೆಯ ರೈತರು ಈಗಷ್ಠೆ ಗದ್ದೆಗಳಲ್ಲಿ ನಾಟಿ ಕೆಲಸ ಆರಂಭಿಸಿದ್ದು ಇದೇ ಸಮಯದಲ್ಲಿ ಮಳೆಯಿಂದಾಗಿ ಜಿಲ್ಲೆಯಾದ್ಯಂತ ಭತ್ತದ ಕೃಷಿ ಸಂಪೂರ್ಣವಾಗಿ ಕೊಳೆತು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಲ್ಲದೆ ಕೃಷಿ ಮತ್ತು ತೋಟಗಾರಿಕೆ ಬೆಳೆಗಳಿಗೆ ಮಳೆ ಮತ್ತು ಪ್ರವಾಹದಿಂದ ದೊಡ್ಡ ಮೊತ್ತದ ಹೊಡೆತ ಬಿದ್ದಿದ್ದು ಇಲಾಖೆಯ ಅಧಿಕಾರಿಗಳು ಸಮೀಕ್ಷೆಯನ್ನು ನಡೆಸಲು ಆರಂಭಿಸಿದ್ದು ಸಮೀಕ್ಷಾ ವರದಿಯನ್ನು ಸಿದ್ದಪಡಿಸುವಾಗ ಯಾವುದೇ ರೈತರ ಹೆಸರೂ ಕೂಡ ಬಿಟ್ಟುಹೋಗದಂತೆ ಮತ್ತು ಗೊಂದಲಕ್ಕೆ ಕಾರಣವಾಗಬಾರದು.

ಸರಕಾರ ಸದ್ಯ ಕೃಷಿ ಮತ್ತು ತೋಟಗಾರಿಕಾ ಬೆಳೆ ಹಾನಿಗೆ ನೀಡುವ ಪರಿಹಾರ ರೈತರು ಮಾಡಿದ ಖರ್ಚಿಗೆ ಹೋಲಿಸಿದರೆ ಏನೇನು ಸಾಲದು. ಸರಕಾರ ಈ ಕುರಿತು ಚಿಂತನೆ ನಡೆಸಿ ಹಾನಿಗೊಳಾಗಾದ ರೈತರಿಗೆ ಗರಿಷ್ಠ ಮೊತ್ತ ಲಭಿಸುವಂತೆ ಪ್ಯಾಕೇಜ್ ಘೋಷಣೆ ಮಾಡಿದರೆ ಇದರಿಂದ ಅವರಿಗೆ ಕೊಂಚ ನೆಮ್ಮದಿ ಸಿಗಲು ಸಾಧ್ಯವಿದೆ.
ಪ್ರವಾಹದಿಂದಾಗಿ ಹಲವಾರು ರೈತರ ಜಾನುವಾರುಗಳು ಕೂಡ ಸಮಸ್ಯೆಗೆ ಸಿಲುಕಿದ್ದು ಅಂತಹ ಹೈನುಗಾರರಿಗೆ ಕೂಡ ಸರಕಾರ ಪರಿಹಾರ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

 

Vishwa News 24

Recent Posts

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

7 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

8 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

8 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

23 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

23 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

23 hours ago