ಉಡುಪಿ: ಕಳೆದ ಹತ್ತು ದಿನಗಳಿಂದ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಪ್ರವಾಹದಿಂದ ಜಿಲ್ಲೆಯ ಕೃಷಿಕರ ಸಾವಿರಾರು ಎಕರೆ ಪ್ರದೇಶದ ಭತ್ತ ಅಡಿಕೆ ಸೇರಿದಂತ ಹಲವಾರು ಬೆಳೆಗಳು ನಾಶವಾಗಿದ್ದು ಇದಕ್ಕೆ ರಾಜ್ಯ ಸರಕಾರ ಗರಿಷ್ಠ ಮೊತ್ತದ ಪರಿಹಾರವನ್ನು ನೀಡುವಂತೆ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್ ಆಗ್ರಹಿಸಿದ್ದಾರೆ.
ಜಿಲ್ಲೆಯ ರೈತರು ಈಗಷ್ಠೆ ಗದ್ದೆಗಳಲ್ಲಿ ನಾಟಿ ಕೆಲಸ ಆರಂಭಿಸಿದ್ದು ಇದೇ ಸಮಯದಲ್ಲಿ ಮಳೆಯಿಂದಾಗಿ ಜಿಲ್ಲೆಯಾದ್ಯಂತ ಭತ್ತದ ಕೃಷಿ ಸಂಪೂರ್ಣವಾಗಿ ಕೊಳೆತು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಲ್ಲದೆ ಕೃಷಿ ಮತ್ತು ತೋಟಗಾರಿಕೆ ಬೆಳೆಗಳಿಗೆ ಮಳೆ ಮತ್ತು ಪ್ರವಾಹದಿಂದ ದೊಡ್ಡ ಮೊತ್ತದ ಹೊಡೆತ ಬಿದ್ದಿದ್ದು ಇಲಾಖೆಯ ಅಧಿಕಾರಿಗಳು ಸಮೀಕ್ಷೆಯನ್ನು ನಡೆಸಲು ಆರಂಭಿಸಿದ್ದು ಸಮೀಕ್ಷಾ ವರದಿಯನ್ನು ಸಿದ್ದಪಡಿಸುವಾಗ ಯಾವುದೇ ರೈತರ ಹೆಸರೂ ಕೂಡ ಬಿಟ್ಟುಹೋಗದಂತೆ ಮತ್ತು ಗೊಂದಲಕ್ಕೆ ಕಾರಣವಾಗಬಾರದು.
ಸರಕಾರ ಸದ್ಯ ಕೃಷಿ ಮತ್ತು ತೋಟಗಾರಿಕಾ ಬೆಳೆ ಹಾನಿಗೆ ನೀಡುವ ಪರಿಹಾರ ರೈತರು ಮಾಡಿದ ಖರ್ಚಿಗೆ ಹೋಲಿಸಿದರೆ ಏನೇನು ಸಾಲದು. ಸರಕಾರ ಈ ಕುರಿತು ಚಿಂತನೆ ನಡೆಸಿ ಹಾನಿಗೊಳಾಗಾದ ರೈತರಿಗೆ ಗರಿಷ್ಠ ಮೊತ್ತ ಲಭಿಸುವಂತೆ ಪ್ಯಾಕೇಜ್ ಘೋಷಣೆ ಮಾಡಿದರೆ ಇದರಿಂದ ಅವರಿಗೆ ಕೊಂಚ ನೆಮ್ಮದಿ ಸಿಗಲು ಸಾಧ್ಯವಿದೆ.
ಪ್ರವಾಹದಿಂದಾಗಿ ಹಲವಾರು ರೈತರ ಜಾನುವಾರುಗಳು ಕೂಡ ಸಮಸ್ಯೆಗೆ ಸಿಲುಕಿದ್ದು ಅಂತಹ ಹೈನುಗಾರರಿಗೆ ಕೂಡ ಸರಕಾರ ಪರಿಹಾರ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
ತಪ್ಪಿದ ಭಾರಿ ದುರಂತ: 4 ಗಂಟೆಗಳ ಕಾಲ ಆಗಸದಲ್ಲೇ ಸುತ್ತಾಟ ; ಹುಬ್ಬಳ್ಳಿ ತಲುಪಬೇಕಿದ್ದ ವಿಮಾನ ಬೆಂಗಳೂರಲ್ಲಿ ಲ್ಯಾಂಡ್ ಹುಬ್ಬಳ್ಳಿ:…
ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ ವಿಜಯಪುರ: ಮುಂದಿನ ತಿಂಗಳು ಒಳ್ಳೆಯ ಮುಹೂರ್ತ…
ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ ಬೆಂಗಳೂರು: ನಾವು ಮಹಿಳಾ…
ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ ಉಡುಪಿ: ಮಹತೋಭಾರ ಪೆರ್ಡೂರು ಅನಂತಪದ್ಮನಾಭ…
ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು ಪಡುಬಿದ್ರಿ : ರಾಂಗ್ ಸೈಡ್ನಿಂದ…
ಪುತ್ತೂರು: ಡಿವೈಡರ್ ಗೆ ಬೈಕ್ ಡಿಕ್ಕಿ ; ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ನಗರದ ಪಡೀಲ್ ಬಳಿ ಎರಡು ಬೈಕ್ಗಳ…