ಉಡುಪಿ: ಕಳೆದ ಹತ್ತು ದಿನಗಳಿಂದ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಪ್ರವಾಹದಿಂದ ಜಿಲ್ಲೆಯ ಕೃಷಿಕರ ಸಾವಿರಾರು ಎಕರೆ ಪ್ರದೇಶದ ಭತ್ತ ಅಡಿಕೆ ಸೇರಿದಂತ ಹಲವಾರು ಬೆಳೆಗಳು ನಾಶವಾಗಿದ್ದು ಇದಕ್ಕೆ ರಾಜ್ಯ ಸರಕಾರ ಗರಿಷ್ಠ ಮೊತ್ತದ ಪರಿಹಾರವನ್ನು ನೀಡುವಂತೆ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್ ಆಗ್ರಹಿಸಿದ್ದಾರೆ.
ಜಿಲ್ಲೆಯ ರೈತರು ಈಗಷ್ಠೆ ಗದ್ದೆಗಳಲ್ಲಿ ನಾಟಿ ಕೆಲಸ ಆರಂಭಿಸಿದ್ದು ಇದೇ ಸಮಯದಲ್ಲಿ ಮಳೆಯಿಂದಾಗಿ ಜಿಲ್ಲೆಯಾದ್ಯಂತ ಭತ್ತದ ಕೃಷಿ ಸಂಪೂರ್ಣವಾಗಿ ಕೊಳೆತು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಲ್ಲದೆ ಕೃಷಿ ಮತ್ತು ತೋಟಗಾರಿಕೆ ಬೆಳೆಗಳಿಗೆ ಮಳೆ ಮತ್ತು ಪ್ರವಾಹದಿಂದ ದೊಡ್ಡ ಮೊತ್ತದ ಹೊಡೆತ ಬಿದ್ದಿದ್ದು ಇಲಾಖೆಯ ಅಧಿಕಾರಿಗಳು ಸಮೀಕ್ಷೆಯನ್ನು ನಡೆಸಲು ಆರಂಭಿಸಿದ್ದು ಸಮೀಕ್ಷಾ ವರದಿಯನ್ನು ಸಿದ್ದಪಡಿಸುವಾಗ ಯಾವುದೇ ರೈತರ ಹೆಸರೂ ಕೂಡ ಬಿಟ್ಟುಹೋಗದಂತೆ ಮತ್ತು ಗೊಂದಲಕ್ಕೆ ಕಾರಣವಾಗಬಾರದು.
ಸರಕಾರ ಸದ್ಯ ಕೃಷಿ ಮತ್ತು ತೋಟಗಾರಿಕಾ ಬೆಳೆ ಹಾನಿಗೆ ನೀಡುವ ಪರಿಹಾರ ರೈತರು ಮಾಡಿದ ಖರ್ಚಿಗೆ ಹೋಲಿಸಿದರೆ ಏನೇನು ಸಾಲದು. ಸರಕಾರ ಈ ಕುರಿತು ಚಿಂತನೆ ನಡೆಸಿ ಹಾನಿಗೊಳಾಗಾದ ರೈತರಿಗೆ ಗರಿಷ್ಠ ಮೊತ್ತ ಲಭಿಸುವಂತೆ ಪ್ಯಾಕೇಜ್ ಘೋಷಣೆ ಮಾಡಿದರೆ ಇದರಿಂದ ಅವರಿಗೆ ಕೊಂಚ ನೆಮ್ಮದಿ ಸಿಗಲು ಸಾಧ್ಯವಿದೆ.
ಪ್ರವಾಹದಿಂದಾಗಿ ಹಲವಾರು ರೈತರ ಜಾನುವಾರುಗಳು ಕೂಡ ಸಮಸ್ಯೆಗೆ ಸಿಲುಕಿದ್ದು ಅಂತಹ ಹೈನುಗಾರರಿಗೆ ಕೂಡ ಸರಕಾರ ಪರಿಹಾರ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…