ಕರ್ಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುರ್ಪಾಡಿ ಭಾಗದಲ್ಲಿ ಭಾರೀ ಗಾಳಿ ಹಾಗೂ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ರವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸ್ಥಳದಲ್ಲಿ ಉಪಸ್ಥಿತರಿದ್ದ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ತಕ್ಷಣ ಹಾನಿಗೀಡಾದ ಮನೆ ಹಾಗೂ ತೋಟ ಹಾಗೂ ಕೃಷಿ ಬೆಳೆ ಹಾನಿಯ ಬಗ್ಗೆ ವರದಿ ನೀಡಿ ಗರಿಷ್ಠ ಪರಿಹಾರಕ್ಕೆ ಶಿಫಾರಸ್ಸು ಮಾಡುವಂತೆ ಸೂಚನೆ ನೀಡಿದರು.
ಸಂಪೂರ್ಣ ಹಾನಿಯಾದ ಮನೆಗಳ ಮರು ನಿರ್ಮಾಣಕ್ಕೆ ಈ ಹಿಂದೆ ರಾಜ್ಯ ಸರ್ಕಾರ ನೀಡುತ್ತಿದ್ದ ರೂ. 5 ಲಕ್ಷ ಪರಿಹಾರವನ್ನು 1.50 ಲಕ್ಷಕ್ಕೆ ಕಡಿತಗೊಳಿಸಿದ್ದು, ಸರ್ಕಾರ ಈ ಮೊತ್ತವನ್ನು 5 ಲಕ್ಷಕ್ಕೆ ಏರಿಕೆ ಹಾಗೂ ತುರ್ತು ಸಂದರ್ಭದಲ್ಲಿ 25 ಸಾವಿರ ಸ್ಥಳದಲ್ಲಿಯೇ ವಿತರಣೆ ಮಾಡುವಂತೆ ಆಗ್ರಹಿಸುವುದಾಗಿ ಹೇಳಿದರು.
ಘಟನೆ ಸಂಭವಿಸಿದ ಕೂಡಲೇ ಶಾಸಕರ ಸೂಚನೆ ಮೇರೆಗೆ ರಾತ್ರೋರಾತ್ರಿ ತಕ್ಷಣ ಪರಿಹಾರ ಕಾರ್ಯಾಚರಣೆಯಲ್ಲಿ ಸಹಕರಿಸಿದ ಕಂದಾಯ, ಅರಣ್ಯ ಅಗ್ನಿಶಾಮಕ, ಮೆಸ್ಕಾಂ, ಪೊಲೀಸ್ ಇಲಾಖೆಗಳ ಅಧಿಕಾರಿಗಳು, ಸ್ಥಳೀಯ ಸಂಘ ಸಂಸ್ಥೆಗಳ ಸದಸ್ಯರಿಗೆ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕರ್ಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಇನಕರ ಶೆಟ್ಟಿ, ಗ್ರಾಮ ಲೆಕ್ಕಾಧಿಕಾರಿ ಸೌಮ್ಯ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿರಾಜ್, ಬಿಜೆಪಿ ಮಂಡಲ ಅಧ್ಯಕ್ಷರಾದ ರಾಜೀವ್ ಕುಲಾಲ್, ಕಾರ್ಯದರ್ಶಿ ನವೀನ್ ಪುತ್ರನ್, ಪಕ್ಷದ ಪ್ರಮುಖರಾದ ಆದರ್ಶ ಶೆಟ್ಟಿ ಕೆಂಜೂರು, ವಿನುತ್ ಶೆಟ್ಟಿ, ಸುಧಾಕರ ಸುವರ್ಣ, ರಘು ನಾಯ್ಕ್, ಉಪೇಂದ್ರ, ಆಶಾ, ಅಕ್ಷಯ್, ಮಣಿಕಂಠ ಮೊದಲಾದವರು ಉಪಸ್ಥಿತರಿದ್ದರು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…