Featured

ಉಡುಪಿ : ಮಳೆಯ ಸಂದರ್ಭ ಸಿಡಿಲಿನ ಕುರಿತು ಮುನ್ಸೂಚನೆ ನೀಡಲಿದೆ “ಸಿಡಿಲು” ಆಪ್ – Vishwanews24

ಉಡುಪಿ : ಮಳೆಯ ಸಂದರ್ಭ ಸಿಡಿಲಿನ ಕುರಿತು ಮುನ್ಸೂಚನೆ ನೀಡಲಿದೆ “ಸಿಡಿಲು” ಆಪ್

ಉಡುಪಿ:ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಸಿಡಿಲಿನಿಂದ ರಕ್ಷಣೆ ಪಡೆಯಬಹುದಾದ ಸರಳ ಮಾರ್ಗಗಳನ್ನು ತಿಳಿಸಿದೆ.

ಸಿಡಿಲು-ಮೊಬೈಲ್‌ ಆಪ್ ನಲ್ಲಿ ಸಿಡಿಲಿನ ಬಗ್ಗೆ ಮುಂಚಿತವಾಗಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ.ಸಿಡಿಲಿನ ಸಂಭವನೀಯತೆ ಇದ್ದಲ್ಲಿ ಹೊರಗಿನ ಕೆಲಸಗಳನ್ನು ಮುಂದೂಡಿ, ಆದಷ್ಟು ಮನೆಯಲ್ಲಿಯೇ ಇರುವುದು ಸೂಕ್ತ. ಮನೆಯ ಸುತ್ತಲಿನಲ್ಲಿರುವ ಕೊಳೆತ ಹಾಗೂ ಒಣಗಿದ ಮರಗಳನ್ನು ತೆರವುಗೊಳಿಸಬೇಕು.

ಮನೆಯ ಒಳಗಿರುವಾಗ ಸಿಡಿಲು ಬಂದಾಗ ಕಿಟಕಿಯಿ0ದ ದೂರವಿರಬೇಕು, ಈ ಸಂದರ್ಭದಲ್ಲಿ ದೂರವಾಣಿ, ಮೊಬೈಲ್ ಮತ್ತುಎಲೆಕ್ಟಾçನಿಕ್ ಉಪಕರಣಗಳನ್ನು ಬಳಸಬಾರದು.ಗೃಹಪಯೋಗಿ ಉಪಕರಣಗಳ ಫ್ಲಗ್‌ಗಳನ್ನು ತೆಗೆದಿಡಬೇಕು.ಗೋಡೆಯಿಂದ ದೂರವಿರುವುದು ಉತ್ತಮ.ಒಣಮರದ ಪೀಠೋಪಕರಣಗಳು ಸುರಕ್ಷಿತವಾಗಿದ್ದು, ವಿದ್ಯುತೀಕರಣದ ಅಪಾಯ ಇರುವುದರಿಂದ ಸಿಡಿಲಿನ ಸಂದರ್ಭದಲ್ಲಿ ಸ್ನಾನ ಮತ್ತು ಪಾತ್ರೆ ಹಾಗೂ ಇತರ ನೀರಿನೊಂದಿಗಿನ ಕೆಲಸವನ್ನು ಮಾಡಬಾರದು.

ಹೊರಾಂಗಣದಲ್ಲಿದ್ದಾಗಸಿಡಿಲು ಬರುವ ಲಕ್ಷಣಗಳಿದ್ದಲ್ಲಿ ತಕ್ಷಣ ಸುರಕ್ಷಿತ ಕಟ್ಟಡಗಳ ಒಳಗೆ ಸೇರಿಕೊಳ್ಳಬೇಕು.ಎತ್ತರ ಪ್ರದೇಶದಲ್ಲಿ ಸಿಡಿಲಿನ ಪ್ರಭಾವ ಅಧಿಕವಾಗಿರುವುದರಿಂದ ತಗ್ಗು ಪ್ರದೇಶಗಳಿಗೆ ತೆರಳಬೇಕು. ಸಿಡಿಲಿನ ಸಂದರ್ಭದಲ್ಲಿ ಕೊಡೆ ಅಥವಾ ಛತ್ರಿಯನ್ನು ಬಳಸಬಾರದು.ಮಕ್ಕಳು ಈ ಸಂದರ್ಭದಲ್ಲಿ ಗಾಳಿಪಟವನ್ನು ಹಾರಿಸಬಾರದು.

ವಾಹನ ಚಲಿಸುವ ಸಂದರ್ಭದಲ್ಲಿ ಸಿಡಿಲು ಬಂದಾಗ ಮರ ಹಾಗೂ ತಂತಿಕ0ಬಗಳಿ0ದ ವಾಹನವನ್ನುದೂರ ನಿಲ್ಲಿಸಿ, ವಾಹನದೊಳಗೆ ಇರುವುದು ಸೂಕ್ತ. ಬಸ್‌ಗಳಲ್ಲಿ ಪ್ರಯಾಣಿಸುವಾಗ ಕಿಟಕಿಗಳ ಗಾಜನ್ನು ಮುಚ್ಚಬೇಕು.

ಕಾಡಿನಲ್ಲಿದ್ದ ಸಂದರ್ಭದಲ್ಲಿಕಡಿಮೆ ಮರಗಳಿರುವ ಪ್ರದೇಶದಲ್ಲಿ ಸಣ್ಣ ಮರದ ಕೆಳಗೆ ಆಶ್ರಯ ಪಡೆಯುಬೇಕು.ಗುಂಪಿನಲ್ಲಿದ್ದಾಗ ಜನರಿ0ದ ಪರಸ್ಪರ ಅಂತರವನ್ನು ಕಾಪಾಡಿಕೊಳ್ಳುವಂತೆ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

23 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

23 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago