ಉಡುಪಿ:ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಸಿಡಿಲಿನಿಂದ ರಕ್ಷಣೆ ಪಡೆಯಬಹುದಾದ ಸರಳ ಮಾರ್ಗಗಳನ್ನು ತಿಳಿಸಿದೆ.
ಸಿಡಿಲು-ಮೊಬೈಲ್ ಆಪ್ ನಲ್ಲಿ ಸಿಡಿಲಿನ ಬಗ್ಗೆ ಮುಂಚಿತವಾಗಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ.ಸಿಡಿಲಿನ ಸಂಭವನೀಯತೆ ಇದ್ದಲ್ಲಿ ಹೊರಗಿನ ಕೆಲಸಗಳನ್ನು ಮುಂದೂಡಿ, ಆದಷ್ಟು ಮನೆಯಲ್ಲಿಯೇ ಇರುವುದು ಸೂಕ್ತ. ಮನೆಯ ಸುತ್ತಲಿನಲ್ಲಿರುವ ಕೊಳೆತ ಹಾಗೂ ಒಣಗಿದ ಮರಗಳನ್ನು ತೆರವುಗೊಳಿಸಬೇಕು.
ಮನೆಯ ಒಳಗಿರುವಾಗ ಸಿಡಿಲು ಬಂದಾಗ ಕಿಟಕಿಯಿ0ದ ದೂರವಿರಬೇಕು, ಈ ಸಂದರ್ಭದಲ್ಲಿ ದೂರವಾಣಿ, ಮೊಬೈಲ್ ಮತ್ತುಎಲೆಕ್ಟಾçನಿಕ್ ಉಪಕರಣಗಳನ್ನು ಬಳಸಬಾರದು.ಗೃಹಪಯೋಗಿ ಉಪಕರಣಗಳ ಫ್ಲಗ್ಗಳನ್ನು ತೆಗೆದಿಡಬೇಕು.ಗೋಡೆಯಿಂದ ದೂರವಿರುವುದು ಉತ್ತಮ.ಒಣಮರದ ಪೀಠೋಪಕರಣಗಳು ಸುರಕ್ಷಿತವಾಗಿದ್ದು, ವಿದ್ಯುತೀಕರಣದ ಅಪಾಯ ಇರುವುದರಿಂದ ಸಿಡಿಲಿನ ಸಂದರ್ಭದಲ್ಲಿ ಸ್ನಾನ ಮತ್ತು ಪಾತ್ರೆ ಹಾಗೂ ಇತರ ನೀರಿನೊಂದಿಗಿನ ಕೆಲಸವನ್ನು ಮಾಡಬಾರದು.
ಹೊರಾಂಗಣದಲ್ಲಿದ್ದಾಗಸಿಡಿಲು ಬರುವ ಲಕ್ಷಣಗಳಿದ್ದಲ್ಲಿ ತಕ್ಷಣ ಸುರಕ್ಷಿತ ಕಟ್ಟಡಗಳ ಒಳಗೆ ಸೇರಿಕೊಳ್ಳಬೇಕು.ಎತ್ತರ ಪ್ರದೇಶದಲ್ಲಿ ಸಿಡಿಲಿನ ಪ್ರಭಾವ ಅಧಿಕವಾಗಿರುವುದರಿಂದ ತಗ್ಗು ಪ್ರದೇಶಗಳಿಗೆ ತೆರಳಬೇಕು. ಸಿಡಿಲಿನ ಸಂದರ್ಭದಲ್ಲಿ ಕೊಡೆ ಅಥವಾ ಛತ್ರಿಯನ್ನು ಬಳಸಬಾರದು.ಮಕ್ಕಳು ಈ ಸಂದರ್ಭದಲ್ಲಿ ಗಾಳಿಪಟವನ್ನು ಹಾರಿಸಬಾರದು.
ವಾಹನ ಚಲಿಸುವ ಸಂದರ್ಭದಲ್ಲಿ ಸಿಡಿಲು ಬಂದಾಗ ಮರ ಹಾಗೂ ತಂತಿಕ0ಬಗಳಿ0ದ ವಾಹನವನ್ನುದೂರ ನಿಲ್ಲಿಸಿ, ವಾಹನದೊಳಗೆ ಇರುವುದು ಸೂಕ್ತ. ಬಸ್ಗಳಲ್ಲಿ ಪ್ರಯಾಣಿಸುವಾಗ ಕಿಟಕಿಗಳ ಗಾಜನ್ನು ಮುಚ್ಚಬೇಕು.
ಕಾಡಿನಲ್ಲಿದ್ದ ಸಂದರ್ಭದಲ್ಲಿಕಡಿಮೆ ಮರಗಳಿರುವ ಪ್ರದೇಶದಲ್ಲಿ ಸಣ್ಣ ಮರದ ಕೆಳಗೆ ಆಶ್ರಯ ಪಡೆಯುಬೇಕು.ಗುಂಪಿನಲ್ಲಿದ್ದಾಗ ಜನರಿ0ದ ಪರಸ್ಪರ ಅಂತರವನ್ನು ಕಾಪಾಡಿಕೊಳ್ಳುವಂತೆ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…