ಉಡುಪಿ : ಉಡುಪಿ ಜಿಲ್ಲೆಯಾದ್ಯಂತ ಇಂದು ಬೆಳಗಿನ ಜಾವಾದಿಂದ ಭಾರೀ ಗಾಳಿಮಳೆಯಾಗಿದೆ. ಮಳೆ ಆವಾಂತರದಿಂದ ಉಡುಪಿ ಹಾಗೂ ಮಣಿಪಾಲ ತತ್ತರಿಸಿ ಹೋಗಿದ್ದು, ವಾಹನ ಸಂಚಾರ ಹಾಗೂ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ಉಡುಪಿ -ಮಣಿಪಾಲ ರಾಷ್ಟ್ರೀಯ ಹೆದ್ದಾರಿ 169 ಎ ರಲ್ಲಿ ಮಣಿಪಾಲ ಐನಾಕ್ಸ್ನಿಂದ ಸಿಂಡಿಕೇಟ್ ಸರ್ಕಲ್ ಮಧ್ಯೆ ಸಿಗುವ ರಸ್ತೆಯ ಬದಿ ತುಂಬಿಸಲಾದ ಮಣ್ಣು ಭಾರೀ ಮಳೆಯಿಂದ ಕಿತ್ತು ಬಂದಿದೆ. ಇದರಿಂದ ರಸ್ತೆ ಬದಿ ಬೃಹತ್ ಅಪಾಯಕಾರಿ ತೋಡು ಸೃಷ್ಠಿಯಾಗಿದೆ.
ಇಲ್ಲಿನ ಮಣ್ಣು, ಕಲ್ಲು ಮಳೆಯ ನೀರಿನೊಂದಿಗೆ ಲಕ್ಷ್ಮೀಂದ್ರನಗರದ ಕಡೆ ಹರಿದಿದ್ದು, ಇದರಿಂದ ಇಡೀ ರಸ್ತೆ ಕೆಸರು ಮಯವಾಗಿದೆ. ಕೆಸರು ಮಣ್ಣಿನೊಂದಿಗೆ ಕಲ್ಲುಗಳು ಕೂಡ ರಸ್ತೆಯಲ್ಲಿ ಬಂದು ಬಿದ್ದಿವೆ. ಇದರಿಂದ ವಾಹನ ಸಂಚಾರಕ್ಕೆ ಸಮಸ್ಯೆ ಉಂಟಾಗಿತ್ತು. ಹಾಗಾಗಿ ಕೆಲವೊತ್ತು ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿತ್ತು.
ಲಕ್ಷ್ಮೀಂದ್ರ ನಗರದಲ್ಲಿ ಕೆಸರು ನೀರು ತೋಡಿನಿಂದ ಉಕ್ಕಿ ಹರಿದು ಬಂದು ಅಂಗಡಿಗಳಿಗೆ ನುಗ್ಗಿವೆ. ಅಲ್ಲದೆ ಐನಾಕ್ಸ್ ಸಮೀಪದ ಸೆಂಟ್ರಲ್ ಪಾರ್ಕ್ ಸಂಕೀರ್ಣದ ಕೆಳ ಅಂತಸ್ತಿನಲ್ಲಿರುವ ಅಂಗಡಿಗಳಿಗೆ ಕೆಸರು ನೀರು ಹಾಗೂ ಮಣ್ಣುಗಳು ನುಗ್ಗಿವೆ. ಇದರಿಂದ ಅಪಾರ ಹಾನಿ ಸಂಭವಿಸಿದೆ. ತಕ್ಷಣ ನಗರಸಭೆ ಸಿಬ್ಬಂದಿಗಳು ಆಗಮಿಸಿ ಜೆಸಿಬಿ ಮೂಲಕ ತೋಡು ತೆರವುಗೊಳಿಸುವ ಕಾರ್ಯಾಚರಣೆ ನಡೆಸಿದರು.
ಉಡುಪಿ ನಗರದ ಕೆಲವು ರಸ್ತೆಗಳಲ್ಲಿಯೂ ನೀರು ಆವರಿಸಿದ್ದು, ಸಂಚಾರಕ್ಕೆ ಅಡಚಣೆ ಉಂಟಾಯಿತು. ಕಡಿಯಾಳಿ, ಕುಂಜಿಬೆಟ್ಟು ರಾಷ್ಟ್ರೀಯ ಹೆದ್ದಾರಿ ಯಲ್ಲಿಯೇ ನೀರು ಹರಿಯುತ್ತಿರುವುದು ಕಂಡುಬಂತು. ಮಳೆಯಿಂದ ಉಡುಪಿ ಶ್ರೀಕೃಷ್ಣ ಮಠಕ್ಕೆ ಆಗಮಿಸಿದ ಹೊರ ಜಿಲ್ಲೆ ಹಾಗೂ ರಾಜ್ಯಗಳ ಭಕ್ತರು ತೀರಾ ತೊಂದರೆ ಅನುಭವಿಸಿದರು. ರಾಷ್ಟ್ರೀಯ ಹೆದ್ದಾರಿ 66ರಲ್ಲೂ ಮಳೆ ನೀರು ರಸ್ತೆಯಲ್ಲಿ ನಿಂತು ಸಮಸ್ಯೆ ಸೃಷ್ಠಿಯಾಗಿತ್ತು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…