Featured

ಉಡುಪಿ : ಮಳೆ ಆವಾಂತರಕ್ಕೆ ಮಣಿಪಾಲ ರಾ.ಹೆದ್ದಾರಿಯಲ್ಲಿ ಕೆಸರು ಮಣ್ಣಿನೊಂದಿಗೆ ಕಲ್ಲುಗಳ ರಾಶಿ – vishwanews24

ಉಡುಪಿ : ಮಳೆ ಆವಾಂತರಕ್ಕೆ ಮಣಿಪಾಲ ರಾ.ಹೆದ್ದಾರಿಯಲ್ಲಿ ಕೆಸರು ಮಣ್ಣಿನೊಂದಿಗೆ ಕಲ್ಲುಗಳ ರಾಶಿ

ಉಡುಪಿ : ಉಡುಪಿ ಜಿಲ್ಲೆಯಾದ್ಯಂತ ಇಂದು ಬೆಳಗಿನ ಜಾವಾದಿಂದ ಭಾರೀ ಗಾಳಿಮಳೆಯಾಗಿದೆ. ಮಳೆ ಆವಾಂತರದಿಂದ ಉಡುಪಿ ಹಾಗೂ ಮಣಿಪಾಲ ತತ್ತರಿಸಿ ಹೋಗಿದ್ದು, ವಾಹನ ಸಂಚಾರ ಹಾಗೂ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ಉಡುಪಿ -ಮಣಿಪಾಲ ರಾಷ್ಟ್ರೀಯ ಹೆದ್ದಾರಿ 169 ಎ ರಲ್ಲಿ ಮಣಿಪಾಲ ಐನಾಕ್ಸ್‌ನಿಂದ ಸಿಂಡಿಕೇಟ್ ಸರ್ಕಲ್ ಮಧ್ಯೆ ಸಿಗುವ ರಸ್ತೆಯ ಬದಿ ತುಂಬಿಸಲಾದ ಮಣ್ಣು ಭಾರೀ ಮಳೆಯಿಂದ ಕಿತ್ತು ಬಂದಿದೆ. ಇದರಿಂದ ರಸ್ತೆ ಬದಿ ಬೃಹತ್ ಅಪಾಯಕಾರಿ ತೋಡು ಸೃಷ್ಠಿಯಾಗಿದೆ.

ಇಲ್ಲಿನ ಮಣ್ಣು, ಕಲ್ಲು ಮಳೆಯ ನೀರಿನೊಂದಿಗೆ ಲಕ್ಷ್ಮೀಂದ್ರನಗರದ ಕಡೆ ಹರಿದಿದ್ದು, ಇದರಿಂದ ಇಡೀ ರಸ್ತೆ ಕೆಸರು ಮಯವಾಗಿದೆ. ಕೆಸರು ಮಣ್ಣಿನೊಂದಿಗೆ ಕಲ್ಲುಗಳು ಕೂಡ ರಸ್ತೆಯಲ್ಲಿ ಬಂದು ಬಿದ್ದಿವೆ. ಇದರಿಂದ ವಾಹನ ಸಂಚಾರಕ್ಕೆ ಸಮಸ್ಯೆ ಉಂಟಾಗಿತ್ತು. ಹಾಗಾಗಿ ಕೆಲವೊತ್ತು ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿತ್ತು.

ಲಕ್ಷ್ಮೀಂದ್ರ ನಗರದಲ್ಲಿ ಕೆಸರು ನೀರು ತೋಡಿನಿಂದ ಉಕ್ಕಿ ಹರಿದು ಬಂದು ಅಂಗಡಿಗಳಿಗೆ ನುಗ್ಗಿವೆ. ಅಲ್ಲದೆ ಐನಾಕ್ಸ್ ಸಮೀಪದ ಸೆಂಟ್ರಲ್ ಪಾರ್ಕ್ ಸಂಕೀರ್ಣದ ಕೆಳ ಅಂತಸ್ತಿನಲ್ಲಿರುವ ಅಂಗಡಿಗಳಿಗೆ ಕೆಸರು ನೀರು ಹಾಗೂ ಮಣ್ಣುಗಳು ನುಗ್ಗಿವೆ. ಇದರಿಂದ ಅಪಾರ ಹಾನಿ ಸಂಭವಿಸಿದೆ. ತಕ್ಷಣ ನಗರಸಭೆ ಸಿಬ್ಬಂದಿಗಳು ಆಗಮಿಸಿ ಜೆಸಿಬಿ ಮೂಲಕ ತೋಡು ತೆರವುಗೊಳಿಸುವ ಕಾರ್ಯಾಚರಣೆ ನಡೆಸಿದರು.

ಉಡುಪಿ ನಗರದ ಕೆಲವು ರಸ್ತೆಗಳಲ್ಲಿಯೂ ನೀರು ಆವರಿಸಿದ್ದು, ಸಂಚಾರಕ್ಕೆ ಅಡಚಣೆ ಉಂಟಾಯಿತು. ಕಡಿಯಾಳಿ, ಕುಂಜಿಬೆಟ್ಟು ರಾಷ್ಟ್ರೀಯ ಹೆದ್ದಾರಿ ಯಲ್ಲಿಯೇ ನೀರು ಹರಿಯುತ್ತಿರುವುದು ಕಂಡುಬಂತು. ಮಳೆಯಿಂದ ಉಡುಪಿ ಶ್ರೀಕೃಷ್ಣ ಮಠಕ್ಕೆ ಆಗಮಿಸಿದ ಹೊರ ಜಿಲ್ಲೆ ಹಾಗೂ ರಾಜ್ಯಗಳ ಭಕ್ತರು ತೀರಾ ತೊಂದರೆ ಅನುಭವಿಸಿದರು. ರಾಷ್ಟ್ರೀಯ ಹೆದ್ದಾರಿ 66ರಲ್ಲೂ ಮಳೆ ನೀರು ರಸ್ತೆಯಲ್ಲಿ ನಿಂತು ಸಮಸ್ಯೆ ಸೃಷ್ಠಿಯಾಗಿತ್ತು.

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

16 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

17 hours ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

17 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

18 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

19 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

19 hours ago