Featured

ಉಡುಪಿ : ಮಳೆ ಆವಾಂತರಕ್ಕೆ ಮಣಿಪಾಲ ರಾ.ಹೆದ್ದಾರಿಯಲ್ಲಿ ಕೆಸರು ಮಣ್ಣಿನೊಂದಿಗೆ ಕಲ್ಲುಗಳ ರಾಶಿ – vishwanews24

ಉಡುಪಿ : ಮಳೆ ಆವಾಂತರಕ್ಕೆ ಮಣಿಪಾಲ ರಾ.ಹೆದ್ದಾರಿಯಲ್ಲಿ ಕೆಸರು ಮಣ್ಣಿನೊಂದಿಗೆ ಕಲ್ಲುಗಳ ರಾಶಿ

ಉಡುಪಿ : ಉಡುಪಿ ಜಿಲ್ಲೆಯಾದ್ಯಂತ ಇಂದು ಬೆಳಗಿನ ಜಾವಾದಿಂದ ಭಾರೀ ಗಾಳಿಮಳೆಯಾಗಿದೆ. ಮಳೆ ಆವಾಂತರದಿಂದ ಉಡುಪಿ ಹಾಗೂ ಮಣಿಪಾಲ ತತ್ತರಿಸಿ ಹೋಗಿದ್ದು, ವಾಹನ ಸಂಚಾರ ಹಾಗೂ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ಉಡುಪಿ -ಮಣಿಪಾಲ ರಾಷ್ಟ್ರೀಯ ಹೆದ್ದಾರಿ 169 ಎ ರಲ್ಲಿ ಮಣಿಪಾಲ ಐನಾಕ್ಸ್‌ನಿಂದ ಸಿಂಡಿಕೇಟ್ ಸರ್ಕಲ್ ಮಧ್ಯೆ ಸಿಗುವ ರಸ್ತೆಯ ಬದಿ ತುಂಬಿಸಲಾದ ಮಣ್ಣು ಭಾರೀ ಮಳೆಯಿಂದ ಕಿತ್ತು ಬಂದಿದೆ. ಇದರಿಂದ ರಸ್ತೆ ಬದಿ ಬೃಹತ್ ಅಪಾಯಕಾರಿ ತೋಡು ಸೃಷ್ಠಿಯಾಗಿದೆ.

ಇಲ್ಲಿನ ಮಣ್ಣು, ಕಲ್ಲು ಮಳೆಯ ನೀರಿನೊಂದಿಗೆ ಲಕ್ಷ್ಮೀಂದ್ರನಗರದ ಕಡೆ ಹರಿದಿದ್ದು, ಇದರಿಂದ ಇಡೀ ರಸ್ತೆ ಕೆಸರು ಮಯವಾಗಿದೆ. ಕೆಸರು ಮಣ್ಣಿನೊಂದಿಗೆ ಕಲ್ಲುಗಳು ಕೂಡ ರಸ್ತೆಯಲ್ಲಿ ಬಂದು ಬಿದ್ದಿವೆ. ಇದರಿಂದ ವಾಹನ ಸಂಚಾರಕ್ಕೆ ಸಮಸ್ಯೆ ಉಂಟಾಗಿತ್ತು. ಹಾಗಾಗಿ ಕೆಲವೊತ್ತು ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿತ್ತು.

ಲಕ್ಷ್ಮೀಂದ್ರ ನಗರದಲ್ಲಿ ಕೆಸರು ನೀರು ತೋಡಿನಿಂದ ಉಕ್ಕಿ ಹರಿದು ಬಂದು ಅಂಗಡಿಗಳಿಗೆ ನುಗ್ಗಿವೆ. ಅಲ್ಲದೆ ಐನಾಕ್ಸ್ ಸಮೀಪದ ಸೆಂಟ್ರಲ್ ಪಾರ್ಕ್ ಸಂಕೀರ್ಣದ ಕೆಳ ಅಂತಸ್ತಿನಲ್ಲಿರುವ ಅಂಗಡಿಗಳಿಗೆ ಕೆಸರು ನೀರು ಹಾಗೂ ಮಣ್ಣುಗಳು ನುಗ್ಗಿವೆ. ಇದರಿಂದ ಅಪಾರ ಹಾನಿ ಸಂಭವಿಸಿದೆ. ತಕ್ಷಣ ನಗರಸಭೆ ಸಿಬ್ಬಂದಿಗಳು ಆಗಮಿಸಿ ಜೆಸಿಬಿ ಮೂಲಕ ತೋಡು ತೆರವುಗೊಳಿಸುವ ಕಾರ್ಯಾಚರಣೆ ನಡೆಸಿದರು.

ಉಡುಪಿ ನಗರದ ಕೆಲವು ರಸ್ತೆಗಳಲ್ಲಿಯೂ ನೀರು ಆವರಿಸಿದ್ದು, ಸಂಚಾರಕ್ಕೆ ಅಡಚಣೆ ಉಂಟಾಯಿತು. ಕಡಿಯಾಳಿ, ಕುಂಜಿಬೆಟ್ಟು ರಾಷ್ಟ್ರೀಯ ಹೆದ್ದಾರಿ ಯಲ್ಲಿಯೇ ನೀರು ಹರಿಯುತ್ತಿರುವುದು ಕಂಡುಬಂತು. ಮಳೆಯಿಂದ ಉಡುಪಿ ಶ್ರೀಕೃಷ್ಣ ಮಠಕ್ಕೆ ಆಗಮಿಸಿದ ಹೊರ ಜಿಲ್ಲೆ ಹಾಗೂ ರಾಜ್ಯಗಳ ಭಕ್ತರು ತೀರಾ ತೊಂದರೆ ಅನುಭವಿಸಿದರು. ರಾಷ್ಟ್ರೀಯ ಹೆದ್ದಾರಿ 66ರಲ್ಲೂ ಮಳೆ ನೀರು ರಸ್ತೆಯಲ್ಲಿ ನಿಂತು ಸಮಸ್ಯೆ ಸೃಷ್ಠಿಯಾಗಿತ್ತು.

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

11 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

11 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

11 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

12 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

12 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago