Featured

ಉಡುಪಿ : ಮಳೆ ಹಾನಿಗೆ ಕೇಂದ್ರದಿoದ ರಾಜ್ಯಕ್ಕೆ 629.03 ಕೋಟಿ ರೂ. ಪರಿಹಾರ ಬಿಡುಗಡೆ : ಶೋಭಾ ಕರಂದ್ಲಾಜೆ -Vishwanews24

ಉಡುಪಿ : ಮಳೆ ಹಾನಿಗೆ ಕೇಂದ್ರದಿoದ ರಾಜ್ಯಕ್ಕೆ 629.03 ಕೋಟಿ ರೂ. ಪರಿಹಾರ ಬಿಡುಗಡೆ : ಶೋಭಾ ಕರಂದ್ಲಾಜೆ -Vishwanews24

ಉಡುಪಿ : ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳಿಗೆ ಕಳೆದ ವರ್ಷದಲ್ಲಿ ಅತಿವೃಷ್ಟಿಯಿಂದ ಉಂಟಾದ ಬೆಳೆ ಹಾನಿಗೆ ಕೇಂದ್ರ ಸರ್ಕಾರ ರಾಜ್ಯಕ್ಕೆ 629.03 ಕೋಟಿ ರೂ. ಹಾಗೂ ಮಹಾರಾಷ್ಟ್ರಕ್ಕೆ 701.00 ಕೋಟಿ ರೂ. ಗಳ ನೆರವಿನ ಅನುಮೋದನೆಯನ್ನು ಎಸ್.ಡಿ.ಆರ್.ಎಫ್ ಮಾನದಂಡಗಳ ಅಡಿಯಲ್ಲಿ ರಾಜ್ಯ ಸರ್ಕಾರಕ್ಕೆ ನೀಡಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಲೋಕಸಭೆಯಲ್ಲಿ ನಡೆದ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.

ಅನಾವೃಷ್ಟಿ ಕಾರಣದಿಂದ 2020 ನೇ ಸಾಲಿನಲ್ಲಿ ರಾಜಸ್ಥಾನದಲ್ಲಿನ ಕೃಷಿ ಸಮುದಾಯಕ್ಕೆ ಅಪಾರ ಬೆಳೆ ನಷ್ಟ ಉಂಟಾಗಿದ್ದು, ಕೇಂದ್ರ ಸರಕಾರ ಈ ಬೆಳೆ ನಷ್ಟಕ್ಕೆ ನೆರವಿನ ರೂಪದಲ್ಲಿ 113.69 ಕೋಟಿ ರೂ. ಗಳನ್ನು ಎಸ್.ಡಿ.ಆರ್.ಎಫ್ ಮಾನದಂಡಗಳ ಅಡಿಯಲ್ಲಿ ಅನುಮೋದನೆ ನೀಡಿದೆ.

2020-21 ನೇ ವರ್ಷದಲ್ಲಿ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ ಒಟ್ಟು 67.96 ಲಕ್ಷ ಹೆಕ್ಟೇರ್ ಕೃಷಿಭೂಮಿಯನ್ನು ಮಹಾರಾಷ್ಟ್ರ ರಾಜ್ಯದಲ್ಲಿ ವಿಮೆಗೆ ಒಳಪಡಿಸಲಾಗಿತ್ತು. ಈ ಸಾಲಿನ ಖಾರಿಫ್ ಮತ್ತು ರಬಿಯಲ್ಲಾದ ಬೆಳೆ ನಷ್ಟಕ್ಕೆ ಕೇಂದ್ರ ಸರ್ಕಾರ ಒಟ್ಟು 750.12 ಕೋಟಿ ರೂ.ಬಿಡುಗಡೆ ಮಾಡಿದ್ದು, 11.43 ಲಕ್ಷ ರೈತರು ಇದರ ಫಲಾನುಭವವನ್ನು ಪಡೆದಿರುವುದಾಗಿ ಸಚಿವೆ ತಿಳಿಸಿರುತ್ತಾರೆ.

 

Vishwa News 24

Recent Posts

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು – vishwanews24

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…

17 hours ago

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ – vishwanews24

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…

17 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

17 hours ago

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

17 hours ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

17 hours ago

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…

18 hours ago