ಉಡುಪಿ : ಕೋವಿಡ್-19 ಎರಡನೇ ಅಲೆ ತಡೆಯುವ ನಿಟ್ಟಿನಲ್ಲಿ ರಾಜ್ಯ ಸರಕಾರ ಮತ್ತು ಜಿಲ್ಲಾಡಳಿತ ಜಾರಿಗೊಳಿಸಿದ ಮಾರ್ಗಸೂಚಿ ಆದೇಶವನ್ನು ಜಿಲ್ಲೆಯ ಎಲ್ಲ ಮಸೀದಿಗಳಲ್ಲಿ ಪಾಲನೆ ಮಾಡುವ ಮೂಲಕ ಸಮುದಾಯದ, ಸಮಾಜದ ಮತ್ತು ದೇಶದ ಆರೋಗ್ಯ ಕಾಪಾಡಬೇಕು ಎಂದು ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ಮನವಿ ಮಾಡಿದೆ.
ಮತ್ತೊಮ್ಮೆ ಕೋವಿಡ್-19 ನಮಗೆ ಎದುರಾಗಿದೆ. ಈ ಹಿಂದಿನಂತೆ ಸಾಕಷ್ಟು ಮುತುವರ್ಜಿಯಿಂದ ಮುಂಜಾಗ್ರತೆ ವಹಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಪವಿತ್ರ ರಮ್ಜಾನ್ ತಿಂಗಳ ವ್ರತಾಚರಣೆಯ ಸಮಯವಾಗಿರುವ ಇಂದು ಮಸೀದಿಗಳಲ್ಲಿ ಈ ಹಿಂದಿನಂತೆ ಕಟ್ಟುನಿಟ್ಟಿನ ಕೋವಿಡ್ ನಿಯಮಾವಳಿ ಪಾಲಿಸುವ ಮೂಲಕ ಕೋವಿಡ್ ಎರಡನೇ ಅಲೆಯನ್ನು ತಡೆಯಬಹುದಾಗಿದೆ ಎಂದು ಒಕ್ಕೂಟದ ಜಿಲ್ಲಾಧ್ಯಕ್ಷ ಇಬ್ರಾಹಿಂ ಸಾಹೇಬ್ ಕೋಟ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ರಾತ್ರಿ ಕರ್ಫ್ಯೂ : ಕಲಾವಿದರಿಗೆ ಆಗುತ್ತಿರುವ ಅನಾನುಕೂಲತೆಗಳನ್ನು ಸರಿಪಡಿಸಿ : ಜಿಲ್ಲಾಧಿಕಾರಿಗೆ ಮನವಿ -Vishwanews24
ಆದುದರಿಂದ ಮಸೀದಿ ಜಮಾಅತ್ ಗಳು ಮತ್ತು ಸ್ವಯಂ ಸೇವಕರು ಮಸೀದಿಗೆ ಬರುವ ಪ್ರಾರ್ಥನಾರ್ಥಿಗಳ ಟೆಂಪರೇಚರ್, ಹ್ಯಾಂಡ್ ಸ್ಯಾನಿಟೈಸರ್, ಮಾಸ್ಕ್ -ಮುಸಲ್ಲಾ ಮತ್ತು ನಮಾಝ್ ನಿರ್ವಹಿಸುವವರ ನಡುವಿನ ಅಂತರ ಇತ್ಯಾದಿ ಬಗ್ಗೆ ನಿಗಾ ಇರಿಸಬೇಕು. ವಯೋವೃದ್ಧರು ಮತ್ತು ಮಕ್ಕಳು ಮನೆಯಲ್ಲಿಯೇ ನಮಾಝನ್ನು ನಿರ್ವಹಿಸಬೇಕು. ಉಳಿದಂತೆ ಮುಸಲ್ಲಿಗಳು ಮಸೀದಿಯ ಮೇಲ್ವಿಚಾರಕರೊಂದಿಗೆ ಸಂಪೂರ್ಣವಾಗಿ ಸಹಕರಿಸುವ ಮೂಲಕ ಸರಳವಾದ ಆರೋಗ್ಯ ಪೂರ್ಣ ರಮ್ಜಾನ್ ವ್ರತಾಚರಣೆ ಕೈಗೊಳ್ಳಬೇಕು ಎಂದು ಅವರು ವಿನಂತಿಸಿದ್ದಾರೆ.
ರಾಜ್ಯಪಾಲರ ಜತೆ ಸಭೆ ಮುಗಿದ ಬಳಿಕ ಖಂಡಿತ ರಾಜ್ಯದಲ್ಲಿ ಕಠಿಣ ರೂಲ್ಸ್ ಜಾರಿಯಾಗಲಿದೆ : ಆರ್. ಅಶೋಕ್ -Vishwanews24
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…
ಪತಿಗೆ ಬೇರೆ ಮಹಿಳೆ ಜೊತೆ ಅನೈತಿಕ ಸಂಬಂಧ : ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಪತ್ನಿ ಹಾವೇರಿ: ಪತಿಗೆ ಬೇರೆ…
ಬಡ್ಡಿ ದಂಧೆಕೋರರ ಕಿರುಕುಳ : ಸೆಲ್ಫಿ ವಿಡಿಯೋ ಮಾಡಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಗದಗ: ಬಡ್ಡಿ ದಂಧೆಕೋರರ ಕಿರುಕುಳಕ್ಕೆ…
ಕರ್ನಾಟಕ ಶಾಶ್ವತ ವಸತಿ ಪ್ರಮಾಣಪತ್ರಕ್ಕೆ ಆಕ್ಷೇಪ: ತುರ್ತು ಪರಿಶೀಲನೆಗಾಗಿ ಕೇಂದ್ರ ಗೃಹ ಸಚಿವರಿಗೆ ಶೋಭಾ ಕರಂದ್ಲಾಜೆ ಪತ್ರ ಬೆಂಗಳೂರು: ಕರ್ನಾಟಕ…
ಬೆಂಗಳೂರು: ಫುಟ್ಪಾತ್ ತೆರವು ಕಾರ್ಯಾಚರಣೆ ನಿಲ್ಲಲ್ಲ : ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ ಬೆಂಗಳೂರು: ಬೀದಿಬದಿ ವ್ಯಾಪಾರಿಗಳಿಗೆ ಬೆಂಗಳೂರು…