Featured

ಉಡುಪಿ: ಮಸೀದಿಗಳಲ್ಲಿ ಕೊರೊನಾ ಮಾರ್ಗಸೂಚಿ ಕಡ್ಡಾಯ ಪಾಲಿಸಿ ; ಜಿಲ್ಲಾ ಮುಸ್ಲಿಮ್ ಒಕ್ಕೂಟ ಮನವಿ -Vishwanews24

ಉಡುಪಿ: ಮಸೀದಿಗಳಲ್ಲಿ ಕೊರೊನಾ ಮಾರ್ಗಸೂಚಿ ಕಡ್ಡಾಯ ಪಾಲಿಸಿ ; ಜಿಲ್ಲಾ ಮುಸ್ಲಿಮ್ ಒಕ್ಕೂಟ ಮನವಿ -Vishwanews24

ಉಡುಪಿ : ಕೋವಿಡ್-19 ಎರಡನೇ ಅಲೆ ತಡೆಯುವ ನಿಟ್ಟಿನಲ್ಲಿ ರಾಜ್ಯ ಸರಕಾರ ಮತ್ತು ಜಿಲ್ಲಾಡಳಿತ ಜಾರಿಗೊಳಿಸಿದ ಮಾರ್ಗಸೂಚಿ ಆದೇಶವನ್ನು ಜಿಲ್ಲೆಯ ಎಲ್ಲ ಮಸೀದಿಗಳಲ್ಲಿ ಪಾಲನೆ ಮಾಡುವ ಮೂಲಕ ಸಮುದಾಯದ, ಸಮಾಜದ ಮತ್ತು ದೇಶದ ಆರೋಗ್ಯ ಕಾಪಾಡಬೇಕು ಎಂದು ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ಮನವಿ ಮಾಡಿದೆ.

ಮತ್ತೊಮ್ಮೆ ಕೋವಿಡ್-19 ನಮಗೆ ಎದುರಾಗಿದೆ. ಈ ಹಿಂದಿನಂತೆ ಸಾಕಷ್ಟು ಮುತುವರ್ಜಿಯಿಂದ ಮುಂಜಾಗ್ರತೆ ವಹಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಪವಿತ್ರ ರಮ್ಜಾನ್ ತಿಂಗಳ ವ್ರತಾಚರಣೆಯ ಸಮಯವಾಗಿರುವ ಇಂದು ಮಸೀದಿಗಳಲ್ಲಿ ಈ ಹಿಂದಿನಂತೆ ಕಟ್ಟುನಿಟ್ಟಿನ ಕೋವಿಡ್ ನಿಯಮಾವಳಿ ಪಾಲಿಸುವ ಮೂಲಕ ಕೋವಿಡ್ ಎರಡನೇ ಅಲೆಯನ್ನು ತಡೆಯಬಹುದಾಗಿದೆ ಎಂದು ಒಕ್ಕೂಟದ ಜಿಲ್ಲಾಧ್ಯಕ್ಷ ಇಬ್ರಾಹಿಂ ಸಾಹೇಬ್ ಕೋಟ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ರಾತ್ರಿ ಕರ್ಫ್ಯೂ : ಕಲಾವಿದರಿಗೆ ಆಗುತ್ತಿರುವ ಅನಾನುಕೂಲತೆಗಳನ್ನು ಸರಿಪಡಿಸಿ : ಜಿಲ್ಲಾಧಿಕಾರಿಗೆ ಮನವಿ -Vishwanews24

ಆದುದರಿಂದ ಮಸೀದಿ ಜಮಾಅತ್ ಗಳು ಮತ್ತು ಸ್ವಯಂ ಸೇವಕರು ಮಸೀದಿಗೆ ಬರುವ ಪ್ರಾರ್ಥನಾರ್ಥಿಗಳ ಟೆಂಪರೇಚರ್, ಹ್ಯಾಂಡ್ ಸ್ಯಾನಿಟೈಸರ್, ಮಾಸ್ಕ್ -ಮುಸಲ್ಲಾ ಮತ್ತು ನಮಾಝ್ ನಿರ್ವಹಿಸುವವರ ನಡುವಿನ ಅಂತರ ಇತ್ಯಾದಿ ಬಗ್ಗೆ ನಿಗಾ ಇರಿಸಬೇಕು. ವಯೋವೃದ್ಧರು ಮತ್ತು ಮಕ್ಕಳು ಮನೆಯಲ್ಲಿಯೇ ನಮಾಝನ್ನು ನಿರ್ವಹಿಸಬೇಕು. ಉಳಿದಂತೆ ಮುಸಲ್ಲಿಗಳು ಮಸೀದಿಯ ಮೇಲ್ವಿಚಾರಕರೊಂದಿಗೆ ಸಂಪೂರ್ಣವಾಗಿ ಸಹಕರಿಸುವ ಮೂಲಕ ಸರಳವಾದ ಆರೋಗ್ಯ ಪೂರ್ಣ ರಮ್ಜಾನ್ ವ್ರತಾಚರಣೆ ಕೈಗೊಳ್ಳಬೇಕು ಎಂದು ಅವರು ವಿನಂತಿಸಿದ್ದಾರೆ.

ರಾಜ್ಯಪಾಲರ ಜತೆ ಸಭೆ ಮುಗಿದ ಬಳಿಕ ಖಂಡಿತ ರಾಜ್ಯದಲ್ಲಿ ಕಠಿಣ ರೂಲ್ಸ್ ಜಾರಿಯಾಗಲಿದೆ : ಆರ್. ಅಶೋಕ್ -Vishwanews24

Vishwa News 24

Recent Posts

ಬೆಂಗಳೂರು: ಯಾವುದೇ ಕಾರಣಕ್ಕೂ ಫುಟ್‌ಪಾತ್ ತೆರವು ಕಾರ್ಯಾಚರಣೆ ನಿಲ್ಲಲ್ಲ : ಸಚಿವ ಕೃಷ್ಣ ಬೈರೇಗೌಡ ಖಡಕ್‌ ಸೂಚನೆ – vishwanews24

ಬೆಂಗಳೂರು: ಫುಟ್‌ಪಾತ್ ತೆರವು ಕಾರ್ಯಾಚರಣೆ ನಿಲ್ಲಲ್ಲ : ಸಚಿವ ಕೃಷ್ಣ ಬೈರೇಗೌಡ ಖಡಕ್‌ ಸೂಚನೆ ಬೆಂಗಳೂರು: ಬೀದಿಬದಿ ವ್ಯಾಪಾರಿಗಳಿಗೆ ಬೆಂಗಳೂರು…

34 minutes ago

ಬೆಳಗಾವಿ: ಅಣಬೆ ಸೇವಿಸಿ ಒಂದೇ ಕುಟುಂಬದ 9 ಮಂದಿ ಅಸ್ವಸ್ಥ – vishwanews24

ಅಣಬೆ ಬೆಳೆದಿದ್ದ ಹೊಲಕ್ಕೆ ಅದರ ಮಾಲೀಕರಿಂದ ಕ್ರಿಮಿನಾಶಕ ಔಷಧಿ ಸಿಂಪಡಿಕೆ.. ಕೀಟನಾಶಕದ ಅಂಶ ಅಣಬೆಯೊಳಗೆ ಸೇರಿ ವಿಷವಾಗಿ ಮಾರ್ಪಟ್ಟು ಇಡೀ…

1 hour ago

ಉಡುಪಿ: ವಂಚನೆ ಹಾಗೂ ಬ್ಲ್ಯಾಕ್‌ಮೇಲ್ ಪ್ರಕರಣ ; ಆರೋಪಿ ಝೀನತ್ ವಿರುದ್ಧ ಮತ್ತೆರಡು ಹೊಸ ಪ್ರಕರಣ ದಾಖಲು – vishwanews24

ಉಡುಪಿ: ವಂಚನೆ ಹಾಗೂ ಬ್ಲ್ಯಾಕ್‌ಮೇಲ್ ಪ್ರಕರಣ ; ಆರೋಪಿ ಝೀನತ್ ವಿರುದ್ಧ ಮತ್ತೆರಡು ಹೊಸ ಪ್ರಕರಣ ದಾಖಲು ಉಡುಪಿ:ಬಹುಕೋಟಿ ವಂಚನೆ…

2 hours ago

ಆಗುಂಬೆ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ – ಮಹತ್ವದ ತೀರ್ಪು ನೀಡಿದ ಶಿವಮೊಗ್ಗ ನ್ಯಾಯಾಲಯ – vishwanews24

ಆಗುಂಬೆ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ - ಮಹತ್ವದ ತೀರ್ಪು ನೀಡಿದ ಶಿವಮೊಗ್ಗ ನ್ಯಾಯಾಲಯ ತೀರ್ಥಹಳ್ಳಿ: ಲೈಂಗಿಕ ದೌರ್ಜನ್ಯಕ್ಕೆ…

2 hours ago

ಅಯೋಧ್ಯೆ ಪ್ರಕರಣದ ಹಿನ್ನೆಲೆ : ರಾಜ್ಯದ ಎಲ್ಲಾ ಮುಜುರಾಯಿ ದೇಗುಲಗಳಲ್ಲಿ ಕಡ್ಡಾಯ ಸಿಸಿಟಿವಿ ಅಳವಡಿಕೆಗೆ ಸಿಎಂ ಆದೇಶ – vishwanews24

ರಾಮ ಮಂದಿರದಲ್ಲಿ ನಡೆದ ಘಟನೆ ಅವಮಾನಕರ; ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದೆ :ಸಿಎಂ  ಡಿ.ಕೆ. ಶಿ ಬೆಳಗಾವಿ: ಮುಜರಾಯಿ…

3 hours ago

ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ 10 ಲಕ್ಷ ರೂ.ವಂಚನೆ ಪ್ರಕರಣ: ಮಹಿಳೆ ಬಂಧನ – vishwanews24

ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ 10 ಲಕ್ಷ ರೂ.ವಂಚನೆ ಪ್ರಕರಣ: ಮುಂಬಯಲ್ಲಿ ಉಡುಪಿ ಮೂಲದ ಮಹಿಳೆ ಬಂಧನ ಮುಂಬೈ,: ಷೇರು…

3 hours ago