Featured

ಉಡುಪಿ: ಮಸೂದ್ , ಫಾಝಿಲ್  ಕುಟುಂಬಕ್ಕೆ ಯಾವುದೇ ಪರಿಹಾರ ಘೋಷಣೆಯನ್ನೂ ಮಾಡಲಿಲ್ಲ ಇದು ಖಂಡನೀಯ : ಸರಕಾರಕ್ಕೆ ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ – Vishwanews24

ತಾರತಮ್ಯ ಬಿಟ್ಟು ರಾಜ್ಯದ ಆರು ಕೋಟಿ ಜನತೆಯ ಸರಕಾರದಂತೆ ವರ್ತಿಸಿ..

ಪ್ರವೀಣ್ ಕೊಲೆಗಾರರ ಹುಡುಕಾಟದಲ್ಲಿ ತೀವ್ರತೆ , ಮಸೂದ್ ಮತ್ತು ಫಾಝಿಲ್’ನ ಕೊಲೆಗಾರರ ಹುಡುಕಾಟದಲ್ಲಿ ಉದಾಸಿನತೆ..

ಕೇವಲ ಒಂದು ವರ್ಗದ ಮುಖ್ಯಮಂತ್ರಿಯಂತೆ ಬಸವರಾಜ ಬೊಮ್ಮಾಯಿ ವರ್ತಿಸುತ್ತಿರುವುದು ರಾಜ್ಯದ ಭವಿಷ್ಯವನ್ನು ಅಂಧಕಾರದತ್ತ ತಳ್ಳುವಂತಿದೆ..

ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷರಾದ ಕೋಟ ಇಬ್ರಾಹಿಂ ಸಾಹೇಬ್..

ಉಡುಪಿ: ನಮ್ಮ ನೆರೆಯ ಜಿಲ್ಲೆಯಾದ ದಕ್ಷಿಣ ಕನ್ನಡದಲ್ಲಿ ಕೆಲವೇ ಕೆಲವು ದಿನಗಳ ಅಂತರದಲ್ಲಿ ಮಸೂದ್,ಪ್ರವೀಣ ಹಾಗೂ ಪಾಝಿಲ್ ಎಂಬ ಮೂವರು ಯುವಕರ ಅತ್ಯಮೂಲ್ಯ ಜೀವಗಳನ್ನು ದ್ವೇಷದ ರಾಜಕೀಯವು ಹೊಸಕಿ ಹಾಕಿದೆ. ಈ ಕೊಲೆಗಳು ಆ ಯುವಕರ ಕುಟುಂಬಗಳನ್ನು ದುಃಖದ ಮಡುವಿನಲ್ಲಿ ಮುಳಗಿಸಿದ್ದಲ್ಲದೆ ಆ ಕುಟುಂಬಗಳ ಆಧಾರ ಸ್ತಂಭಗಳನ್ನು ಕೆಡವಿಹಾಕಿ ಅತಂತ್ರ ಸ್ಥಿತಿಗೆ ದೂಡಿದೆ. ಇಷ್ಟೇ ಅಲ್ಲ ಸಮಾಜದಲ್ಲಿ ದ್ವೇಷ, ಅಪನಂಬಿಕೆಗಳಿಗೆ ಇಂಧನವನ್ನು ಸುರಿದು ಜನಸಾಮಾನ್ಯರಲ್ಲಿ ಭಯ ಮತ್ತು ಆತಂಕದ ವಾತಾವರಣವನ್ನು ಸೃಷ್ಟಿಸಿದೆ. ಈ ಸಮಾಜಘಾತುಕ ಕೃತ್ಯಗಳನ್ನು ಮತ್ತು ಸರಕಾರದ ಭದ್ರತಾಲೋಪಗಳನ್ನು ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ತೀವ್ರವಾಗಿ ಖಂಡಿಸುತ್ತದೆ.

ಅದೇ ಸಂದರ್ಭದಲ್ಲಿ ರಾಜ್ಯ ಸರಕಾರದ ಪಕ್ಷಪಾತದಿಂದ ಕೂಡಿದ ನಿಲುವೂ ಪ್ರಶ್ನಾರ್ಹ. ರಾಜ್ಯದ ಆರು ಕೋಟಿ ಜನರ ಮುಖ್ಯಮಂತ್ರಿ ಎಂಬುದನ್ನು ಮರೆತು ಕೇವಲ ಒಂದು ವರ್ಗದ ಮುಖ್ಯಮಂತ್ರಿಯಂತೆ ಬಸವರಾಜ ಬೊಮ್ಮಾಯಿ ವರ್ತಿಸುತ್ತಿರುವುದು ರಾಜ್ಯದ ಭವಿಷ್ಯವನ್ನು ಅಂಧಕಾರದತ್ತ ತಳ್ಳುವಂತಿದೆ. ಬೆಳ್ಳಾರೆಯ ಕೊಲೆಗೈಯಲ್ಪಟ್ಟ ಪ್ರವೀಣನ ಮನೆ ಭೇಟಿ ನೀಡಿ ಪರಿಹಾರ ಘೋಷಿಸಿದ ಮುಖ್ಯಮಂತ್ರಿಗಳು ಇದಕ್ಕಿಂತ ಮೊದಲು ಕೊಲೆಯಾದ ತರುಣ ಮಸೂದ್’ನ ಕುಟುಂಬಕ್ಕೆ ಪರಿಹಾರ ಘೋಷಿಸುವುದು ಬಿಡಿ ಆತನ ಮನೆ ಭೇಟಿ ನೀಡಿ ಕುಟುಂಬಸ್ಥರನ್ನು ಸಂತೈಸುವ ಪ್ರಯತ್ನನ್ನು ಮಾಡಲಿಲ್ಲ. ಮೃತ ಯುವಕ ಫಾಝಿಲ್’ನ ಕುಟುಂಬಕ್ಕೂ ಯಾವುದೇ ಪರಿಹಾರ ಘೋಷಣೆಯನ್ನೂ ಮಾಡಲಿಲ್ಲ ಇದು ಖಂಡನೀಯ ಧೋರಣೆಯಾಗಿದೆ.

ಇದನ್ನೂ ಓದಿ : ಜೀವ ಬೆದರಿಕೆ ಹಿನ್ನೆಲೆ: ಶಸ್ತ್ರಾಸ್ತ್ರ ಪರವಾನಗಿ ಪಡೆದ ಸಲ್ಮಾನ್‌ ಖಾನ್‌ – Vishwanews24 

ಪ್ರವೀಣನ ಕೊಲೆಗಾರರ ಹುಡುಕಾಟದಲ್ಲಿ ತೀವ್ರತೆ ತೋರಿದರೆ ಮಸೂದ್ ಮತ್ತು ಫಾಝಿಲ್’ನ ಕೊಲೆಗಾರರ ಹುಡುಕಾಟದಲ್ಲಿ ಉದಾಸಿನತೆಯಲ್ಲಿ ಇದ್ದಂತೆ ಮೇಲ್ನೋಟಕ್ಕೆ ಅರಿವಾಗುತ್ತದೆ. ನಾಡಿನಲ್ಲಿ ಶಾಂತಿ ಸುವ್ಯವಸ್ಥೆ ಖಾತ್ರಿ ಪಡಿಸಬೇಕಾದ ಜವಾಬ್ದಾರಿಯ ಸ್ಥಾನದಲ್ಲಿರುವ ಗೃಹಮಂತ್ರಿಗಳು, ಬೊಮ್ಮಾಯಿ ಸಂಪುಟದ ಇತರ ಮಂತ್ರಿಗಳು, ಆಡಳಿತ ನಡೆಸುತ್ತಿರುವ ಬಿಜೆಪಿ ಪಕ್ಷದ ಕೆಲವು ಪ್ರಮುಖರು ನೀಡುತ್ತಿರುವ ಕೆಲವು ಹೇಳಿಕೆಗಳು ರಾಜ್ಯದ ಶಾಂತಿ ಸುವ್ಯವಸ್ಥೆಗೆ ವಿರುದ್ಧವಾಗಿದ್ದು ಜನಜೀವನವನ್ನು ಇನ್ನಷ್ಟು ಗೊಂದಲಮಯ ಗೊಳಿಸುತ್ತದೆ. ಆದ್ದರಿಂದ ರಾಜ್ಯದ ಆಡಳಿತದ ಹೊಣೆಹೊತ್ತವರು ಜವಾಬ್ದಾರಿಯುತವಾಗಿ ವರ್ತಿಸಬೇಕು ಎಂದು ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟವು ರಾಜ್ಯ ಸರಕಾರ ಮತ್ತು ಆಡಳಿತ ಪಕ್ಷವನ್ನು ಆಗ್ರಹಿಸುತ್ತದೆ.

ಸರಕಾರ ಮತ್ತು ಪೋಲಿಸ್ ವ್ಯವಸ್ಥೆ ಜವಾಬ್ದಾರಿಯುತವಾಗಿ ನಡೆದುಕೊಂಡು ಆದಷ್ಟು ಬೇಗ ಕರಾವಳಿಯ ಹಾಗೂ ನಾಡಿನ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಿ ಜನಸಾಮಾನ್ಯರಿಗೆ ಸೂಕ್ತ ಭದ್ರತೆಯನ್ನು ನೀಡಿ ವಾತವರಣವನ್ನು ತಿಳಿಗೊಳಿಸಬೇಕಾಗಿ ಮುಸ್ಲಿಮ್ ಒಕ್ಕೂಟ ಒತ್ತಾಯಿಸುತ್ತದೆ. ಅದೇ ಸಂದರ್ಭದಲ್ಲಿ ಕೊಲೆಗಾರರು ಮತ್ತು ಸಮಾಜದ್ರೋಹಿ ಶಕ್ತಿಗಳ ವಿರುದ್ಧ ತನಿಖೆಯನ್ನು ತೀವ್ರಗೊಳಿಸಿ ತಪ್ಪಿತಸ್ಥರನ್ನು ಕಾರಾಗೃಹಕ್ಕೆ ತಳ್ಳಬೇಕು. ಶಾಂತಿ ಕದಡುವ ಉದ್ರೇಕಕಾರಿ ಭಾಷಣಗಳು, ಹೇಳಿಕೆಗಳ ಮೂಲಕ ಉದ್ವಿಗ್ನತೆ ಸೃಷ್ಟಿಸುವವರು, ಸಾಮಾಜಿಕ ಜಾಲತಾಣಗಳನ್ನು ದ್ವೇಷ ಹರಡಲು ಬಳಸುತ್ತಿರುವವರನ್ನು ಬಂಧಿಸಿ ಕ್ರಮ ಕೈಗೊಳ್ಳಬೇಕು ಎಂದು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷರಾದ ಕೋಟ ಇಬ್ರಾಹಿಂ ಸಾಹೇಬ್ ಆಗ್ರಹಿಸಿದ್ದಾರೆ.

ಇದನ್ನೂ ಓದಿ : ಕಟೀಲು ವಾಹನ ಪಾರ್ಕಿಂಗ್ ಶುಲ್ಕ : ತಾತ್ಕಾಲಿಕ ತಡೆ – Vishwanews24 

Vishwa News 24

Recent Posts

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

28 minutes ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

37 minutes ago

ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! vishwanews24

ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…

53 minutes ago

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ – vishwanews24

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ ಕೊಪ್ಪಳ: ಗೂಡ್ಸ್‌ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…

1 hour ago

ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು – vishwanews24

ಮಲ್ಪೆ ಪ್ರಕರಣ: ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಬೆಂಗಳೂರು: ಕಳೆದ ವರ್ಷ ಮಲ್ಪೆ ಬಂದರಿನಲ್ಲಿ ಕಳ್ಳತನ ಮಾಡಿ…

1 hour ago

ರಾಮಮಂದಿರ ದೇಣಿಗೆ ಅವ್ಯವಹಾರ: SIT ತನಿಖೆ ನಡೆಸುತ್ತಿರುವುದು ಸ್ವಾಗತಾರ್ಹ : ಪೇಜಾವರ ಶ್ರೀ – vishwanews24

ರಾಮ ಮಂದಿರದಲ್ಲಿ ಅವ್ಯವಹಾರದಂತಹ ಘೋರ ಅಪಚಾರಗಳು ನಡೆಯಬಾರದಿತ್ತು.. ಮಂದಿರದ ಅವ್ಯವಹಾರ ಆರೋಪಗಳು ಸತ್ಯವಾಗಿದ್ದರೆ, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು : ಪೇಜಾವರ…

1 hour ago