ಉಡುಪಿ: ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕರ್ನಾಟಕದವರು ಸೇರಿದಂತೆ ಹಲವಾರು ಮಂದಿ ಸಾವನಪ್ಪಿರುವುದು ನೋವಿನ ಸಂಗತಿಯಾಗಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಕಂಬನಿ ಮಿಡಿದಿದ್ದಾರೆ.
ಕಾಲ್ತುಳಿತದ ದುರಂತದಲ್ಲಿ ನಮ್ಮ ಕರ್ನಾಟಕದ ನಾಲ್ವರು ಸೇರಿದಂತೆ ಹಲವರು ಸಾವಿಗೀಡಾಗಿರುವ ಸುದ್ದಿ ತಿಳಿದು ಮನಸ್ಸಿಗೆ ಬಹಳ ನೋವಾಗಿದೆ. ಈ ಸಂದರ್ಭದಲ್ಲಿ ಮೃತರ ಆತ್ಮಗಳಿಗೆ ಶಾಂತಿ ಸಿಗಲೆಂದು ಹಾಗೂ ಕಾಲ್ತುಳಿತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ.
ಮಹಾ ಕುಂಭಮೇಳದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಕನ್ನಡಿಗರ ನೆರವಿಗೆ ಕರ್ನಾಟಕ ರಾಜ್ಯ ಸರ್ಕಾರವು ಸಹಾಯವಾಣಿ ತೆರೆದಿದ್ದು ಸಹಾಯವಾಣಿ ಸಂಖ್ಯೆ 080-22340676 ಕರೆ ಮಾಡಿ ಸಹಾಯ ಪಡೆಯಬಹುದು ಹಾಗೂ ಕಾಲ್ತುಳಿತದಲ್ಲಿ ಗಾಯಗೊಂಡಿರುವ ರಾಜ್ಯದ ಎಲ್ಲಾ ಜನರು ಕ್ಷೇಮವಾಗಿ ರಾಜ್ಯಕ್ಕೆ ಮರಳಿ ಬರಲಿ ಎಂದು ಪ್ರಾರ್ಥಿಸುವುದಾಗಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…