ಉಡುಪಿ: ಉಡುಪಿಯ ಮಲ್ಪೆಯಿಂದ ಮೀನುಗಾರಿಕೆಗೆ ಹೋಗಿದ್ದ ಶ್ರೀಲಕ್ಷ್ಮೀ ಹೆಸರಿನ ಡೀಪ್ ಸೀ ಬೋಟ್ ಮಹಾರಾಷ್ಟ್ರದಲ್ಲಿ ಸೆರೆಯಾಗಿದೆ. ಬೋಟಲ್ಲಿದ್ದ ಏಳು ಮಂದಿ ಮೀನುಗಾರರನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದಾರೆ.
ಶ್ರೀಲಕ್ಷ್ಮೀ ಬೋಟ್ ನ ಕ್ಯಾಪ್ಟನ್ ರಾಮ ಭಟ್ಕಳ ಸೇರಿ ಏಳು ಮಂದಿ ಎರಡು ದಿನಗಳ ಹಿಂದೆ ಮಲ್ಪೆಯಿಂದ ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದರು. ಬೋಟಲ್ಲಿದ್ದ ಏಳೂ ಮಂದಿ ಉತ್ತರ ಕನ್ನಡ ಜಿಲ್ಲೆಯವರು ಎಂಬ ಮಾಹಿತಿ ಇದೆ. ಗೋವಾ ರಾಜ್ಯ ದಾಟಿ ಮಹಾರಾಷ್ಟ್ರ ತಲುಪಿದ್ದ ಬೋಟ್ ಮಾಲ್ವಾನ್ ಸಮುದ್ರ ತಲುಪುತ್ತಿದ್ದಂತೆ ಅಲ್ಲಿನ ಕೋಸ್ಟ್ ಗಾರ್ಡ್ ಪೊಲೀಸರು ಬೋಟ್ ಮತ್ತು ಮೀನುಗಾರರನ್ನು ವಶಕ್ಕೆ ಪಡೆದಿದ್ದಾರೆ. ಮಹಾರಾಷ್ಟ್ರದ ಸಮುದ್ರ ತೀರದಿಂದ ಬೋಟ್ 12 ನಾಟೇಕಲ್ ದೂರ ಹೊರಗಿತ್ತು. ಆದರೂ ಮಹಾರಾಷ್ಟ್ರದ ಮಾಲ್ವಾನ್ ಕೋಸ್ಟ್ ಗಾರ್ಡ್ ಪೊಲೀಸರಿಗೆ ಅಲ್ಲಿನ ಮೀನುಗಾರರು ದೂರು ನೀಡಿದ್ದರಿಂದ ಬಂಧನವಾಗಿದೆ ಎಂದು ಮಲ್ಪೆಯ ಮೀನುಗಾರರು ದೂರಿದ್ದಾರೆ.
ಮಹಾರಾಷ್ಟ್ರ ರಾಜ್ಯದ ಗಡಿಯಿಂದ ಹೊರಗೆ ಅಂದರೆ ಭಾರತ ದೇಶದ ಗಡಿಯೊಳಗೆ ಮೀನುಗಾರಿಕೆ ಮಾಡುತ್ತಿದ್ದ ಬೋಟನ್ನು ಮಾಲ್ವಾನ್ ನ ಸ್ಥಳೀಯ ಮೀನುಗಾರರು ಅಡ್ಡಗಟ್ಟಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಕಳೆದ ನಡುರಾತ್ರಿ 1 ಗಂಟೆಗೆ ಸುಮಾರಿಗೆ ಮೀನುಗಾರರ ಅಕ್ರಮ ಬಂಧನವಾಗಿದೆ. ನಮ್ಮವರು ನಿಯಮದಂತೆ ಮೀನುಗಾರಿಕೆ ಮಾಡಿದರೂ ಅರೆಸ್ಟ್ ಮಾಡಿದ ಮಹಾರಾಷ್ಟ್ರ ಪೊಲೀಸರ ಕ್ರಮವನ್ನು ಉಡುಪಿ ಬೋಟ್ ಚಾಲಕರ ಸಂಘದ ಅಧ್ಯಕ್ಷ ರವಿ ಖಂಡಿಸಿದ್ದಾರೆ. ಕೂಡಲೇ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದ್ದಾರೆ.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ಆತ್ಮಹತ್ಯೆಗೆ ಶರಣಾದ ನವದಂಪತಿ ; ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಂಡು ಪತಿಯೂ ನೇಣಿಗೆ ಶರಣು ತುಮಕೂರು: ಪತ್ನಿ ನೇಣಿಗೆ ಶರಣಾಗಿದ್ದನ್ನು…
ಬೆಂಗಳೂರು: ಡೆತ್ನೋಟ್ ಬರೆದಿಟ್ಟು ನೇಣಿಗೆ ಶರಣಾದ ನವವಿವಾಹಿತೆ ಬೆಂಗಳೂರು:ಸಿಲಿಕಾನ್ ಸಿಟಿಯಲ್ಲಿ ನವವಿವಾಹಿತೆಯೊಬ್ಬರು ಮನೆಯಲ್ಲಿ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ…
ಗಾನಕೋಗಿಲೆ ಎಸ್.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…
ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…
ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…
ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್ಎಎಫ್ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…